Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...