Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...