Homeಕರ್ನಾಟಕಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಮಾರ್ಕೋನಹಳ್ಳಿ ಅಣೆಕಟ್ಟಿನ ಡೆಡ್ ಸ್ಟೋರೇಜ್‍ಗೆ ಕೈಹಾಕಿದ ಚುಂಚನಗಿರಿ ಸ್ವಾಮಿ: ತೀವ್ರ ವಿರೋಧ

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ

- Advertisement -
- Advertisement -

ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಹೊಸದೊಂದು ವಿವಾದ ಹುಟ್ಟುಹಾಕಿದೆ. ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕನ್ನ ಹಾಕಲು ಹೊರಟ ಕ್ರಮ ಕುಣಿಗಲ್ ಜನರನ್ನು ಕೆರಳುವಂತೆ ಮಾಡಿದೆ. ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ತೆಗೆದುಕೊಂಡು ಹೋಗಲು ಯಾರ ತಕರಾರು ಇಲ್ಲ. ಆದರೆ ರಾಷ್ಟ್ರೀಯ ಹಸಿರುಪೀಠದ ರೂಪಿಸಿರುವ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ನೀರು ತೆಗೆದುಕೊಂಡು ಹೋಗಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ ಮಾತ್ರವಲ್ಲ ದೊಡ್ಡ ಹೋರಾಟಕ್ಕೆ ನಾಂದಿಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನ ಮಾರ್ಕೋನಹಳ್ಳಿಯಲ್ಲಿರುವ ಯಾವುದೇ ನದಿಮೂಲಗಳಿಲ್ಲದ ಮಳೆಯನ್ನೇ ಆಶ್ರಯಿಸಿರುವ ಡ್ಯಾಂ ಇದು. ಈ ಡ್ಯಾಂ ನೀರಿನ ಸಂಗ್ರಹ ಸಾಮಥ್ರ್ಯ 2.4 ಟಿಎಂಸಿ ಅಡಿ. ಜಲಾಶಯದ ನೀರನ್ನು ಕುಣಿಗಲ್ ಮತ್ತು ನಾಗಮಂಗಲ ತಾಲೂಕಿನ ರೈತರು ಇಲ್ಲಿಯವರೆಗೂ ಸೌಹಾರ್ದಯುತವಾಗಿ ಬಳಸಿಕೊಂಡು ಬಂದಿದ್ದಾರೆ.

ಮಾರ್ಕೋನಹಳ್ಳಿ ಜಲಾಶಯದ ಒಟ್ಟು ಅಚ್ಚುಕಟ್ಟು ಪ್ರದೇಶ 5996 ಹೆಕ್ಟೇರ್. ಇದರಲ್ಲಿ ಕುಣಿಗಲ್ 4856 ಹೆಕ್ಟೇರ್ ಅಂದರೆ ಸರಿಸುಮಾರು 12 ಸಾವಿರ ಎಕರೆ ನೀರಾವರಿ ಹೊಂದಿದೆ. ನಾಗಮಂಗಲ ತಾಲೂಕಿನಲ್ಲಿ 1130 ಹೆಕ್ಟೇರ್ ಅಂದರೆ 3 ಸಾವಿರ ಎಕರೆ ಭೂಮಿ ನೀರಾವರಿಗೆ ಒಳಪಟ್ಟಿದೆ. ಉಭಯ ತಾಲೂಕಿನ ರೈತರು ನೀರಿಗಾಗಿ ಈ ಹಿಂದೆ ಎಂದೂ ತಕರಾರು ತೆಗೆದವರಲ್ಲ. ಜಗಳ ಆಡಿದವರಲ್ಲ. ಆದರೆ ಈಗ ಉಭಯ ತಾಲೂಕುಗಳ ನಡುವೆ ಸಣ್ಣ ಒಡಕು ಮೂಡಿದೆ. ಇದಕ್ಕೆ ಕಾರಣ ಮಾರ್ಕೋನಹಳ್ಳಿ ಜಲಾಶಯದಿಂದ ನಾಗಮಂಗಲದ ಚುಂಚನಗಿರಿ ಮತ್ತು 128 ಹಳ್ಳಿಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುವುದು. ಹೀಗೆ ನೀರು ತೆಗೆದು ಕೊಂಡು ಹೋಗುವುದು ವೈಜ್ಞಾನಿಕವಾಗಿದ್ದರೆ ಅದಕ್ಕೆ ಕುಣಿಗಲ್ ಜನ ವಿರೋಧಿಸುತ್ತಿರಲಿಲ್ಲ. ಜಲಾಶಯದ ಕೋಡಿ ಭಾಗದ ಮಿನಿ ಸೈಪಾನ್ ಇರುವ ಜಾಗದಲ್ಲಿ 80 ಜಾಕ್ವೆಲ್ ನಿರ್ಮಿಸಿ ಮೋಟರ್ ಕೂರಿಸಿ ನೀರು ಪಂಪ್ ಮಾಡಲು ಹೊರಟ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ 2012ರಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿಗಳು ವಿಶೇಷ ಆಸಕ್ತಿ ವಹಿಸಿ ಮಾರ್ಕೋನಹಳ್ಳಿ ಡ್ಯಾಂನಿಂದ ನಾಗಮಂಗಲಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ ದೊರಕುವಂತೆ ಮಾಡಿದರು. ನಂತರ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಮಗಾರಿಗೆ ಹಣ ಬಿಡುಗಡೆ ಮಾಡಿದರು. ಡ್ಯಾಂನಲ್ಲಿ ಜಾಕ್ವೆಲ್ ಮಾಡುವುದಕ್ಕೆ ವಿರೋಧ ವ್ಯಕ್ತವಾದ ನಂತರ ಅಧಿಕಾರಿಗಳು ಕಾಮಗಾರಿ ನಿಲ್ಲಿಸಿದರು. ಒಳಗೊಳಗೆ ನಾಗಮಂಗಲದ ಕಡೆಯಿಂದ ಪೈಪ್ ಕಾಮಗಾರಿ ಆರಂಭಿಸಿ ಶೇಕಡ 90ರಷ್ಟು ಕಾಮಗಾರಿ ಪೂರ್ಣಗೊಳಿಸಿದರು. ಪೈಪ್‍ಲೈನ್ ಕಾಮಗಾರಿ ಯಾರ ಗಮನಕ್ಕೆ ಬರದಂತೆ ಮಾಡಲಾಯಿತು. ಯಾವಾಗ ಡ್ಯಾಂನ ಕೋಡಿಯಲ್ಲಿ ನಿರ್ಮಿಸಲಾಗಿರುವ ಸೈಫನ್ ಬಳಿ 80 ಅಡಿ ಅಳಕ್ಕೆ ದೊಡ್ಡ ಗುಂಡಿ ತೋಡಿ ಮೋಟರ್ ಪಂಪ್ ಅಳವಡಿಸಲು ಮುಂದಾದರೋ ಕುಣಿಗಲ್ ಜನ ಅದನ್ನು ತಡೆದು ನಿಲ್ಲಿಸಿದ್ದಾರೆ.

ಕುಣಿಗಲ್ ಜನ ಹೇಳುವ ಮಾತು ಒಂದೇ. ನಾವು ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಡ್ಯಾಂನಲ್ಲೇ ಜಾಕ್ವೆಲ್ ನಿರ್ಮಿಸುವುದು ಎಷ್ಟು ಸರಿ. ಮಾರ್ಕೋನಹಳ್ಳಿ ಡ್ಯಾಂಗೆ ಯಾವುದೇ ನೀರಿನ ಅಲಾಟ್ಮೆಂಟ್ ಇಲ್ಲ. ನಾಗಮಂಗಲಕ್ಕೆ ಎನ್.ಬಿ.ಸಿ ಮತ್ತು ಎಸ್.ಬಿ.ಸಿ (ನಾಗಮಂಗಲ ಬ್ಯಾಂಕ್ ಕೆನಾಲ್, ಶ್ರವಣಬೆಳಗೊಳ ಬ್ಯಾಂಕ್ ಕೆನಾಲ್) ಎರಡೂ ಕಡೆಯಿಂದಲೂ ಕುಡಿಯುವ ನೀರು ಬರುತ್ತದೆ. ಎರಡು ಕೆನಾಲ್‍ಗಳಿಂದ ಬರುವ ಹೇಮಾವತಿಯ ನೀರನ್ನು ನಾಗಮಂಗಲದ ಹಲವು ಕೆರೆಗಳಿಗೆ ತುಂಬಿಸಿಕೊಳ್ಳಲಾಗುತ್ತಿದೆ. ಹೀಗಿದ್ದರೂ ನಾಗಮಂಗಲಕ್ಕೆ ಡ್ಯಾಂನಿಂದ ಡೆಡ್ ಸ್ಟೋರೇಜ್ ಇರುವ 140 ಎಂಸಿಎಫ್‍ಟಿನಲ್ಲಿ ನೀರು ತೆಗೆದುಕೊಂಡು ಹೋಗುವ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಆದಿಚುಂಚನಗಿರಿ ಶ್ರೀಗಳ ಚಿತಾವಣೆ?

ಆದಿಚುಂಚನಗಿರಿಯಲ್ಲಿ ವಿಶ್ವವಿದ್ಯಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನೀರು ಬೇಕು. ಹಾಗಾಗಿ ಮಾರ್ಕೋನಹಳ್ಳಿ ಡ್ಯಾಂ ನೀರನ್ನು ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನೀರಿನ ಕೊರತೆ ಆಗಬಾರದೆಂಬ ದೂರದೃಷ್ಟಿ ಶ್ರೀಗಳದ್ದು. ಆ ಕಾರಣಕ್ಕಾಗಿಯೇ ಎಲ್ಲರನ್ನು ಕತ್ತಲಲ್ಲಿಟ್ಟು ಕಾಮಗಾರಿ ಪೂರ್ಣ ಮಾಡಲಾಗಿದೆ. ಎಲ್ಲ ಪಕ್ಷಗಳ ನಾಯಕರು ಒಳಗೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂಬ ಆರೋಪವಿದೆ.

100 ಎಂಸಿಎಫ್‍ಟಿ ನೀರು ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಅದೂ ಡ್ಯಾಂನ ಡೆಡ್ ಸ್ಟೋರೇಜ್ ನೀರಿನಿಂದ. ಚುಂಚನಗಿರಿ ಸ್ವಾಮಿಗಳನ್ನು ಯಾರೂ ಎದುರು ಹಾಕಿಕೊಳ್ಳಲು ಮುಂದಾಗುತ್ತಿಲ್ಲ. ಆದರೆ ಅಕ್ಟೋಬರ್ 30 ರಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕುಣಿಗಲ್ ಬಂದ್‍ಗೆ ಬೆಂಬಲ ನೀಡಿದ್ದಾರೆ. ಕಾಮಗಾರಿ ಪೂರ್ಣವಾಗುವವರೆ ಸುಮ್ಮನಿದ್ದು ಈ ದಿಢೀರ್ ಎದ್ದು ಕೂತರೆ ಏನೂ ಆಗುವುದಿಲ್ಲ. ಗ್ರಾಮ ಪಂಚಾಯತ್ ಚುನಾವಣೆ ಎದುರಾಗಿರುವುದರಿಂದ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ರಾಜಕೀಯ ಪಕ್ಷಗಳು ಬಂದ್‍ಗೆ ಸಮ್ಮತಿಸಿವೆ ಎಂದು ಹೇಳಲಾಗುತ್ತಿದೆ. ಆದರೆ ಬಂದ್‍ಗೆ ರಾಜ್ಯ ರೈತಸಂಘ, ತಾಲೂಕಿನ ವಿವಿಧ ಸಂಘ ಸಂಸ್ಥೆಗಳು ಕೂಡ ಬೆಂಬಲಿಸಿವೆ.

ಡ್ಯಾಂನ ಡೆಡ್ ಸ್ಟೋರೇಜ್‍ಗೆ ಕೈ ಹಾಕುವುದರಿಂದ ಅಣೆಕಟ್ಟೆಗೆ ಹೊಡೆತ ಬೀಳಲಿದೆ. ಕುಣಿಗಲ್ ತಾಲೂಕಿನ ಅಮೃತೂರು, ಹುಲಿಯೂರು ದುರ್ಗ, ಎಡೆಯೂರು ಮತ್ತು ನಾಗಮಂಗಲದ ಸಾವಿರಾರು ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಆದಿಚುಂಚನಗಿರಿ ಶ್ರೀಗಳು ಸ್ವಾರ್ಥಕ್ಕಾಗಿ ನೀರು ತೆಗೆದುಕೊಂಡು ಹೋಗುತ್ತಿರುವುದು ಸಾವಿರಾರು ರೈತ ಕುಟುಂಬಗಳು ಬೀದಿಗೆ ಬೀಳಲಿವೆ. ಆದರೆ ಸ್ವಾಮಿಗಳನ್ನು ಎದುರುಹಾಕಿಕೊಳ್ಳಲು ರಾಜಕಾರಣಿಗಳು ಸಿದ್ದರಿಲ್ಲ. ಬದಲಿಗೆ ಜನರೇ ಬೀದಿಗೆ ಇಳಿದಿದ್ದಾರೆ. ಈ ಹೋರಾಟ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...