Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...