Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...