Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...