Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...