Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...