Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...