Homeಅಂತರಾಷ್ಟ್ರೀಯಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಫ್ರಾನ್ಸ್‌ ಚರ್ಚ್‌ ದಾಳಿ: ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ; ಮಲೇಷ್ಯಾ ಮಾಜಿ ಪ್ರಧಾನಿ!

ಮಹತೀರ್‍ ಮಹಮ್ಮದ್ ಮಾಡಿರುವ ಟ್ವೀಟ್‌ಗಳನ್ನು ಟ್ವಿಟ್ಟರ್‌ ಕಂಪನಿಯು ತೆಗೆದುಹಾಕಿದೆ. ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಿ ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಫ್ರಾನ್ಸ್‌ನ ಚರ್ಚ್‌‌ನಲ್ಲಿ ನಿನ್ನೆ ನಡೆದ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಮಲೇಷ್ಯಾ ಮಾಜಿ ಪ್ರಧಾನಿ ಮಹತೀರ್ ಮೊಹಮದ್ ಅವರ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದುಹಾಕಿದ್ದು, ಟ್ವಿಟ್ಟರ್ ಕಂಪನಿಯು ಅವರನ್ನು ತನ್ನ ವೇದಿಕೆಯಿಂದ ನಿಷೇಧಿಸಬೇಕು ಎಂದು ಫ್ರಾನ್ಸ್‌ನ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

“ಮಹತೀರ್ ಮೊಹಮದ್ ಅವರ ಖಾತೆಯನ್ನು ತಕ್ಷಣವೇ ನಿಷ್ಕ್ರಿಯಗೊಳಿಸಬೇಕು ಎಂದು ಫ್ರಾನ್ಸ್‌ನ ಟ್ವಿಟರ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ತೆಗೆದುಹಾಕದಿದ್ದರೆ, ಟ್ವಿಟ್ಟರ್ ಕಂಪನಿ ಈ ಕೊಲೆಗೆ ಔಪಚಾರಿಕ ಕರೆ ನೀಡಿದಂತಾಗುತ್ತದೆ” ಎಂದು ಸೆಡ್ರಿಕ್ ಒ ಹೇಳಿದ್ದಾರೆ.

“ಮುಸ್ಲಿಂ ಉಗ್ರಗಾಮಿಗಳ ದಾಳಿಗೆ ಫ್ರೆಂಚ್ ಅಧಿಕಾರಿಗಳು ಕಾರಣ. ಫ್ರೆಂಚ್ ಜನರ ಸಾವು ಸಮರ್ಥನೀಯ” ಎಂದು 95 ವರ್ಷದ ಮಲೇಷ್ಯಾ ಮಾಜಿ ಪ್ರಧಾನ ಮಂತ್ರಿ ಮಹತೀರ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ: ಶ್ರೀಲಂಕಾ ದಾಳಿಯ ಹಿನ್ನೆಲೆಯಲ್ಲಿ

ಈ ತಿಂಗಳ ಆರಂಭದಲ್ಲಿ ಪ್ರವಾದಿ ಮುಹಮ್ಮದ್ ವ್ಯಂಗ್ಯಚಿತ್ರಗಳನ್ನು ತರಗತಿಗಳಲ್ಲಿ ತೋರಿಸಿದ ಮಾಧ್ಯಮಿಕ ಶಾಲಾ ಶಿಕ್ಷಕನ ಶಿರಚ್ಚೇಧದ ಕುರಿತು ಹೇಳುತ್ತಾ “ಕೋಪಗೊಳ್ಳಲು ಮತ್ತು ಹಿಂದಿನ ಹತ್ಯಾಕಾಂಡಗಳಿಗಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಹಕ್ಕು ಮುಸ್ಲಿಮರಿಗಿದೆ” ಎಂದು ಅವರು ಗುರುವಾರ ಟ್ವೀಟ್‌ಗಳ ಸರಣಿಯಲ್ಲಿ ಹೇಳಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಈ ಟ್ವೀಟ್ ಹಿಂಸೆಯನ್ನು ಪ್ರಚೋದಿಸುತ್ತದೆ ಎಂದು ಕಂಪನಿಯು ಇದನ್ನು ತೆಗೆದುಹಾಕಿದೆ. ಮಹಾತಿರ್ ಎರಡು ಬಾರಿ ಪ್ರಧಾನಿಯಾಗಿದ್ದರು.

ನಿನ್ನೆ ಫ್ರಾನ್ಸ್‌ನ‌ ಚರ್ಚ್‌‌ನಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಚಾಕು ಹಿಡಿದ ದಾಳಿಕೋರನೊಬ್ಬ ”ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಾ ಅಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ 3 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ: ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ನಿನ್ನೆ ಬೆಳಿಗ್ಗೆ ನಡೆದ ದಾಳಿಯ ನಂತರ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ಗಾಯಗೊಂಡಿದ್ದ ಆರೋಪಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆತ ಏಕಾಂಗಿಯಾಗಿ ಇಂತಹ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸ್ ‌ನಗರದ ಚರ್ಚ್‌ನಲ್ಲಿ ನಡೆದ ಈ ಭಯೋತ್ಪಾದಕ ಘಟನೆಯಲ್ಲಿ “ಅಲ್ಲಾಹು ಅಕ್ಬರ್‌” ಎಂದು ಕೂಗುತ್ತಿರುವ ದಾಳಿಕೋರನೊಬ್ಬ ಚಾಕುವಿನಿಂದ ಮಹಿಳೆಯೊಬ್ಬಳ ಶಿರಚ್ಚೇದನ ಮಾಡಿದ್ದಾನೆ. ಜೊತೆಗೆ ಇತರ ಇಬ್ಬರು ಕೊಲ್ಲಲ್ಪಟ್ಟಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ನಂತರವೂ ದಾಳಿಕೋರನು “ಅಲ್ಲಾಹು ಅಕ್ಬರ್‌” ಎಂಬ ಪದವನ್ನು ಪದೇ ಪದೇ ಕೂಗಿದ್ದಾನೆ.

ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ಈ ದಾಳಿಯನ್ನು ಭಯೋತ್ಪಾದಕತೆ ಎಂದು ಬಣ್ಣಿಸಿದ ನೈಸ್‌ ನಗರದ ಮೇಯರ್ ಕ್ರಿಶ್ಚಿಯನ್ ಎಸ್ಟ್ರೋಸಿ ತಮ್ಮ ಟ್ವಿಟರ್‌ನಲ್ಲಿ, “ಇದು ನಗರದ ನೊಟ್ರೆಡೇಮ್ ಚರ್ಚ್‌ನಲ್ಲಿ ಸಂಭವಿಸಿದೆ. ಚರ್ಚ್ ಒಳಗೆ ಕೊಲ್ಲಲ್ಪಟ್ಟ ಜನರಲ್ಲಿ ಒಬ್ಬರು ಚರ್ಚ್ ವಾರ್ಡನ್ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ಚರ್ಚ್ ಒಳಗಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಕಟ್ಟಡದ ಎದುರಿನ ಬಾರ್‌ಗೆ ಓಡಿಹೋದರು. ಚಾಕು ದಾಳಿಕೋರನನ್ನು ವಶಕ್ಕೆ ತೆಗೆದುಕೊಳ್ಳುವಾಗ ಪೊಲೀಸರು ಗುಂಡು ಹಾರಿಸಿದ್ದಾರೆ” ಎಂದು ಹೇಳಿದ್ದಾರೆ.

“ಸಾಕು, ಇನ್ನು ಸಾಕು. ನಮ್ಮ ಪ್ರದೇಶದಿಂದ ಇಸ್ಲಾಮೋ-ಫ್ಯಾಸಿಸಂ ಅನ್ನು ಖಚಿತವಾಗಿ ತೊಡೆದುಹಾಕಲು ಮತ್ತು ಹಿಂಸೆಯಿಂದ ಫ್ರಾನ್ಸ್ ಮುಕ್ತವಾಗಲು ಈಗ ಸಮಯ ಬಂದಿದೆ” ಎಂದು ಮೇಯರ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ತಿಂಗಳ ಆರಂಭದಲ್ಲಿ ಇಂತಹದ್ದೇ ಘಟನೆಯೊಂದು ಪ್ಯಾರಿಸ್ ಉಪನಗರದಲ್ಲಿ ವರದಿಯಾಗಿದ್ದು, ವಿದ್ಯಾರ್ಥಿಯಿಂದಲೇ ಶಿಕ್ಷಕನ ಮೇಲಿನ ಹಲ್ಲೆ ಮತ್ತು ಶಿರಚ್ಚೇದನ ನಡೆದಿತ್ತು. ಇಂದಿನ ಈ ದಾಳಿ ಇದಕ್ಕೆ ಸಂಪೂರ್ಣ ‌‌‌‌‌‌‌‌‌‌‌‌‌‌‌‌‌‌‌‌ಹೊಂ‌‌‌‌‌‌‌‌‌‌‌ದಿಕೆಯಾಗುತ್ತದೆ.


ಇದನ್ನೂ ಓದಿ: ಬಲಪಂಥೀಯ ಭಯೋತ್ಪಾದನೆಯ ಬೇರುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...