Homeಮುಖಪುಟಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

ಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

- Advertisement -
- Advertisement -

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮಿಜೋರಾಂನಲ್ಲಿ ಮತ ಎಣಿಕೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಕ್ರಿಶ್ಚಿಯನ್‌ ಸಮುದಾಯದ ಜನರು ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಡಿಸೆಂಬರ್ 3ರ ಭಾನುವಾರ ಕ್ರಿಶ್ಚಿಯನ್ನರ ಆರಾಧನೆಯ ದಿನ. ಚುನಾವಣಾ ದಿನಾಂಕಗಳನ್ನು ಆಯ್ಕೆಮಾಡುವಾಗ ಭಾರತೀಯ ಚುನಾವಣಾ ಆಯೋಗವು (ಇಸಿಐ) ಸಾಮಾನ್ಯವಾಗಿ ವಿಶೇಷ ದಿನಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆಯಾದರೂ ಚುನಾವಣಾ ಆಯೋಗ ಮಿಜೋರಾಂ ವಿಚಾರದಲ್ಲಿ ಎಡವಿದೆ ಎಂದು ಕ್ರಿಶ್ಚಿಯನ್ ಸಮುದಾಯ ಹೇಳಿಕೊಂಡಿದೆ.

ಮಿಜೋರಾಂನಲ್ಲಿ ಮತ ಎಣಿಕೆ ದಿನವನ್ನು ಒಂದು ಅಥವಾ ಎರಡು ದಿನ ಮುಂದೂಡುವಂತೆ ಹಲವಾರು ನಾಗರಿಕ ಸಮಾಜ ಗುಂಪುಗಳು, ರಾಜಕೀಯ ಪಕ್ಷಗಳು ಮತ್ತು ಚರ್ಚ್‌ಗಳ ಮನವಿಯನ್ನು ಸ್ವೀಕರಿಸಲಾಗಿಲ್ಲ. ರಾಜಸ್ಥಾನದಲ್ಲಿ ನ.23ರಂದು ವಿಧಾನಸಭೆ ಚುನಾವಣೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ವಿವಾಹ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ಚುನಾವಣೆಯನ್ನು ಈ ಮೊದಲು ನ.25ಕ್ಕೆ ಮುಂದೂಡಿತ್ತು.

ರಾಜ್ಯದ 15 ಪ್ರಮುಖ ಚರ್ಚ್‌ಗಳ ಒಕ್ಕೂಟವಾದ ಮಿಜೋರಾಂ ಕೊಹ್ರಾನ್ ಹ್ರೂಯಿಟ್ಯೂಟ್ ಕಮಿಟಿ (MKHC), ಈ ಹಿಂದಿನ ಶನಿವಾರ ಎಲ್ಲಾ ಚರ್ಚ್‌ಗಳಲ್ಲಿ ಮತ ಎಣಿಕೆ ದಿನಾಂಕದ ಬದಲಾವಣೆಗೆ ದೇವರಲ್ಲಿ ಪ್ರಾರ್ಥನೆ ನಡೆಸಿದ್ದಾರೆ. ರಾಜ್ಯದ ಅತಿದೊಡ್ಡ ಪಂಗಡವಾದ ಮಿಜೋರಾಂ ಪ್ರೆಸ್ಬಿಟೇರಿಯನ್ ಚರ್ಚ್ ಕೂಡ ಪ್ರತ್ಯೇಕವಾಗಿ ಚುನಾವಣಾ ಆಯೋಗ ಮತ ಎಣಿಕೆಯ ದಿನಾಂಕವನ್ನು ಬದಲಿಸಲಿ ಎಂದು ದೇವರ ಮೊರೆ ಹೋಗಿದ್ದಾರೆ.

ಎನ್‌ಜಿಒ ಸಮನ್ವಯ ಸಮಿತಿಯ (ಎನ್‌ಜಿಒಸಿಸಿ) ಐದು ಸದಸ್ಯರ ನಿಯೋಗವು ಮುಖ್ಯ ಚುನಾವಣಾ ಆಯುಕ್ತರೊಂದಿಗೆ (ಸಿಇಸಿ) ಅಪಾಯಿಂಟ್‌ಮೆಂಟ್ ಪಡೆಯಲು ಕಳೆದ ವಾರದಿಂದ ನವದೆಹಲಿಯಲ್ಲಿ ತಂಗಿದ್ದಾರೆ. ಸಿಇಸಿ ಕಚೇರಿಯು ನ.28 ರಂದು ನಿಯೋಗಕ್ಕೆ ಸಮಯ ನೀಡಿದೆ ಎಂದು ಸುದ್ದಿ ವರದಿಗಳು ತಿಳಿಸಿವೆ.

ನಿಗದಿಯಂತೆ ಡಿ.3ರಂದು ಮತ ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಮತ ಎಣಿಕೆ ಕಾರ್ಯದಲ್ಲಿ 4,000ಕ್ಕೂ ಹೆಚ್ಚು ಎಣಿಕೆ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಎಚ್. ಲಿಯಾಂಜೆಲಾ ಅವರನ್ನು ಉಲ್ಲೇಖಿಸಿ ಮಿಜೋರಾಂ ಪೋಸ್ಟ್ ವರದಿ ತಿಳಿಸಿದೆ. ಮತ ಎಣಿಕೆಗೆ ಒಟ್ಟು 13 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನ.29ರಂದು ಮತ ಎಣಿಕೆಗೆ ಮಾಡಿಕೊಂಡ ಸಿದ್ದತೆ ಕುರಿತು ಪರಿಶೀಲನೆ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮಧುಪ್ ವ್ಯಾಸ್ ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...