Homeಮುಖಪುಟಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

ಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

- Advertisement -
- Advertisement -

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮಿಜೋರಾಂನಲ್ಲಿ ಮತ ಎಣಿಕೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಕ್ರಿಶ್ಚಿಯನ್‌ ಸಮುದಾಯದ ಜನರು ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಡಿಸೆಂಬರ್ 3ರ ಭಾನುವಾರ ಕ್ರಿಶ್ಚಿಯನ್ನರ ಆರಾಧನೆಯ ದಿನ. ಚುನಾವಣಾ ದಿನಾಂಕಗಳನ್ನು ಆಯ್ಕೆಮಾಡುವಾಗ ಭಾರತೀಯ ಚುನಾವಣಾ ಆಯೋಗವು (ಇಸಿಐ) ಸಾಮಾನ್ಯವಾಗಿ ವಿಶೇಷ ದಿನಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆಯಾದರೂ ಚುನಾವಣಾ ಆಯೋಗ ಮಿಜೋರಾಂ ವಿಚಾರದಲ್ಲಿ ಎಡವಿದೆ ಎಂದು ಕ್ರಿಶ್ಚಿಯನ್ ಸಮುದಾಯ ಹೇಳಿಕೊಂಡಿದೆ.

ಮಿಜೋರಾಂನಲ್ಲಿ ಮತ ಎಣಿಕೆ ದಿನವನ್ನು ಒಂದು ಅಥವಾ ಎರಡು ದಿನ ಮುಂದೂಡುವಂತೆ ಹಲವಾರು ನಾಗರಿಕ ಸಮಾಜ ಗುಂಪುಗಳು, ರಾಜಕೀಯ ಪಕ್ಷಗಳು ಮತ್ತು ಚರ್ಚ್‌ಗಳ ಮನವಿಯನ್ನು ಸ್ವೀಕರಿಸಲಾಗಿಲ್ಲ. ರಾಜಸ್ಥಾನದಲ್ಲಿ ನ.23ರಂದು ವಿಧಾನಸಭೆ ಚುನಾವಣೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ವಿವಾಹ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ಚುನಾವಣೆಯನ್ನು ಈ ಮೊದಲು ನ.25ಕ್ಕೆ ಮುಂದೂಡಿತ್ತು.

ರಾಜ್ಯದ 15 ಪ್ರಮುಖ ಚರ್ಚ್‌ಗಳ ಒಕ್ಕೂಟವಾದ ಮಿಜೋರಾಂ ಕೊಹ್ರಾನ್ ಹ್ರೂಯಿಟ್ಯೂಟ್ ಕಮಿಟಿ (MKHC), ಈ ಹಿಂದಿನ ಶನಿವಾರ ಎಲ್ಲಾ ಚರ್ಚ್‌ಗಳಲ್ಲಿ ಮತ ಎಣಿಕೆ ದಿನಾಂಕದ ಬದಲಾವಣೆಗೆ ದೇವರಲ್ಲಿ ಪ್ರಾರ್ಥನೆ ನಡೆಸಿದ್ದಾರೆ. ರಾಜ್ಯದ ಅತಿದೊಡ್ಡ ಪಂಗಡವಾದ ಮಿಜೋರಾಂ ಪ್ರೆಸ್ಬಿಟೇರಿಯನ್ ಚರ್ಚ್ ಕೂಡ ಪ್ರತ್ಯೇಕವಾಗಿ ಚುನಾವಣಾ ಆಯೋಗ ಮತ ಎಣಿಕೆಯ ದಿನಾಂಕವನ್ನು ಬದಲಿಸಲಿ ಎಂದು ದೇವರ ಮೊರೆ ಹೋಗಿದ್ದಾರೆ.

ಎನ್‌ಜಿಒ ಸಮನ್ವಯ ಸಮಿತಿಯ (ಎನ್‌ಜಿಒಸಿಸಿ) ಐದು ಸದಸ್ಯರ ನಿಯೋಗವು ಮುಖ್ಯ ಚುನಾವಣಾ ಆಯುಕ್ತರೊಂದಿಗೆ (ಸಿಇಸಿ) ಅಪಾಯಿಂಟ್‌ಮೆಂಟ್ ಪಡೆಯಲು ಕಳೆದ ವಾರದಿಂದ ನವದೆಹಲಿಯಲ್ಲಿ ತಂಗಿದ್ದಾರೆ. ಸಿಇಸಿ ಕಚೇರಿಯು ನ.28 ರಂದು ನಿಯೋಗಕ್ಕೆ ಸಮಯ ನೀಡಿದೆ ಎಂದು ಸುದ್ದಿ ವರದಿಗಳು ತಿಳಿಸಿವೆ.

ನಿಗದಿಯಂತೆ ಡಿ.3ರಂದು ಮತ ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಮತ ಎಣಿಕೆ ಕಾರ್ಯದಲ್ಲಿ 4,000ಕ್ಕೂ ಹೆಚ್ಚು ಎಣಿಕೆ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಎಚ್. ಲಿಯಾಂಜೆಲಾ ಅವರನ್ನು ಉಲ್ಲೇಖಿಸಿ ಮಿಜೋರಾಂ ಪೋಸ್ಟ್ ವರದಿ ತಿಳಿಸಿದೆ. ಮತ ಎಣಿಕೆಗೆ ಒಟ್ಟು 13 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನ.29ರಂದು ಮತ ಎಣಿಕೆಗೆ ಮಾಡಿಕೊಂಡ ಸಿದ್ದತೆ ಕುರಿತು ಪರಿಶೀಲನೆ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮಧುಪ್ ವ್ಯಾಸ್ ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...