Homeಮುಖಪುಟಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ನೇಮಕಾತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಅ.27) ನಿರಾಕರಿಸಿದೆ.

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಾರದರ್ಶಕ ನೇಮಕಾತಿಗಳಿಗಾಗಿ ನ್ಯಾಯಾಲಯವು ಈ ಹಿಂದೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕೇಂದ್ರವು ಅನುಸರಿಸುತ್ತದೆ ಎಂಬುದರಲ್ಲಿ ‘ಸಂದೇಹಪಡಲು ಯಾವುದೇ ಕಾರಣಗಳಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರ ಮತ್ತು ರಾಜ್ಯ ಮಾಹಿತಿ ಆಯೋಗಗಳ ನೇಮಕಾತಿಗಳಲ್ಲಿ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಕುರಿತು ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ವಕೀಲ ಪ್ರಶಾಂತ್ ಭೂಷಣ್ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ವಿಚಾರಣೆ ನಡೆಸಿದೆ.

ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಈ ಹಿಂದೆ ಆದೇಶಗಳನ್ನು ನೀಡಿದ್ದರೂ, ಸರ್ಕಾರ ಕರ್ತವ್ಯಲೋಪ ಎಸಗಿದೆ ಎಂದು ಭೂಷಣ್ ವಾದಿಸಿದ್ದರು.

“ಜನವರಿ 7ರಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಒಂದು ನಿರ್ದೇಶನ ನೀಡಿತ್ತು. ಅದರಲ್ಲಿ ‘ಶೋಧ ಸಮಿತಿಯ ಸದಸ್ಯರ ಹೆಸರುಗಳು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ’ಯನ್ನು ಬಹಿರಂಗಪಡಿಸುವಂತೆ ಸೂಚಿಸಲಾಗಿತ್ತು. ಮತ್ತಷ್ಟು, ಈ ವಿವರಗಳನ್ನು ‘ಅಂಜಲಿ ಭಾರದ್ವಾಜ್ ಪ್ರಕರಣದಲ್ಲಿ ಈ ನ್ಯಾಯಾಲಯವು ನೀಡಿದ ನಿರ್ದೇಶನಗಳ ಪ್ರಕಾರ ಅಧಿಸೂಚನೆ ಮಾಡಬೇಕು’ ಎಂದು ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಈ ನಿರ್ದೇಶನಗಳನ್ನು ಉಲ್ಲಂಘಿಸಿ ವರ್ತಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, “ಶೋಧನಾ ಸಮಿತಿಯು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಚಿವರನ್ನು ಒಳಗೊಂಡ ಆಯ್ಕೆ ಸಮಿತಿಯು ನೇಮಕಾತಿಗಳನ್ನು ಮಾಡುತ್ತದೆ” ಎಂದು ಪೀಠಕ್ಕೆ ತಿಳಿಸಿದ್ದರು. “ಸಂಪೂರ್ಣ ನೇಮಕಾತಿ ಪ್ರಕ್ರಿಯೆಯು ಎರಡರಿಂದ ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ಭರವಸೆ ನೀಡಿದ್ದರು.

ಇದಕ್ಕೆ, ಹಿಂದಿನ ತೀರ್ಪುಗಳ ಹೊರತಾಗಿಯೂ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಹೆಸರುಗಳು ಮತ್ತು ಅವರನ್ನು ಆಯ್ಕೆ ಮಾಡುವ ಮಾನದಂಡಗಳನ್ನು ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಭೂಷಣ್ ಪ್ರತಿಕ್ರಿಯೆ ನೀಡಿದ್ದರು.

“ನೇಮಕಾತಿ ಮಾಡುವ ಮೊದಲು ಅವರು ಶಾರ್ಟ್‌ಲಿಸ್ಟ್ ಮಾಡುವ ಮಾನದಂಡಗಳನ್ನು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಬೇಕು” ಎಂದು ಭೂಷಣ್ ಆಗ್ರಹಿಸಿದ್ದರು. “ಅರ್ಜಿ ಸಲ್ಲಿಸದ ವ್ಯಕ್ತಿಯನ್ನು ಕೂಡ ನೇಮಿಸಬಹುದು ಎಂದು ಅವರು ಹೇಳುತ್ತಿದ್ದಾರೆ. ಆರ್‌ಟಿಐ ಕಾಯ್ದೆಯಲ್ಲಿ ಯಾವುದೇ ಪೂರ್ವ ಅನುಭವವಿಲ್ಲದ ಪತ್ರಕರ್ತರೊಬ್ಬರನ್ನು ಸರ್ಕಾರವನ್ನು ಹೊಗಳುವ ಲೇಖನಗಳನ್ನು ಬರೆದ ಕಾರಣಕ್ಕೆ ಸಿಐಸಿಗೆ ನೇಮಿಸಲಾಗಿದೆ. ಸರಿಯಾದ ಮಾನದಂಡಗಳನ್ನು ಅನುಸರಿಸದೆ ಜನರನ್ನು ‘ಏರ್-ಡ್ರಾಪ್’ ಮಾಡಲಾಗುತ್ತಿದೆ” ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದರು.

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗಿದೆ ಎಂದು ಒಪ್ಪಿಕೊಂಡ ನ್ಯಾಯಮೂರ್ತಿ ಕಾಂತ್, ಈ ಪ್ರಕ್ರಿಯೆಯು 2-3 ವಾರಗಳಲ್ಲಿ ಮುಗಿಯುವುದರಿಂದ ಫಲಿತಾಂಶಕ್ಕಾಗಿ ಕಾಯುವುದು ಉತ್ತಮ ಎಂದು ಪ್ರಶಾಂತ್ ಭೂಷಣ್ ಅವರಿಗೆ ಸೂಚಿಸಿದ್ದಾರೆ. “ನೀವು ಹೇಳಿದ್ದು ಸರಿ ವಿಳಂಬವಾಗಿದೆ. ಆದರೆ, ಅವರು ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಸರಿಯಾದ ಸಮಯ ಬರಲಿ” ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ತಿಳಿಸಿದ್ದಾರೆ.

“ನೇಮಕಾತಿಗಿಂತ ಮೊದಲು ಪಾರದರ್ಶಕತೆ ಇರಬೇಕು. ಯಾರು ಅರ್ಜಿ ಸಲ್ಲಿಸಿದ್ದಾರೆ, ಅವರ ಆಯ್ಕೆಗೆ ಮಾನದಂಡಗಳು ಯಾವುವು ಮತ್ತು ಯಾರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ನೇಮಕಾತಿಗೆ ಮೊದಲು ಇದನ್ನು ಮಾಡಬೇಕು” ಎಂದು ಭೂಷಣ್ ವಾದಿಸಿದ್ದಾರೆ.

ಈ ವೇಳೆ ನೇಮಕಾತಿ ಪೂರ್ವ ಬಹಿರಂಗಪಡಿಸುವಿಕೆಯ ಅರ್ಜಿಯನ್ನು ವಿರೋಧಿಸಿದ ಎಎಸ್‌ಜಿ ನಟರಾಜ್, “ಯಾವುದೇ ಅನರ್ಹ ವ್ಯಕ್ತಿಯನ್ನು ನೇಮಿಸಿದರೆ, ನೇಮಕಾತಿಯ ನಂತರ ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಆಯ್ಕೆ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ನ್ಯಾಯಾಂಗದ ಹಸ್ತಕ್ಷೇಪವು ಕಾರ್ಯನಿರ್ವಹಣೆಗೆ ಅಡ್ಡಿಯಾಗಬಹುದು. ನಾವು ಪ್ರತಿ ಹಂತಕ್ಕೂ ನ್ಯಾಯಾಂಗ ಪರಿಶೀಲನೆಯನ್ನು ಪ್ರಾರಂಭಿಸಿದರೆ ಯಾವುದೇ ಆಯ್ಕೆ ಸಾಧ್ಯವಿಲ್ಲ. ಪಾರದರ್ಶಕತೆ ಇರಬೇಕು, ಮತ್ತು ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ. ತಿಳಿದುಕೊಳ್ಳುವ ಹಕ್ಕು ಇದೆ, ಮತ್ತು ಅದಕ್ಕೆ ಯಾವುದೇ ಅಪವಾದ ಆಗಲು ಬಿಡುವುದಿಲ್ಲ” ಎಂದಿದ್ದಾರೆ.

ಯಾವುದೇ ಅನರ್ಹ ನೇಮಕಾತಿ ನಡೆದರೆ ನ್ಯಾಯಾಲಯ ಮಧ್ಯಪ್ರವೇಶಿಸುತ್ತದೆ ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ಭರವಸೆ ನೀಡಿದ್ದಾರೆ.

ಹಲವಾರು ರಾಜ್ಯಗಳು ಈಗಾಗಲೇ ಶಾರ್ಟ್‌ಲಿಸ್ಟ್ ಮಾಡಿದ ಹೆಸರುಗಳನ್ನು ಬಹಿರಂಗಪಡಿಸುತ್ತಿದ್ದರೆ, ಕೇಂದ್ರವು ಅದೇ ರೀತಿ ಏಕೆ ಮಾಡಬಾರದು? ಈ ದೇಶದ ಜನರಿಗೆ ಯಾರನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿಯುವ ಹಕ್ಕು ಏಕೆ ಇರಬಾರದು? ಎಂದು ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಅವರು ಬಹಿರಂಗಪಡಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಹೇಳಿದ್ದಾರೆ. ನೇಮಕಾತಿ ಮುಗಿಯುವ ಮೊದಲು ಅವರು ಅದನ್ನು ಮಾಡಬೇಕು” ಎಂದು ಭೂಷಣ್ ಆಗ್ರಹಿಸಿದ್ದಾರೆ.

ಭೂಷಣ್ ಅವರ ಭಾರೀ ಮನವಿಯ ಹೊರತಾಗಿಯೂ, ಶಾರ್ಟ್‌ಲಿಸ್ಟ್ ಮಾಡಲಾದ ಹೆಸರುಗಳನ್ನು ಬಹಿರಂಗಪಡಿಸಲು ಪೀಠವು ಯಾವುದೇ ನಿರ್ದೇಶನವನ್ನು ನೀಡಿಲ್ಲ.

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...