Homeಮುಖಪುಟಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ನೇಮಕಾತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಅ.27) ನಿರಾಕರಿಸಿದೆ.

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಾರದರ್ಶಕ ನೇಮಕಾತಿಗಳಿಗಾಗಿ ನ್ಯಾಯಾಲಯವು ಈ ಹಿಂದೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕೇಂದ್ರವು ಅನುಸರಿಸುತ್ತದೆ ಎಂಬುದರಲ್ಲಿ ‘ಸಂದೇಹಪಡಲು ಯಾವುದೇ ಕಾರಣಗಳಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರ ಮತ್ತು ರಾಜ್ಯ ಮಾಹಿತಿ ಆಯೋಗಗಳ ನೇಮಕಾತಿಗಳಲ್ಲಿ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಕುರಿತು ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ವಕೀಲ ಪ್ರಶಾಂತ್ ಭೂಷಣ್ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ವಿಚಾರಣೆ ನಡೆಸಿದೆ.

ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಈ ಹಿಂದೆ ಆದೇಶಗಳನ್ನು ನೀಡಿದ್ದರೂ, ಸರ್ಕಾರ ಕರ್ತವ್ಯಲೋಪ ಎಸಗಿದೆ ಎಂದು ಭೂಷಣ್ ವಾದಿಸಿದ್ದರು.

“ಜನವರಿ 7ರಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಒಂದು ನಿರ್ದೇಶನ ನೀಡಿತ್ತು. ಅದರಲ್ಲಿ ‘ಶೋಧ ಸಮಿತಿಯ ಸದಸ್ಯರ ಹೆಸರುಗಳು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ’ಯನ್ನು ಬಹಿರಂಗಪಡಿಸುವಂತೆ ಸೂಚಿಸಲಾಗಿತ್ತು. ಮತ್ತಷ್ಟು, ಈ ವಿವರಗಳನ್ನು ‘ಅಂಜಲಿ ಭಾರದ್ವಾಜ್ ಪ್ರಕರಣದಲ್ಲಿ ಈ ನ್ಯಾಯಾಲಯವು ನೀಡಿದ ನಿರ್ದೇಶನಗಳ ಪ್ರಕಾರ ಅಧಿಸೂಚನೆ ಮಾಡಬೇಕು’ ಎಂದು ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಈ ನಿರ್ದೇಶನಗಳನ್ನು ಉಲ್ಲಂಘಿಸಿ ವರ್ತಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, “ಶೋಧನಾ ಸಮಿತಿಯು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಚಿವರನ್ನು ಒಳಗೊಂಡ ಆಯ್ಕೆ ಸಮಿತಿಯು ನೇಮಕಾತಿಗಳನ್ನು ಮಾಡುತ್ತದೆ” ಎಂದು ಪೀಠಕ್ಕೆ ತಿಳಿಸಿದ್ದರು. “ಸಂಪೂರ್ಣ ನೇಮಕಾತಿ ಪ್ರಕ್ರಿಯೆಯು ಎರಡರಿಂದ ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ಭರವಸೆ ನೀಡಿದ್ದರು.

ಇದಕ್ಕೆ, ಹಿಂದಿನ ತೀರ್ಪುಗಳ ಹೊರತಾಗಿಯೂ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಹೆಸರುಗಳು ಮತ್ತು ಅವರನ್ನು ಆಯ್ಕೆ ಮಾಡುವ ಮಾನದಂಡಗಳನ್ನು ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಭೂಷಣ್ ಪ್ರತಿಕ್ರಿಯೆ ನೀಡಿದ್ದರು.

“ನೇಮಕಾತಿ ಮಾಡುವ ಮೊದಲು ಅವರು ಶಾರ್ಟ್‌ಲಿಸ್ಟ್ ಮಾಡುವ ಮಾನದಂಡಗಳನ್ನು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಬೇಕು” ಎಂದು ಭೂಷಣ್ ಆಗ್ರಹಿಸಿದ್ದರು. “ಅರ್ಜಿ ಸಲ್ಲಿಸದ ವ್ಯಕ್ತಿಯನ್ನು ಕೂಡ ನೇಮಿಸಬಹುದು ಎಂದು ಅವರು ಹೇಳುತ್ತಿದ್ದಾರೆ. ಆರ್‌ಟಿಐ ಕಾಯ್ದೆಯಲ್ಲಿ ಯಾವುದೇ ಪೂರ್ವ ಅನುಭವವಿಲ್ಲದ ಪತ್ರಕರ್ತರೊಬ್ಬರನ್ನು ಸರ್ಕಾರವನ್ನು ಹೊಗಳುವ ಲೇಖನಗಳನ್ನು ಬರೆದ ಕಾರಣಕ್ಕೆ ಸಿಐಸಿಗೆ ನೇಮಿಸಲಾಗಿದೆ. ಸರಿಯಾದ ಮಾನದಂಡಗಳನ್ನು ಅನುಸರಿಸದೆ ಜನರನ್ನು ‘ಏರ್-ಡ್ರಾಪ್’ ಮಾಡಲಾಗುತ್ತಿದೆ” ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದರು.

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗಿದೆ ಎಂದು ಒಪ್ಪಿಕೊಂಡ ನ್ಯಾಯಮೂರ್ತಿ ಕಾಂತ್, ಈ ಪ್ರಕ್ರಿಯೆಯು 2-3 ವಾರಗಳಲ್ಲಿ ಮುಗಿಯುವುದರಿಂದ ಫಲಿತಾಂಶಕ್ಕಾಗಿ ಕಾಯುವುದು ಉತ್ತಮ ಎಂದು ಪ್ರಶಾಂತ್ ಭೂಷಣ್ ಅವರಿಗೆ ಸೂಚಿಸಿದ್ದಾರೆ. “ನೀವು ಹೇಳಿದ್ದು ಸರಿ ವಿಳಂಬವಾಗಿದೆ. ಆದರೆ, ಅವರು ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಸರಿಯಾದ ಸಮಯ ಬರಲಿ” ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ತಿಳಿಸಿದ್ದಾರೆ.

“ನೇಮಕಾತಿಗಿಂತ ಮೊದಲು ಪಾರದರ್ಶಕತೆ ಇರಬೇಕು. ಯಾರು ಅರ್ಜಿ ಸಲ್ಲಿಸಿದ್ದಾರೆ, ಅವರ ಆಯ್ಕೆಗೆ ಮಾನದಂಡಗಳು ಯಾವುವು ಮತ್ತು ಯಾರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ನೇಮಕಾತಿಗೆ ಮೊದಲು ಇದನ್ನು ಮಾಡಬೇಕು” ಎಂದು ಭೂಷಣ್ ವಾದಿಸಿದ್ದಾರೆ.

ಈ ವೇಳೆ ನೇಮಕಾತಿ ಪೂರ್ವ ಬಹಿರಂಗಪಡಿಸುವಿಕೆಯ ಅರ್ಜಿಯನ್ನು ವಿರೋಧಿಸಿದ ಎಎಸ್‌ಜಿ ನಟರಾಜ್, “ಯಾವುದೇ ಅನರ್ಹ ವ್ಯಕ್ತಿಯನ್ನು ನೇಮಿಸಿದರೆ, ನೇಮಕಾತಿಯ ನಂತರ ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಆಯ್ಕೆ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ನ್ಯಾಯಾಂಗದ ಹಸ್ತಕ್ಷೇಪವು ಕಾರ್ಯನಿರ್ವಹಣೆಗೆ ಅಡ್ಡಿಯಾಗಬಹುದು. ನಾವು ಪ್ರತಿ ಹಂತಕ್ಕೂ ನ್ಯಾಯಾಂಗ ಪರಿಶೀಲನೆಯನ್ನು ಪ್ರಾರಂಭಿಸಿದರೆ ಯಾವುದೇ ಆಯ್ಕೆ ಸಾಧ್ಯವಿಲ್ಲ. ಪಾರದರ್ಶಕತೆ ಇರಬೇಕು, ಮತ್ತು ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ. ತಿಳಿದುಕೊಳ್ಳುವ ಹಕ್ಕು ಇದೆ, ಮತ್ತು ಅದಕ್ಕೆ ಯಾವುದೇ ಅಪವಾದ ಆಗಲು ಬಿಡುವುದಿಲ್ಲ” ಎಂದಿದ್ದಾರೆ.

ಯಾವುದೇ ಅನರ್ಹ ನೇಮಕಾತಿ ನಡೆದರೆ ನ್ಯಾಯಾಲಯ ಮಧ್ಯಪ್ರವೇಶಿಸುತ್ತದೆ ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ಭರವಸೆ ನೀಡಿದ್ದಾರೆ.

ಹಲವಾರು ರಾಜ್ಯಗಳು ಈಗಾಗಲೇ ಶಾರ್ಟ್‌ಲಿಸ್ಟ್ ಮಾಡಿದ ಹೆಸರುಗಳನ್ನು ಬಹಿರಂಗಪಡಿಸುತ್ತಿದ್ದರೆ, ಕೇಂದ್ರವು ಅದೇ ರೀತಿ ಏಕೆ ಮಾಡಬಾರದು? ಈ ದೇಶದ ಜನರಿಗೆ ಯಾರನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿಯುವ ಹಕ್ಕು ಏಕೆ ಇರಬಾರದು? ಎಂದು ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಅವರು ಬಹಿರಂಗಪಡಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಹೇಳಿದ್ದಾರೆ. ನೇಮಕಾತಿ ಮುಗಿಯುವ ಮೊದಲು ಅವರು ಅದನ್ನು ಮಾಡಬೇಕು” ಎಂದು ಭೂಷಣ್ ಆಗ್ರಹಿಸಿದ್ದಾರೆ.

ಭೂಷಣ್ ಅವರ ಭಾರೀ ಮನವಿಯ ಹೊರತಾಗಿಯೂ, ಶಾರ್ಟ್‌ಲಿಸ್ಟ್ ಮಾಡಲಾದ ಹೆಸರುಗಳನ್ನು ಬಹಿರಂಗಪಡಿಸಲು ಪೀಠವು ಯಾವುದೇ ನಿರ್ದೇಶನವನ್ನು ನೀಡಿಲ್ಲ.

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...