Homeಮುಖಪುಟಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

ಕೇಂದ್ರ ಮಾಹಿತಿ ಆಯೋಗದ ನೇಮಕಾತಿ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರು ಬಹಿರಂಗಕ್ಕೆ ನಿರ್ದೇಶಿಸಲು ಸುಪ್ರೀಂ ನಕಾರ

- Advertisement -
- Advertisement -

ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ನೇಮಕಾತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಅ.27) ನಿರಾಕರಿಸಿದೆ.

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಾರದರ್ಶಕ ನೇಮಕಾತಿಗಳಿಗಾಗಿ ನ್ಯಾಯಾಲಯವು ಈ ಹಿಂದೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕೇಂದ್ರವು ಅನುಸರಿಸುತ್ತದೆ ಎಂಬುದರಲ್ಲಿ ‘ಸಂದೇಹಪಡಲು ಯಾವುದೇ ಕಾರಣಗಳಿಲ್ಲ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇಂದ್ರ ಮತ್ತು ರಾಜ್ಯ ಮಾಹಿತಿ ಆಯೋಗಗಳ ನೇಮಕಾತಿಗಳಲ್ಲಿ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಕುರಿತು ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಅವರು ವಕೀಲ ಪ್ರಶಾಂತ್ ಭೂಷಣ್ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ವಿಚಾರಣೆ ನಡೆಸಿದೆ.

ಮಾಹಿತಿ ಆಯೋಗಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಈ ಹಿಂದೆ ಆದೇಶಗಳನ್ನು ನೀಡಿದ್ದರೂ, ಸರ್ಕಾರ ಕರ್ತವ್ಯಲೋಪ ಎಸಗಿದೆ ಎಂದು ಭೂಷಣ್ ವಾದಿಸಿದ್ದರು.

“ಜನವರಿ 7ರಂದು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಒಂದು ನಿರ್ದೇಶನ ನೀಡಿತ್ತು. ಅದರಲ್ಲಿ ‘ಶೋಧ ಸಮಿತಿಯ ಸದಸ್ಯರ ಹೆಸರುಗಳು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ’ಯನ್ನು ಬಹಿರಂಗಪಡಿಸುವಂತೆ ಸೂಚಿಸಲಾಗಿತ್ತು. ಮತ್ತಷ್ಟು, ಈ ವಿವರಗಳನ್ನು ‘ಅಂಜಲಿ ಭಾರದ್ವಾಜ್ ಪ್ರಕರಣದಲ್ಲಿ ಈ ನ್ಯಾಯಾಲಯವು ನೀಡಿದ ನಿರ್ದೇಶನಗಳ ಪ್ರಕಾರ ಅಧಿಸೂಚನೆ ಮಾಡಬೇಕು’ ಎಂದು ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರವು ಈ ನಿರ್ದೇಶನಗಳನ್ನು ಉಲ್ಲಂಘಿಸಿ ವರ್ತಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ ನಟರಾಜ್, “ಶೋಧನಾ ಸಮಿತಿಯು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಚಿವರನ್ನು ಒಳಗೊಂಡ ಆಯ್ಕೆ ಸಮಿತಿಯು ನೇಮಕಾತಿಗಳನ್ನು ಮಾಡುತ್ತದೆ” ಎಂದು ಪೀಠಕ್ಕೆ ತಿಳಿಸಿದ್ದರು. “ಸಂಪೂರ್ಣ ನೇಮಕಾತಿ ಪ್ರಕ್ರಿಯೆಯು ಎರಡರಿಂದ ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ” ಎಂದು ಭರವಸೆ ನೀಡಿದ್ದರು.

ಇದಕ್ಕೆ, ಹಿಂದಿನ ತೀರ್ಪುಗಳ ಹೊರತಾಗಿಯೂ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ಹೆಸರುಗಳು ಮತ್ತು ಅವರನ್ನು ಆಯ್ಕೆ ಮಾಡುವ ಮಾನದಂಡಗಳನ್ನು ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಭೂಷಣ್ ಪ್ರತಿಕ್ರಿಯೆ ನೀಡಿದ್ದರು.

“ನೇಮಕಾತಿ ಮಾಡುವ ಮೊದಲು ಅವರು ಶಾರ್ಟ್‌ಲಿಸ್ಟ್ ಮಾಡುವ ಮಾನದಂಡಗಳನ್ನು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಬೇಕು” ಎಂದು ಭೂಷಣ್ ಆಗ್ರಹಿಸಿದ್ದರು. “ಅರ್ಜಿ ಸಲ್ಲಿಸದ ವ್ಯಕ್ತಿಯನ್ನು ಕೂಡ ನೇಮಿಸಬಹುದು ಎಂದು ಅವರು ಹೇಳುತ್ತಿದ್ದಾರೆ. ಆರ್‌ಟಿಐ ಕಾಯ್ದೆಯಲ್ಲಿ ಯಾವುದೇ ಪೂರ್ವ ಅನುಭವವಿಲ್ಲದ ಪತ್ರಕರ್ತರೊಬ್ಬರನ್ನು ಸರ್ಕಾರವನ್ನು ಹೊಗಳುವ ಲೇಖನಗಳನ್ನು ಬರೆದ ಕಾರಣಕ್ಕೆ ಸಿಐಸಿಗೆ ನೇಮಿಸಲಾಗಿದೆ. ಸರಿಯಾದ ಮಾನದಂಡಗಳನ್ನು ಅನುಸರಿಸದೆ ಜನರನ್ನು ‘ಏರ್-ಡ್ರಾಪ್’ ಮಾಡಲಾಗುತ್ತಿದೆ” ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದರು.

ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬವಾಗಿದೆ ಎಂದು ಒಪ್ಪಿಕೊಂಡ ನ್ಯಾಯಮೂರ್ತಿ ಕಾಂತ್, ಈ ಪ್ರಕ್ರಿಯೆಯು 2-3 ವಾರಗಳಲ್ಲಿ ಮುಗಿಯುವುದರಿಂದ ಫಲಿತಾಂಶಕ್ಕಾಗಿ ಕಾಯುವುದು ಉತ್ತಮ ಎಂದು ಪ್ರಶಾಂತ್ ಭೂಷಣ್ ಅವರಿಗೆ ಸೂಚಿಸಿದ್ದಾರೆ. “ನೀವು ಹೇಳಿದ್ದು ಸರಿ ವಿಳಂಬವಾಗಿದೆ. ಆದರೆ, ಅವರು ಸ್ವಲ್ಪ ಸಮಯ ಕೇಳುತ್ತಿದ್ದಾರೆ. ಸರಿಯಾದ ಸಮಯ ಬರಲಿ” ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ತಿಳಿಸಿದ್ದಾರೆ.

“ನೇಮಕಾತಿಗಿಂತ ಮೊದಲು ಪಾರದರ್ಶಕತೆ ಇರಬೇಕು. ಯಾರು ಅರ್ಜಿ ಸಲ್ಲಿಸಿದ್ದಾರೆ, ಅವರ ಆಯ್ಕೆಗೆ ಮಾನದಂಡಗಳು ಯಾವುವು ಮತ್ತು ಯಾರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ತಿಳಿದುಕೊಳ್ಳುವ ಹಕ್ಕು ಜನರಿಗೆ ಇದೆ. ನೇಮಕಾತಿಗೆ ಮೊದಲು ಇದನ್ನು ಮಾಡಬೇಕು” ಎಂದು ಭೂಷಣ್ ವಾದಿಸಿದ್ದಾರೆ.

ಈ ವೇಳೆ ನೇಮಕಾತಿ ಪೂರ್ವ ಬಹಿರಂಗಪಡಿಸುವಿಕೆಯ ಅರ್ಜಿಯನ್ನು ವಿರೋಧಿಸಿದ ಎಎಸ್‌ಜಿ ನಟರಾಜ್, “ಯಾವುದೇ ಅನರ್ಹ ವ್ಯಕ್ತಿಯನ್ನು ನೇಮಿಸಿದರೆ, ನೇಮಕಾತಿಯ ನಂತರ ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಆಯ್ಕೆ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ನ್ಯಾಯಾಂಗದ ಹಸ್ತಕ್ಷೇಪವು ಕಾರ್ಯನಿರ್ವಹಣೆಗೆ ಅಡ್ಡಿಯಾಗಬಹುದು. ನಾವು ಪ್ರತಿ ಹಂತಕ್ಕೂ ನ್ಯಾಯಾಂಗ ಪರಿಶೀಲನೆಯನ್ನು ಪ್ರಾರಂಭಿಸಿದರೆ ಯಾವುದೇ ಆಯ್ಕೆ ಸಾಧ್ಯವಿಲ್ಲ. ಪಾರದರ್ಶಕತೆ ಇರಬೇಕು, ಮತ್ತು ನಾವು ಅದನ್ನು ಖಚಿತಪಡಿಸಿಕೊಳ್ಳುತ್ತೇವೆ. ತಿಳಿದುಕೊಳ್ಳುವ ಹಕ್ಕು ಇದೆ, ಮತ್ತು ಅದಕ್ಕೆ ಯಾವುದೇ ಅಪವಾದ ಆಗಲು ಬಿಡುವುದಿಲ್ಲ” ಎಂದಿದ್ದಾರೆ.

ಯಾವುದೇ ಅನರ್ಹ ನೇಮಕಾತಿ ನಡೆದರೆ ನ್ಯಾಯಾಲಯ ಮಧ್ಯಪ್ರವೇಶಿಸುತ್ತದೆ ಎಂದು ನ್ಯಾಯಮೂರ್ತಿ ಕಾಂತ್ ಭೂಷಣ್ ಅವರಿಗೆ ಭರವಸೆ ನೀಡಿದ್ದಾರೆ.

ಹಲವಾರು ರಾಜ್ಯಗಳು ಈಗಾಗಲೇ ಶಾರ್ಟ್‌ಲಿಸ್ಟ್ ಮಾಡಿದ ಹೆಸರುಗಳನ್ನು ಬಹಿರಂಗಪಡಿಸುತ್ತಿದ್ದರೆ, ಕೇಂದ್ರವು ಅದೇ ರೀತಿ ಏಕೆ ಮಾಡಬಾರದು? ಈ ದೇಶದ ಜನರಿಗೆ ಯಾರನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿಯುವ ಹಕ್ಕು ಏಕೆ ಇರಬಾರದು? ಎಂದು ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ.ಕಾಂತ್ ಅವರು, “ಅವರು ಬಹಿರಂಗಪಡಿಸುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಹೇಳಿದ್ದಾರೆ. ನೇಮಕಾತಿ ಮುಗಿಯುವ ಮೊದಲು ಅವರು ಅದನ್ನು ಮಾಡಬೇಕು” ಎಂದು ಭೂಷಣ್ ಆಗ್ರಹಿಸಿದ್ದಾರೆ.

ಭೂಷಣ್ ಅವರ ಭಾರೀ ಮನವಿಯ ಹೊರತಾಗಿಯೂ, ಶಾರ್ಟ್‌ಲಿಸ್ಟ್ ಮಾಡಲಾದ ಹೆಸರುಗಳನ್ನು ಬಹಿರಂಗಪಡಿಸಲು ಪೀಠವು ಯಾವುದೇ ನಿರ್ದೇಶನವನ್ನು ನೀಡಿಲ್ಲ.

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...