HomeಮುಖಪುಟEVM ಕುರಿತು ಕೋರಿದ್ದ ಪ್ರಶ್ನೆಗೆ ಉತ್ತರಿಸದ ಚುನಾವಣಾ ಆಯೋಗ: ಕೇಂದ್ರ ಮಾಹಿತಿ ಆಯೋಗ ತರಾಟೆ

EVM ಕುರಿತು ಕೋರಿದ್ದ ಪ್ರಶ್ನೆಗೆ ಉತ್ತರಿಸದ ಚುನಾವಣಾ ಆಯೋಗ: ಕೇಂದ್ರ ಮಾಹಿತಿ ಆಯೋಗ ತರಾಟೆ

- Advertisement -
- Advertisement -

ಚುನಾವಣೆಯ ಸಂದರ್ಭದಲ್ಲಿ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ವಿಶ್ವಾಸಾರ್ಹತೆ ವಿಷಯದ ಕುರಿತು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಮಾಹಿತಿ ನೀಡದ ಚುನಾವಣಾ ಆಯೋಗದ ಬಗ್ಗೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಟೀಕಿಸಿದೆ ಮತ್ತು 30 ದಿನಗಳೊಳಗೆ ಲಿಖಿತ ವಿವರಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸಿಐಸಿ ಸೂಚಿಸಿದೆ. ಇದಲ್ಲದೆ ಮಾಹಿತಿಯನ್ನು ನೀಡದಿರುವುದು ಕಾನೂನಿನ ಘೋರ ಉಲ್ಲಂಘನೆ ಎಂದು ಹೇಳಿದೆ.

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ), ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮತ್ತು ಮತ ಎಣಿಕೆ ವಿಶ್ವಾಸಾರ್ಹತೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದವರಲ್ಲಿ ಓರ್ವರಾದ ಮಾಜಿ ಐಎಎಸ್ ಅಧಿಕಾರಿ ಎಂ ಜಿ ದೇವಸಹಾಯಂ ಅವರು ಈ ಕುರಿತು ಆರ್‌ಟಿಐ ಮಾಹಿತಿಯನ್ನು ಕೋರಿದ್ದು, ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆಯನ್ನು ನೀಡುವಂತೆ ಆಗ್ರಹಿಸಿದ್ದರು.

ನವೆಂಬರ್ 22, 2022ರಂದು ಸಲ್ಲಿಸಲಾದ ಆರ್‌ಟಿಐ ಅರ್ಜಿಯಲ್ಲಿ, ಸಾರ್ವಜನಿಕ ಅಧಿಕಾರಿಗಳು, ಸಮಸ್ಯೆಯ ಕುರಿತು ನಡೆಸಿದ ಸಭೆಗಳ ವಿವರಗಳು ಮತ್ತು ಎಲ್ಲಾ ಸಂಬಂಧಿತ ಟಿಪ್ಪಣಿಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಬಯಸಿದ್ದರು. ಕಡ್ಡಾಯವಾಗಿ 30 ದಿನಗಳ ಅವಧಿಯೊಳಗೆ ವರದಿ ಸಲ್ಲಿಸಬೇಕೆಂದಿದ್ದರೂ ಚುನಾವಣಾ ಆಯೋಗ ಅವರಿಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹಿರಿಯ ಅಧಿಕಾರಿಗಳು ದೇವಸಹಾಯಂ ಅವರ ಮೊದಲ ಮನವಿಯನ್ನು ಆಲಿಸಲಿಲ್ಲ. ಆದ್ದರಿಂದ ಅವರು ಎರಡನೇ ಬಾರಿಗೆ ಚುನಾವಣಾ ಆಯೋಗಕ್ಕೆ ಮನವಿಯನ್ನು ಸಲ್ಲಿಸಿದ್ದರು.

ಮುಖ್ಯ ಮಾಹಿತಿ ಆಯುಕ್ತ ಹೀರಾಲಾಲ್ ಸಮರಿಯಾ ಅವರನ್ನು ಈ  ಬಗ್ಗೆ ಪ್ರಶ್ನಿಸಿದಾಗ, ದೇವಸಹಾಯಂಗೆ ಏಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಲಿಲ್ಲ ಎಂಬ ಬಗ್ಗೆ ತೃಪ್ತಿಕರ ಉತ್ತರವನ್ನು ನೀಡಲು ವಿಫಲರಾಗಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ. ಆರ್‌ಟಿಐ ಅರ್ಜಿಗೆ 30 ದಿನಗಳೊಳಗೆ ಪ್ರತಿಕ್ರಿಯೆಯನ್ನು ನೀಡುವಂತೆ ಸಮರಿಯಾ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮತ್ತು ಭಾರತೀಯ ನಿರ್ವಹಣಾ ಸಂಸ್ಥೆ (ಐಐಎಂ) ಪ್ರಾಧ್ಯಾಪಕರು ಸೇರಿದಂತೆ ಪ್ರಸಿದ್ಧ ತಾಂತ್ರಿಕ ವೃತ್ತಿಪರರು ಮತ್ತು ಶಿಕ್ಷಣ ತಜ್ಞರು ಮತ್ತು ನಿವೃತ್ತ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಸೇರಿದಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿಕೊಂಡು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಪತ್ರದಲ್ಲಿ ತಾಂತ್ರಿಕ ವೃತ್ತಿಪರರು, ಶಿಕ್ಷಣ ತಜ್ಞರು ಮತ್ತು ಮಾಜಿ ನಾಗರಿಕ ಸೇವಾಧಿಕಾರಿಗಳು ಈ ಬಗ್ಗೆ ಇಸಿಐನಿಂದ ತುರ್ತು ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದರು.

ಇದನ್ನು ಓದಿ: ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...