Homeಮುಖಪುಟ‘ಆರೋಪಿ ನಂಬರ್‌ 1’ - ಆಂಧ್ರ ಮಾಜಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ ಸಿಐಡಿ!

‘ಆರೋಪಿ ನಂಬರ್‌ 1’ – ಆಂಧ್ರ ಮಾಜಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ ಸಿಐಡಿ!

- Advertisement -
- Advertisement -

ಅಮರಾವತಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ವಿರುದ್ಧ ಎಫ್‌ಐಆರ್‌‌ ಸಲ್ಲಿಸಿರುವ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಸೋಮವಾರ ಸಂಜೆ ಹೈದರಾಬಾದ್‌ನ ನಿವಾಸದಲ್ಲಿ ನಾಯ್ಡು ಅವರಿಗೆ ನೋಟಿಸ್ ನೀಡಿದೆ.

ನಾಯ್ಡು ಅವರನ್ನು ‘ಆರೋಪಿ ನಂಬರ್‌ 1’ ಎಂದು ಉಲ್ಲೇಖಿಸಿರುವ ನೋಟಿಸ್‌, ವಿಜಯವಾಡದ ಸತ್ಯನಾರಾಯಣಪುರಂನ ಸಿಐಡಿ ಪ್ರಾದೇಶಿಕ ಕಚೇರಿಯಲ್ಲಿ ಮಾರ್ಚ್ 23 ರಂದು ತನಿಖಾ ಅಧಿಕಾರಿ ಮುಂದೆ ಖುದ್ದಾಗಿ ಹಾಜರಾಗುವಂತೆ ಸಿಐಡಿ ಕೇಳಿದೆ.

“ಹಾಜರಾಗಲು ಅಥವಾ ನೋಟಿಸ್‌ಗಳ ನಿಯಮಗಳನ್ನು ಅನುಸರಿಸಲು ವಿಫಲವಾದರೆ, ಸಿಆರ್‌ಪಿಸಿಯ ಸೆಕ್ಷನ್ 41 (3) ಮತ್ತು (4) ರ ಅಡಿಯಲ್ಲಿ ಬಂಧಿಸಬೇಕಾಗುತ್ತದೆ” ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

ಅಮರಾವತಿ ಹಗರಣವು ಆಂಧ್ರಪ್ರದೇಶದ ವಿಭಜಿತ ರಾಜ್ಯದ ಉದ್ದೇಶಿತ ರಾಜಧಾನಿಗಾಗಿ ಸಾವಿರಾರು ಎಕರೆ ಭೂಮಿಯನ್ನು ಒಟ್ಟುಗೂಡಿಸಲಾಗಿದೆ ಎಂದು ಆರೋಪಿಸಲಾಗಿರುವ ಹಗರಣವಾಗಿದೆ.

ಇದನ್ನೂ ಓದಿ: ನೇಮಕಾತಿ ಹಗರಣ: 5 ಲೆಫ್ಟಿನೆಂಟ್ ಕರ್ನಲ್‌ಗಳ ಸಹಿತ 17 ಸೇನಾಧಿಕಾರಿಗಳ ವಿರುದ್ದ ಪ್ರಕರಣ ದಾಖಲು

ಸಿಐಡಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ತನಿಖಾ ಅಧಿಕಾರಿ ಲಕ್ಷ್ಮಿ ನಾರಾಯಣ ರಾವ್ ನೀಡಿದ ನೋಟಿಸ್‌‌ನಲ್ಲಿ, “ಪ್ರಕರಣದಲ್ಲಿ ನಂಬರ್‌ 1 ಆರೋಪಿ ಆರೋಪಿಯಾಗಿರುವ ನಿಮ್ಮನ್ನು ಪರಿಣಾಮಕಾರಿ ಮತ್ತು ಉತ್ತಮ ತನಿಖೆಗಾಗಿ, ವಿಚಾರಣೆಗೆ ಒಳಪಡಿಸುವುದು ಸೂಕ್ತವಾಗಿದೆ ಮತ್ತು ಅಗತ್ಯವೆಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಟಿಡಿಪಿ ಆಡಳಿತದ ಅವಧಿಯಲ್ಲಿ ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ (ಎಂಎ ಮತ್ತು ಯುಡಿ) ಸಚಿವರಾಗಿದ್ದ ಟಿಡಿಪಿ ಮುಖಂಡ ಪೊಂಗುರು ನಾರಾಯಣ ರಾವ್ ಅವರಿಗೂ ಸಿಆರ್‌ಪಿಸಿಯ ಸೆಕ್ಷನ್ 41 (ಎ) ಅಡಿಯಲ್ಲಿ ಇದೇ ರೀತಿಯ ಸೂಚನೆ ನೀಡಲಾಗಿದೆ.

ನಾಯ್ಡು ಅವರಿಗೆ ನೀಡಿರುವ ನೋಟಿಸ್ ಕುರಿತು ಪ್ರತಿಕ್ರಿಯಿಸಿದ ಪಕ್ಷದ ಆಂಧ್ರ ಪ್ರದೇಶ ಘಟಕದ ಅಧ್ಯಕ್ಷ ಕೆ ಅಚ್ಚಣ್ಣೈದು, “ಅಮರಾವತಿಗೆ ಎಸ್‌ಸಿ ಮತ್ತು ಎಸ್‌ಟಿಗಳ ಒಪ್ಪಿಗೆಯೊಂದಿಗೆ ನಿಯೋಜಿತ ಭೂಮಿಯನ್ನು ತೆಗೆದುಕೊಳ್ಳಲಾಗಿದೆ. ಮಂಗಳಗಿರಿ ಶಾಸಕ ರಾಮಕೃಷ್ಣ ರೆಡ್ಡಿ ಅವರು ಆ ಸಮುದಾಯಕ್ಕೆ ಸೇರದಿದ್ದಾಗ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಆಧಾರದ ಮೇಲೆ ಹೇಗೆ ದೂರು ಸಲ್ಲಿಸಬಹುದು? ಇದು ಕಾಯಿದೆಯ ದುರುಪಯೋಗವಲ್ಲದೆ ಮತ್ತೇನಲ್ಲ. ಟಿಡಿಪಿ ಮುಖ್ಯಸ್ಥರ ವಿರುದ್ದ ಸರ್ಕಾರವು ಧ್ವೇಷ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...