Homeಮುಖಪುಟಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

ಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

- Advertisement -
- Advertisement -

‘ಫೈಬರ್ ನೆಟ್ ಯೋಜನೆ ಹಂತ-1’ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಮರಾವತಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಶುಕ್ರವಾರ (ಫೆ.16) ಚಾರ್ಜ್ ಶೀಟ್‌ ಸಲ್ಲಿಸಿದೆ. ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಪ್ರಕರಣದ ಪ್ರಮುಖ ಆರೋಪಿ (ಎ 1) ಎಂದು ಉಲ್ಲೇಖಿಸಿದೆ.

ಹೈದರಾಬಾದ್‌ನ ನೆಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ ಹರಿ ಕೃಷ್ಣ ಪ್ರಸಾದ್ ಮತ್ತು ಐಆರ್‌ಟಿಎಸ್ ಅಧಿಕಾರಿ ಕೆ ಸಾಂಬಶಿವ ರಾವ್ ಅವರನ್ನು ಪ್ರಕರಣದ ಇತರ ಆರೋಪಿಗಳೆಂದು ಹೆಸರಿಸಿರುವುದಾಗಿ ಸಿಐಡಿ ಹೇಳಿಕೆಯಲ್ಲಿ ತಿಳಿಸಿದೆ.

ಚಂದ್ರಬಾಬು ನಾಯ್ಡು 2014-2019ರ ನಡುವೆ ಅಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ನಡೆದಿರುವ ಫೈಬರ್ ನೆಟ್‌ ಟೆಂಡರ್ ಮ್ಯಾನಿಪ್ಯುಲೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು. ಸಿಎಂ ಹುದ್ದೆಯ ಜೊತೆಗೆ ಇಂಧನ, ಮೂಲಸೌಕರ್ಯ ಮತ್ತು ಹೂಡಿಕೆ ಖಾತೆಯನ್ನು ನಿಭಾಯಿಸುತ್ತಿದ್ದ ನಾಯ್ಡು ಅವರು, ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಫೈಬರ್ ನೆಟ್ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ವೈಯಕ್ತಿಕವಾಗಿ ಶಿಫಾರಸು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಬರೋಬ್ಬರಿ 330 ಕೋಟಿ ರೂ.ಗಳ ಅಂಧ್ರ ಪ್ರದೇಶ ಫೈಬರ್‌ನೆಟ್ ಯೋಜನೆ ಹಂತ – 1ರ ಕೆಲಸದ ಆದೇಶವನ್ನು ತನಗೆ ಒಲವು ಹೊಂದಿರುವ ಕಂಪನಿಗೆ ಹಂಚಲು ಟೆಂಡರ್ ಪ್ರಕ್ರಿಯೆಯಲ್ಲಿ ಮ್ಯಾನಿಪ್ಯುಲೇಷನ್ ಮಾಡಲಾಗಿದೆ ಎಂದು ಸಿಐಡಿ ಹೇಳಿದೆ. ಸಿಐಡಿ ಪ್ರಕಾರ, ಟೆಂಡರ್ ಹಂಚಿಕೆಯಿಂದ ಹಿಡಿದು ಯೋಜನೆ ಪೂರ್ಣಗೊಳ್ಳುವವರೆಗೆ ಹಲವಾರು ಅಕ್ರಮಗಳು ನಡೆದಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿದೆ.

ಸಿಐಡಿ ಚಾರ್ಜ್‌ಶೀಟ್‌ನಲ್ಲಿ, ಫೈಬರ್ ನೆಟ್ ಯೋಜನೆಗೆ ಸಂಬಂಧಿಸಿದ ವಸ್ತುಗಳ ಬೆಲೆ ಅಥವಾ ಅನುಸರಿಸಬೇಕಾದ ಮಾನದಂಡಗಳಿಗೆ ಯಾವುದೇ ಮಾರುಕಟ್ಟೆ ಸಮೀಕ್ಷೆ ಮಾಡಿಲ್ಲ. ಸರ್ಕಾರಕ್ಕೆ ಲಾಭವಾಗುವ ಅಂಶಗಳನ್ನು ಪರಿಗಣಿಸದೆ ಯೋಜನೆಗೆ ನಾಯ್ಡು ಅನುಮೋದನೆ ಕೊಟ್ಟಿದ್ದಾರೆ ಎಂದು ಹೇಳಿದೆ.

ಇದಲ್ಲದೆ, ಪ್ರಕರಣದ ಆರೋಪಿ ಹರಿಕೃಷ್ಣ ಪ್ರಸಾದ್ ಅವರನ್ನು ವಿವಿಧ ಟೆಂಡರ್ ಮೌಲ್ಯಮಾಪನ ಸಮಿತಿಗಳಲ್ಲಿ ಸೇರಿಸಲು, ಟೆರಾಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್‌ನ ಕಪ್ಪು ಪಟ್ಟಿಯನ್ನು ಹಿಂಪಡೆಯಲು ಮತ್ತು ಅಂತಿಮವಾಗಿ ಅದೇ ಕಂಪನಿಗೆ ಟೆಂಡರ್ ನೀಡುವಂತೆ ಮಾಜಿ ಸಿಎಂ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಸಿಐಡಿ ತಿಳಿಸಿದೆ.

ಆರೋಪಿಗಳು ತಮ್ಮ ಆಪ್ತರಿಗೆ ಸೇರಿದ ಕಂಪನಿಗಳ ವೆಬ್‌ಸೈಟ್‌ಗಳ ಮೂಲಕ ನಕಲಿ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 166, 167, 418, 465, 468, 471, 409 ಮತ್ತು 506 ರೀಡ್ ವಿಥ್ 120-ಬಿ ಮತ್ತು ಇತರ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಐಡಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...