Homeಮುಖಪುಟಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

ಆಂಧ್ರ ಫೈಬರ್ ನೆಟ್ ಹಗರಣ| ಚಂದ್ರಬಾಬು ನಾಯ್ಡು ಪ್ರಮುಖ ಆರೋಪಿ: ಸಿಐಡಿ

- Advertisement -
- Advertisement -

‘ಫೈಬರ್ ನೆಟ್ ಯೋಜನೆ ಹಂತ-1’ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಮರಾವತಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಶುಕ್ರವಾರ (ಫೆ.16) ಚಾರ್ಜ್ ಶೀಟ್‌ ಸಲ್ಲಿಸಿದೆ. ಮಾಜಿ ಸಿಎಂ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಪ್ರಕರಣದ ಪ್ರಮುಖ ಆರೋಪಿ (ಎ 1) ಎಂದು ಉಲ್ಲೇಖಿಸಿದೆ.

ಹೈದರಾಬಾದ್‌ನ ನೆಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ ಹರಿ ಕೃಷ್ಣ ಪ್ರಸಾದ್ ಮತ್ತು ಐಆರ್‌ಟಿಎಸ್ ಅಧಿಕಾರಿ ಕೆ ಸಾಂಬಶಿವ ರಾವ್ ಅವರನ್ನು ಪ್ರಕರಣದ ಇತರ ಆರೋಪಿಗಳೆಂದು ಹೆಸರಿಸಿರುವುದಾಗಿ ಸಿಐಡಿ ಹೇಳಿಕೆಯಲ್ಲಿ ತಿಳಿಸಿದೆ.

ಚಂದ್ರಬಾಬು ನಾಯ್ಡು 2014-2019ರ ನಡುವೆ ಅಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ನಡೆದಿರುವ ಫೈಬರ್ ನೆಟ್‌ ಟೆಂಡರ್ ಮ್ಯಾನಿಪ್ಯುಲೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು. ಸಿಎಂ ಹುದ್ದೆಯ ಜೊತೆಗೆ ಇಂಧನ, ಮೂಲಸೌಕರ್ಯ ಮತ್ತು ಹೂಡಿಕೆ ಖಾತೆಯನ್ನು ನಿಭಾಯಿಸುತ್ತಿದ್ದ ನಾಯ್ಡು ಅವರು, ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಫೈಬರ್ ನೆಟ್ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ವೈಯಕ್ತಿಕವಾಗಿ ಶಿಫಾರಸು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಬರೋಬ್ಬರಿ 330 ಕೋಟಿ ರೂ.ಗಳ ಅಂಧ್ರ ಪ್ರದೇಶ ಫೈಬರ್‌ನೆಟ್ ಯೋಜನೆ ಹಂತ – 1ರ ಕೆಲಸದ ಆದೇಶವನ್ನು ತನಗೆ ಒಲವು ಹೊಂದಿರುವ ಕಂಪನಿಗೆ ಹಂಚಲು ಟೆಂಡರ್ ಪ್ರಕ್ರಿಯೆಯಲ್ಲಿ ಮ್ಯಾನಿಪ್ಯುಲೇಷನ್ ಮಾಡಲಾಗಿದೆ ಎಂದು ಸಿಐಡಿ ಹೇಳಿದೆ. ಸಿಐಡಿ ಪ್ರಕಾರ, ಟೆಂಡರ್ ಹಂಚಿಕೆಯಿಂದ ಹಿಡಿದು ಯೋಜನೆ ಪೂರ್ಣಗೊಳ್ಳುವವರೆಗೆ ಹಲವಾರು ಅಕ್ರಮಗಳು ನಡೆದಿವೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟಾಗಿದೆ.

ಸಿಐಡಿ ಚಾರ್ಜ್‌ಶೀಟ್‌ನಲ್ಲಿ, ಫೈಬರ್ ನೆಟ್ ಯೋಜನೆಗೆ ಸಂಬಂಧಿಸಿದ ವಸ್ತುಗಳ ಬೆಲೆ ಅಥವಾ ಅನುಸರಿಸಬೇಕಾದ ಮಾನದಂಡಗಳಿಗೆ ಯಾವುದೇ ಮಾರುಕಟ್ಟೆ ಸಮೀಕ್ಷೆ ಮಾಡಿಲ್ಲ. ಸರ್ಕಾರಕ್ಕೆ ಲಾಭವಾಗುವ ಅಂಶಗಳನ್ನು ಪರಿಗಣಿಸದೆ ಯೋಜನೆಗೆ ನಾಯ್ಡು ಅನುಮೋದನೆ ಕೊಟ್ಟಿದ್ದಾರೆ ಎಂದು ಹೇಳಿದೆ.

ಇದಲ್ಲದೆ, ಪ್ರಕರಣದ ಆರೋಪಿ ಹರಿಕೃಷ್ಣ ಪ್ರಸಾದ್ ಅವರನ್ನು ವಿವಿಧ ಟೆಂಡರ್ ಮೌಲ್ಯಮಾಪನ ಸಮಿತಿಗಳಲ್ಲಿ ಸೇರಿಸಲು, ಟೆರಾಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್‌ನ ಕಪ್ಪು ಪಟ್ಟಿಯನ್ನು ಹಿಂಪಡೆಯಲು ಮತ್ತು ಅಂತಿಮವಾಗಿ ಅದೇ ಕಂಪನಿಗೆ ಟೆಂಡರ್ ನೀಡುವಂತೆ ಮಾಜಿ ಸಿಎಂ ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಸಿಐಡಿ ತಿಳಿಸಿದೆ.

ಆರೋಪಿಗಳು ತಮ್ಮ ಆಪ್ತರಿಗೆ ಸೇರಿದ ಕಂಪನಿಗಳ ವೆಬ್‌ಸೈಟ್‌ಗಳ ಮೂಲಕ ನಕಲಿ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 166, 167, 418, 465, 468, 471, 409 ಮತ್ತು 506 ರೀಡ್ ವಿಥ್ 120-ಬಿ ಮತ್ತು ಇತರ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಐಡಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಭಾಷೆಯ ಮೇಲೆ ಹಿಡಿತವಿರಲಿ: ಈಶ್ವರಪ್ಪ, ಅನಂತ್ ಕುಮಾರ್ ಹೆಗ್ಡೆ‌ಗೆ ಹೈಕೋರ್ಟ್‌ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...