Homeಕರ್ನಾಟಕಸಿ.ಟಿ ರವಿ ಪ್ರಕರಣ ಸಿಐಡಿ ಹೆಗಲಿಗೆ : ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಸಿ.ಟಿ ರವಿ ಪ್ರಕರಣ ಸಿಐಡಿ ಹೆಗಲಿಗೆ : ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

- Advertisement -
- Advertisement -

ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ ರವಿ ಅಶ್ಲೀಲ ಪದ ಬಳಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ಡಿ.24) ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಮೇಶ್ವರ್ ಅವರು, “ಸಿ.ಟಿ ರವಿ ತಾನು ಅವಾಚ್ಯ ಪದ ಬಳಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಇತರ ಕೆಲ ಪರಿಷತ್ ಸದಸ್ಯರು ಅವಾಚ್ಯ ಪದ ಬಳಸಿರುವುದು ನಿಜ ಎಂದಿದ್ದಾರೆ. ಹಾಗಾಗಿ, ಇವೆಲ್ಲದರ ಕುರಿತು ತನಿಖೆ ನಡೆಯಲಿದೆ. ಸಿಐಡಿ ಸತ್ಯಾಸತ್ಯತೆ ಪರಿಶೀಲಿಸಿ ವರದಿ ನೀಡಲಿದೆ ಎಂದು ಹೇಳಿದ್ದಾರೆ.

ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಸಭಾಪತಿ ಅವರ ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆಗೆ ತನ್ನದೇ ಆದ ಜವಬ್ದಾರಿಗಳಿರುತ್ತದೆ. ಏನೇ ಕ್ರಮ ಕೈಗೊಳ್ಳಬೇಕಿದ್ದರೂ ಮುಖ್ಯಮಂತ್ರಿ ಅಥವಾ ಗೃಹ ಸಚಿವರು ಆದೇಶ ನೀಡಬೇಕು. ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ನ್ಯಾಯಾಂಗ ತನಿಖೆ ಬಿಜೆಪಿ ಮನವಿ:

ಇತ್ತ ಸಿ.ಟಿ ವಿರುದ್ದದ ಆರೋಪದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದರೆ, ಅತ್ತ ಬಿಜೆಪಿ ನಿಯೋಗ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ಅವರನ್ನು ಭೇಟಿಯಾಗಿ ಪ್ರಕರಣದ ನ್ಯಾಯಾಂಗ ತನಿಖೆಗೆ ಕೋರಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ನೇತೃತ್ವದ ನಿಯೋಗ ನಿನ್ನೆ (ಡಿ.24) ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನ್ಯಾಯಾಂಗ ತನಿಖೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು PC : thenewsminute.com

ರಾಜ್ಯಪಾಲ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, “ಸಿ.ಟಿ ರವಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ಕುರಿತು ರಾಜ್ಯಪಾಲರಿಗೆ ವಿವರಿಸಿದ್ದೇವೆ. ಅವರ ವಿರುದ್ದದ ಆರೋಪ ಮತ್ತು ನಂತರ ನಡೆದ ಬೆಳವಣಿಗೆಗಳ ಕುರಿತು ನ್ಯಾಯಾಂಗ ತನಿಖೆಗೆ ಆಗಹಿಸಿದ್ದೇವೆ” ಎಂದು ಹೇಳಿದ್ದಾರೆ.

ಅಂಬೇಡ್ಕರ್‌ಗೆ ಅವಮಾನ| ಅಮಿತ್‌ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...