Homeಮುಖಪುಟಗುಜರಾತ್‌ನಿಂದ ಮಾನವ ಕಳ್ಳಸಾಗಾಣೆ? ಪ್ರಾನ್ಸ್‌ನಿಂದ ವಿಮಾನ ವಾಪಾಸ್ಸಾದ ಬಳಿಕ ಬಲವಾದ ಸಂಶಯ

ಗುಜರಾತ್‌ನಿಂದ ಮಾನವ ಕಳ್ಳಸಾಗಾಣೆ? ಪ್ರಾನ್ಸ್‌ನಿಂದ ವಿಮಾನ ವಾಪಾಸ್ಸಾದ ಬಳಿಕ ಬಲವಾದ ಸಂಶಯ

- Advertisement -
- Advertisement -

ನಿಕರಾಗುವಾಗೆ ತೆರಳುತ್ತಿದ್ದ ವಿಮಾನ ತಾಂತ್ರಿಕ ಕಾರಣಕ್ಕೆ ಪ್ರಾನ್ಸ್‌ನ ವಾಟ್ರಿ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ಈ ವೇಳೆ ಮಾನವ ಕಳ್ಳಸಾಗಣೆ ಶಂಕೆಯಲ್ಲಿ ಫ್ರಾನ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಬಳಿಕ ವಿಮಾನವನ್ನು ಭಾರತಕ್ಕೆ ವಾಪಾಸ್ಸು ಕಳುಹಿಸಿದ್ದರು. ಲೆಜೆಂಡ್ ಏರ್‌ಲೈನ್ಸ್‌ಗೆ ಸೇರಿದ A340 ವಿಮಾನ ಭಾರತಕ್ಕೆ ಬಂದಿಳಿದ ಬಳಿಕ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ)  ವಿಚಾರಣೆ ನಡೆಸಿದೆ. 21 ಮಂದಿಯ ಹೇಳಿಕೆಗಳನ್ನು ಸಿಐಡಿ ಪೊಲೀಸರು ದಾಖಲಿಸಿದ್ದು, ಈ ವೇಳೆ ಮಕ್ಕಳು ಸೇರಿ ಹಲವರಿಗೆ ಚಾರ್ಟರ್ಡ್ ವಿಮಾನವನ್ನು ಏಕೆ ಹತ್ತಿದರು ಎಂಬುದನ್ನು ವಿವರಿಸಲು ಸಾಧ್ಯವಾಗಲಿಲ್ಲ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್‌ಪಿ ರಾಜ್‌ಕುಮಾರ್, ಅವರನ್ನು ಫ್ರಾನ್ಸ್‌ನಿಂದ ವಾಪಸ್ ಕಳುಹಿಸಲಾಯಿತು. ನಿಕರಾಗುವಾದಲ್ಲಿ ಬಂದಿಳಿದ ನಂತರ ಅವರು ಅಕ್ರಮವಾಗಿ ಯುಎಸ್ ಪ್ರವೇಶಿಸಲು ನಿರ್ಧರಿಸಿದ್ದರು ಎಂಬ ವದಂತಿ ಇತ್ತು. ಅವರ ಹೇಳಿಕೆಗಳಲ್ಲಿ ಅವರು ಪ್ರವಾಸಿಗರಾಗಿ ಅಲ್ಲಿಗೆ ಹೋಗುತ್ತಿದ್ದಾರೆ ಎಂದು ನಮಗೆ ತಿಳಿಸಿದ್ದರು. ಅವರ ಪ್ರವಾಸದ ಹಿಂದೆ ಏಜೆಂಟ್‌ಗಳು ಯಾರೆಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಅಮೆರಿಕಕ್ಕೆ ಹೋಗಲು ಅವರು ಅಸಲಿ ಅಥವಾ ನಕಲಿ ದಾಖಲೆಗಳನ್ನು ಬಳಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಅವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಾವು ಅವರ ಹಣಕಾಸಿನ ವಹಿವಾಟುಗಳನ್ನು ಸಹ ಪರಿಶೀಲಿಸುತ್ತೇವೆ ಏಕೆಂದರೆ ಅವರು ಸಾಮಾನ್ಯ ಪ್ರವಾಸಿಗರಂತೆ ಅಲ್ಲಿಗೆ ಹೋಗುತ್ತಿದ್ದರೆ ಅವರು ಹೆಚ್ಚು ಪಾವತಿಸಬಾರದಿತ್ತು ಎಂದು ಹೇಳಿದ್ದಾರೆ.

ಸಂತ್ರಸ್ತರಿಗೆ ಯುಎಸ್ ಮತ್ತು ಇತರ ದೇಶಗಳಿಗೆ ಕಾನೂನುಬಾಹಿರವಾಗಿ ಪ್ರವೇಶಿಸಲು ಸಹಾಯ ಮಾಡುವ ಭರವಸೆ ನೀಡಿದ ಏಜೆಂಟರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿಐಡಿ ಬಯಸುತ್ತದೆ. ಈ ಏಜೆಂಟರು ನೀಡಿದ ಭರವಸೆಗಳ ಬಗ್ಗೆ ಸಂತ್ರಸ್ತರಿಂದ ಮಾಹಿತಿ ಪಡೆಯಲು ನಾವು 4 ತಂಡಗಳನ್ನು ರಚಿಸಿದ್ದೇವೆ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ಲೆಜೆಂಡ್ ಏರ್‌ಲೈನ್ಸ್‌ಗೆ ಸೇರಿದ ನಿಕರಾಗುವಾಗೆ ಹೊರಟಿದ್ದ 276 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ 65 ಗುಜರಾತಿಗಳು ಇದ್ದರು. ಮಾನವ ಕಳ್ಳಸಾಗಣೆಯ ಶಂಕೆ ಮೇಲೆ ವಿಮಾನ 4 ದಿನ ಫ್ರಾನ್ಸ್‌ನ ಪೊಲೀಸರ ವಶದಲ್ಲಿತ್ತು. ಇದರಲ್ಲಿ ಶಂಕಿತ ಇಬ್ಬರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಸ್ವ ಇಚ್ಛೆಯಿಂದ ವಿಮಾನವೇರಿದ್ದಾಗಿ ಪ್ರಯಾಣಿಕರು ಹೇಳಿಕೆ ನೀಡಿದ್ದರಿಂದ ಎಲ್ಲರಿಗೂ ಪ್ರಯಾಣ ಮುಂದುವರಿಸಲು ಅನುಮತಿಸಲಾಯಿತು ಎಂದು ಫ್ರಾನ್ಸ್‌ ನ್ಯಾಯಾಂಗ ಮೂಲಗಳು ಹೇಳಿದ್ದವು. ವಿಮಾನ ಡಿ. 26 ರಂದು ಮುಂಬೈಗೆ ವಾಪಾಸ್ಸು ಬಂದಿಳಿದಿತ್ತು. ನಂತರ ಗುಜರಾತ್‌ನ 21 ಪ್ರಯಾಣಿಕರು ಬುಧವಾರ ರಾಜ್ಯಕ್ಕೆ ವಾಪಾಸ್ಸಾಗಿದ್ದರು.

ಅನೇಕ ಪ್ರಯಾಣಿಕರು ನಿಕರಾಗುವಾಗೆ ಪ್ರವಾಸಿಗರಾಗಿ ಪ್ರಯಾಣಿಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ತಾವು ನಿಕರಾಗುವಾಕ್ಕೆ ಪ್ರಯಾಣಿಸುತ್ತಿದ್ದೆವು ಎಂದು ಹೇಳಿದ್ದಾರೆ. ವೀಸಾಗಳನ್ನು ಪಡೆಯಲು ಅವರು ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರು ಮತ್ತು ಕೆಲವರು ಪ್ರವಾಸಿ ವೀಸಾಗಳನ್ನು ಸಹ ಹೊಂದಿದ್ದರು. ಅವರು ಚಾರ್ಟರ್ಡ್ ವಿಮಾನವನ್ನು ಏಕೆ ಹತ್ತಿದರು ಎಂಬುದನ್ನು ವಿವರಿಸಲು ಸಾಧ್ಯವಾಗಲಿಲ್ಲ. ಅದರಲ್ಲಿ ಹೆಚ್ಚಾಗಿ ಒಂಟಿ ವ್ಯಕ್ತಿಗಳು ಮತ್ತು ಜೊತೆಯಲ್ಲಿ ಯಾರೂ ಇಲ್ಲದ ಅಪ್ರಾಪ್ತ ವಯಸ್ಕರನ್ನು ಹೊಂದಿತ್ತು. ಅವರು ಏಜೆಂಟರಿಗೆ ದೊಡ್ಡ ಮೊತ್ತದ ಹಣವನ್ನು ಏಕೆ ಪಾವತಿಸಿದರು ಎಂಬುದನ್ನು ವಿವರಣೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಪ್ರಯಾಣಿಕರು ಕನಿಷ್ಠ ಇಬ್ಬರು ಸ್ಥಳೀಯ ಏಜೆಂಟರನ್ನು ಹೆಸರಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದರು. ಅವರು ಮೆಕ್ಸಿಕೋ ಮೂಲಕ ಯುಎಸ್‌ಗೆ ಕರೆದೊಯ್ಯಲು ಪ್ರತಿ ವ್ಯಕ್ತಿಗೆ 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಿರಬಹುದು. ಪ್ರಸ್ತುತ ನಕಲಿ ದಾಖಲೆಗಳ ಪುರಾವೆ ಅಥವಾ ಪ್ರಯಾಣಿಕರು ದೂರು ಸಲ್ಲಿಸದ ಹೊರತು ಏಜೆಂಟ್‌ಗಳ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದರು.

ಡಿ.15 ರಿಂದ ಗುಜರಾತಿಗಳ ಅಕ್ರಮ ವಲಸೆಗೆ ಅನುಕೂಲ ಮಾಡಿಕೊಡುವ ಏಜೆನ್ಸಿಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಅಹಮದಾಬಾದ್ ಮತ್ತು ಗಾಂಧಿನಗರ ವಲಯಗಳಲ್ಲಿ 15 ವಲಸೆ ಏಜೆಂಟ್‌ಗಳಲ್ಲಿ ಕನಿಷ್ಠ 8 ಜನರನ್ನು ಸಿಐಡಿ ಬಂಧಿಸಿದೆ.

ಇದನ್ನು ಓದಿ; ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...