Homeಮುಖಪುಟಗುಜರಾತ್‌ನಿಂದ ಮಾನವ ಕಳ್ಳಸಾಗಾಣೆ? ಪ್ರಾನ್ಸ್‌ನಿಂದ ವಿಮಾನ ವಾಪಾಸ್ಸಾದ ಬಳಿಕ ಬಲವಾದ ಸಂಶಯ

ಗುಜರಾತ್‌ನಿಂದ ಮಾನವ ಕಳ್ಳಸಾಗಾಣೆ? ಪ್ರಾನ್ಸ್‌ನಿಂದ ವಿಮಾನ ವಾಪಾಸ್ಸಾದ ಬಳಿಕ ಬಲವಾದ ಸಂಶಯ

- Advertisement -
- Advertisement -

ನಿಕರಾಗುವಾಗೆ ತೆರಳುತ್ತಿದ್ದ ವಿಮಾನ ತಾಂತ್ರಿಕ ಕಾರಣಕ್ಕೆ ಪ್ರಾನ್ಸ್‌ನ ವಾಟ್ರಿ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ಈ ವೇಳೆ ಮಾನವ ಕಳ್ಳಸಾಗಣೆ ಶಂಕೆಯಲ್ಲಿ ಫ್ರಾನ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ಬಳಿಕ ವಿಮಾನವನ್ನು ಭಾರತಕ್ಕೆ ವಾಪಾಸ್ಸು ಕಳುಹಿಸಿದ್ದರು. ಲೆಜೆಂಡ್ ಏರ್‌ಲೈನ್ಸ್‌ಗೆ ಸೇರಿದ A340 ವಿಮಾನ ಭಾರತಕ್ಕೆ ಬಂದಿಳಿದ ಬಳಿಕ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಗುಜರಾತ್ ಅಪರಾಧ ತನಿಖಾ ಇಲಾಖೆ (ಸಿಐಡಿ)  ವಿಚಾರಣೆ ನಡೆಸಿದೆ. 21 ಮಂದಿಯ ಹೇಳಿಕೆಗಳನ್ನು ಸಿಐಡಿ ಪೊಲೀಸರು ದಾಖಲಿಸಿದ್ದು, ಈ ವೇಳೆ ಮಕ್ಕಳು ಸೇರಿ ಹಲವರಿಗೆ ಚಾರ್ಟರ್ಡ್ ವಿಮಾನವನ್ನು ಏಕೆ ಹತ್ತಿದರು ಎಂಬುದನ್ನು ವಿವರಿಸಲು ಸಾಧ್ಯವಾಗಲಿಲ್ಲ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್‌ಪಿ ರಾಜ್‌ಕುಮಾರ್, ಅವರನ್ನು ಫ್ರಾನ್ಸ್‌ನಿಂದ ವಾಪಸ್ ಕಳುಹಿಸಲಾಯಿತು. ನಿಕರಾಗುವಾದಲ್ಲಿ ಬಂದಿಳಿದ ನಂತರ ಅವರು ಅಕ್ರಮವಾಗಿ ಯುಎಸ್ ಪ್ರವೇಶಿಸಲು ನಿರ್ಧರಿಸಿದ್ದರು ಎಂಬ ವದಂತಿ ಇತ್ತು. ಅವರ ಹೇಳಿಕೆಗಳಲ್ಲಿ ಅವರು ಪ್ರವಾಸಿಗರಾಗಿ ಅಲ್ಲಿಗೆ ಹೋಗುತ್ತಿದ್ದಾರೆ ಎಂದು ನಮಗೆ ತಿಳಿಸಿದ್ದರು. ಅವರ ಪ್ರವಾಸದ ಹಿಂದೆ ಏಜೆಂಟ್‌ಗಳು ಯಾರೆಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಅಮೆರಿಕಕ್ಕೆ ಹೋಗಲು ಅವರು ಅಸಲಿ ಅಥವಾ ನಕಲಿ ದಾಖಲೆಗಳನ್ನು ಬಳಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಅವರ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಾವು ಅವರ ಹಣಕಾಸಿನ ವಹಿವಾಟುಗಳನ್ನು ಸಹ ಪರಿಶೀಲಿಸುತ್ತೇವೆ ಏಕೆಂದರೆ ಅವರು ಸಾಮಾನ್ಯ ಪ್ರವಾಸಿಗರಂತೆ ಅಲ್ಲಿಗೆ ಹೋಗುತ್ತಿದ್ದರೆ ಅವರು ಹೆಚ್ಚು ಪಾವತಿಸಬಾರದಿತ್ತು ಎಂದು ಹೇಳಿದ್ದಾರೆ.

ಸಂತ್ರಸ್ತರಿಗೆ ಯುಎಸ್ ಮತ್ತು ಇತರ ದೇಶಗಳಿಗೆ ಕಾನೂನುಬಾಹಿರವಾಗಿ ಪ್ರವೇಶಿಸಲು ಸಹಾಯ ಮಾಡುವ ಭರವಸೆ ನೀಡಿದ ಏಜೆಂಟರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಿಐಡಿ ಬಯಸುತ್ತದೆ. ಈ ಏಜೆಂಟರು ನೀಡಿದ ಭರವಸೆಗಳ ಬಗ್ಗೆ ಸಂತ್ರಸ್ತರಿಂದ ಮಾಹಿತಿ ಪಡೆಯಲು ನಾವು 4 ತಂಡಗಳನ್ನು ರಚಿಸಿದ್ದೇವೆ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ಲೆಜೆಂಡ್ ಏರ್‌ಲೈನ್ಸ್‌ಗೆ ಸೇರಿದ ನಿಕರಾಗುವಾಗೆ ಹೊರಟಿದ್ದ 276 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ 65 ಗುಜರಾತಿಗಳು ಇದ್ದರು. ಮಾನವ ಕಳ್ಳಸಾಗಣೆಯ ಶಂಕೆ ಮೇಲೆ ವಿಮಾನ 4 ದಿನ ಫ್ರಾನ್ಸ್‌ನ ಪೊಲೀಸರ ವಶದಲ್ಲಿತ್ತು. ಇದರಲ್ಲಿ ಶಂಕಿತ ಇಬ್ಬರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಸ್ವ ಇಚ್ಛೆಯಿಂದ ವಿಮಾನವೇರಿದ್ದಾಗಿ ಪ್ರಯಾಣಿಕರು ಹೇಳಿಕೆ ನೀಡಿದ್ದರಿಂದ ಎಲ್ಲರಿಗೂ ಪ್ರಯಾಣ ಮುಂದುವರಿಸಲು ಅನುಮತಿಸಲಾಯಿತು ಎಂದು ಫ್ರಾನ್ಸ್‌ ನ್ಯಾಯಾಂಗ ಮೂಲಗಳು ಹೇಳಿದ್ದವು. ವಿಮಾನ ಡಿ. 26 ರಂದು ಮುಂಬೈಗೆ ವಾಪಾಸ್ಸು ಬಂದಿಳಿದಿತ್ತು. ನಂತರ ಗುಜರಾತ್‌ನ 21 ಪ್ರಯಾಣಿಕರು ಬುಧವಾರ ರಾಜ್ಯಕ್ಕೆ ವಾಪಾಸ್ಸಾಗಿದ್ದರು.

ಅನೇಕ ಪ್ರಯಾಣಿಕರು ನಿಕರಾಗುವಾಗೆ ಪ್ರವಾಸಿಗರಾಗಿ ಪ್ರಯಾಣಿಸುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ತಾವು ನಿಕರಾಗುವಾಕ್ಕೆ ಪ್ರಯಾಣಿಸುತ್ತಿದ್ದೆವು ಎಂದು ಹೇಳಿದ್ದಾರೆ. ವೀಸಾಗಳನ್ನು ಪಡೆಯಲು ಅವರು ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರು ಮತ್ತು ಕೆಲವರು ಪ್ರವಾಸಿ ವೀಸಾಗಳನ್ನು ಸಹ ಹೊಂದಿದ್ದರು. ಅವರು ಚಾರ್ಟರ್ಡ್ ವಿಮಾನವನ್ನು ಏಕೆ ಹತ್ತಿದರು ಎಂಬುದನ್ನು ವಿವರಿಸಲು ಸಾಧ್ಯವಾಗಲಿಲ್ಲ. ಅದರಲ್ಲಿ ಹೆಚ್ಚಾಗಿ ಒಂಟಿ ವ್ಯಕ್ತಿಗಳು ಮತ್ತು ಜೊತೆಯಲ್ಲಿ ಯಾರೂ ಇಲ್ಲದ ಅಪ್ರಾಪ್ತ ವಯಸ್ಕರನ್ನು ಹೊಂದಿತ್ತು. ಅವರು ಏಜೆಂಟರಿಗೆ ದೊಡ್ಡ ಮೊತ್ತದ ಹಣವನ್ನು ಏಕೆ ಪಾವತಿಸಿದರು ಎಂಬುದನ್ನು ವಿವರಣೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಪ್ರಯಾಣಿಕರು ಕನಿಷ್ಠ ಇಬ್ಬರು ಸ್ಥಳೀಯ ಏಜೆಂಟರನ್ನು ಹೆಸರಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದರು. ಅವರು ಮೆಕ್ಸಿಕೋ ಮೂಲಕ ಯುಎಸ್‌ಗೆ ಕರೆದೊಯ್ಯಲು ಪ್ರತಿ ವ್ಯಕ್ತಿಗೆ 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಶುಲ್ಕವನ್ನು ವಿಧಿಸಿರಬಹುದು. ಪ್ರಸ್ತುತ ನಕಲಿ ದಾಖಲೆಗಳ ಪುರಾವೆ ಅಥವಾ ಪ್ರಯಾಣಿಕರು ದೂರು ಸಲ್ಲಿಸದ ಹೊರತು ಏಜೆಂಟ್‌ಗಳ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದರು.

ಡಿ.15 ರಿಂದ ಗುಜರಾತಿಗಳ ಅಕ್ರಮ ವಲಸೆಗೆ ಅನುಕೂಲ ಮಾಡಿಕೊಡುವ ಏಜೆನ್ಸಿಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಅಹಮದಾಬಾದ್ ಮತ್ತು ಗಾಂಧಿನಗರ ವಲಯಗಳಲ್ಲಿ 15 ವಲಸೆ ಏಜೆಂಟ್‌ಗಳಲ್ಲಿ ಕನಿಷ್ಠ 8 ಜನರನ್ನು ಸಿಐಡಿ ಬಂಧಿಸಿದೆ.

ಇದನ್ನು ಓದಿ; ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...