Homeಕರ್ನಾಟಕಸಂಜಯ ನಗರದ 'ಪೊಲೀಸ್-ಯುವಕರ ನಡುವಿನ ಹೊಡೆದಾಟ' ಪ್ರಕರಣ ಸಿಐಡಿಗೆ

ಸಂಜಯ ನಗರದ ‘ಪೊಲೀಸ್-ಯುವಕರ ನಡುವಿನ ಹೊಡೆದಾಟ’ ಪ್ರಕರಣ ಸಿಐಡಿಗೆ

ಸಂಜಯನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೆ ಮರುದಿನ ಪೊಲೀಸರೇ ಆ ಯುವಕರಿಗೆ ತೀವ್ರವಾಗಿ ಹಲ್ಲೆ ನಡೆಸಿದ ವಿಡಿಯೋ ಹೊರಬಂದಿತ್ತು. ಅಷ್ಟೇ ಅಲ್ಲದೇ ಮಹಜರು ಮಾಡಲು ಕರೆದುಕೊಂಡು ಹೋಗಿ ಪೊಲೀಸರು ಕಾರಣವಿಲ್ಲದೇ ಅವರ ಕಾಲಿಗೆ ಗುಂಡು ಹೊಡೆದಿದ್ದಾರೆಂದು ಆರೋಪಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಸಂಜಯ ನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈಗಾಗಲೇ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ್ದಾರೆ.

ದೌರ್ಜನ್ಯ ಕುರಿತು ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಐಯ್ಯರ್ ಮತ್ತು ಪ್ರಕಾಶ್‌ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ನಡುವೆ ಇದರ ಸಂಬಂಧದ 3 ಪ್ರಕರಣಗಳನ್ನು (ಮೊಕದ್ದಮೆ ಸಂಖ್ಯೆ 43/2020, 44 ಮತ್ತು 45) ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಸಂಜಯ ನಗರದಲ್ಲಿ ನಡೆದ ಘಟನೆಯ ನಂತರ ಯುವಕರಿಬ್ಬರನ್ನು ಬಂಧಿಸಿದ ಪೊಲೀಸರು ಅವರಿಬ್ಬರು ತಪ್ಪಿಸಿಕೊಳ್ಳಲು  ಪ್ರಯತ್ನಿಸಿದರು ಎಂದು ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಯುವಕನೊಬ್ಬನ ಕಾಲಿಗೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇಡೀ ಘಟನೆಗೂ ಮುಂಚೆ ಪೊಲೀಸರು ಯುವಕರ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡಿ ವೈರಲಾಗಿತ್ತು. ವಿಡಿಯೊದಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಇದರ ನಂತರ ಸಾರ್ವಜನಿಕರು ಪೊಲೀಸರ ವರ್ತನೆಗೆ ಛೀಮಾರಿ ಹಾಕಿದ್ದರು.

ಬೆಂಗಳೂರಿನ ಸಂಜಯ್ ನಗರ ವ್ಯಾಪ್ತಿಯಲ್ಲಿ ಒಬ್ಬ ಪೊಲೀಸ್ ಪೇದೆಯ ಮೇಲೆ ಯುವಕರು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿರುವ ಇಬ್ಬರು ಯುವಕರ ಮೇಲೆ…

Posted by Venkatesh Bubberjung on Thursday, March 26, 2020

ಘಟನೆಯ ಬಗ್ಗೆ ಬೆಂಗಳೂರಿನ ಕಮೀಷನರ್ ಮಾತನಾಡಿ “ಅವರು ಹಲ್ಲೆ ನಡೆಸಿದ್ದು ಅವರಿಬ್ಬರಿಗಲ್ಲ ಇಡೀ ಪೊಲೀಸ್ ಸಮೂಹಕ್ಕೆ ಎಂದಿದ್ದರು. ಸಧ್ಯಕ್ಕೆ ಸಿಐಡಿಗೆ ವರ್ಗಾವಣೆಯಾಗಿರುವ ಪ್ರಕರಣವೂ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿರುವ ಜನಾಧಿಕಾರ ಪರಿಷತ್ ನ ಆದರ್ಶ್ ಅಯ್ಯರ್ ಮಾತನಾಡಿ “ಮಾರ್ಚ 29 ಕ್ಕೆ ಈ ಪ್ರಕರಣದ ಬಗ್ಗೆ ಪಿಐಎಲ್ ಹಾಕಿದ್ದೆವು, 30 ಕ್ಕೆ ವಿಚಾರಣೆಯಾಗಿತ್ತು. ಈ ಬಗ್ಗೆ ಆರೋಪವಿರುವವರೇ ಪ್ರಕರಣವನ್ನು ನಡೆಸಿದರೆ ಸರಿಯಾಗುವುದಿಲ್ಲ ಎಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ನಾವು ಕೋರ್ಟಿನಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿಸುವಂತೆ ಆಗ್ರಹಿಸಿದ್ದೆವು, ಅಲ್ಲದೆ ಇದರೊಂದಿಗೆ ಒಟ್ಟು ಮೂರು ಆಗ್ರಹವನ್ನು ಕೊರ್ಟಿನಲ್ಲಿ ಆಗ್ರಹಿದ್ದೆವು. ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತನ ಕಾಲಿಗೆ ಗುಂಡು ಹೊಡೆಯಲಾಗಿದೆ, ಇದರಿಂದಾಗಿ ಆತನ ಜೀವನ ಪೂರ್ತಿಯಾಗಿ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಆತನಿಗೆ ಪರಿಹಾರ ನೀಡಬೇಕು ಎಂದು ಎರಡನೆ ಆಗ್ರಹವಾಗಿದೆ. ಮೂರನೇ ಆಗ್ರಹ ಯುವಕರಿಬ್ಬರ ಮೇಲಿರುವ ಮೂರು ಪ್ರಕರಣವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿತ್ತು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...