Homeಕರ್ನಾಟಕಸಂಜಯ ನಗರದ 'ಪೊಲೀಸ್-ಯುವಕರ ನಡುವಿನ ಹೊಡೆದಾಟ' ಪ್ರಕರಣ ಸಿಐಡಿಗೆ

ಸಂಜಯ ನಗರದ ‘ಪೊಲೀಸ್-ಯುವಕರ ನಡುವಿನ ಹೊಡೆದಾಟ’ ಪ್ರಕರಣ ಸಿಐಡಿಗೆ

ಸಂಜಯನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೆ ಮರುದಿನ ಪೊಲೀಸರೇ ಆ ಯುವಕರಿಗೆ ತೀವ್ರವಾಗಿ ಹಲ್ಲೆ ನಡೆಸಿದ ವಿಡಿಯೋ ಹೊರಬಂದಿತ್ತು. ಅಷ್ಟೇ ಅಲ್ಲದೇ ಮಹಜರು ಮಾಡಲು ಕರೆದುಕೊಂಡು ಹೋಗಿ ಪೊಲೀಸರು ಕಾರಣವಿಲ್ಲದೇ ಅವರ ಕಾಲಿಗೆ ಗುಂಡು ಹೊಡೆದಿದ್ದಾರೆಂದು ಆರೋಪಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಸಂಜಯ ನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈಗಾಗಲೇ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ್ದಾರೆ.

ದೌರ್ಜನ್ಯ ಕುರಿತು ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಐಯ್ಯರ್ ಮತ್ತು ಪ್ರಕಾಶ್‌ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ನಡುವೆ ಇದರ ಸಂಬಂಧದ 3 ಪ್ರಕರಣಗಳನ್ನು (ಮೊಕದ್ದಮೆ ಸಂಖ್ಯೆ 43/2020, 44 ಮತ್ತು 45) ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಸಂಜಯ ನಗರದಲ್ಲಿ ನಡೆದ ಘಟನೆಯ ನಂತರ ಯುವಕರಿಬ್ಬರನ್ನು ಬಂಧಿಸಿದ ಪೊಲೀಸರು ಅವರಿಬ್ಬರು ತಪ್ಪಿಸಿಕೊಳ್ಳಲು  ಪ್ರಯತ್ನಿಸಿದರು ಎಂದು ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಯುವಕನೊಬ್ಬನ ಕಾಲಿಗೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇಡೀ ಘಟನೆಗೂ ಮುಂಚೆ ಪೊಲೀಸರು ಯುವಕರ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡಿ ವೈರಲಾಗಿತ್ತು. ವಿಡಿಯೊದಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಇದರ ನಂತರ ಸಾರ್ವಜನಿಕರು ಪೊಲೀಸರ ವರ್ತನೆಗೆ ಛೀಮಾರಿ ಹಾಕಿದ್ದರು.

ಬೆಂಗಳೂರಿನ ಸಂಜಯ್ ನಗರ ವ್ಯಾಪ್ತಿಯಲ್ಲಿ ಒಬ್ಬ ಪೊಲೀಸ್ ಪೇದೆಯ ಮೇಲೆ ಯುವಕರು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿರುವ ಇಬ್ಬರು ಯುವಕರ ಮೇಲೆ…

Posted by Venkatesh Bubberjung on Thursday, March 26, 2020

ಘಟನೆಯ ಬಗ್ಗೆ ಬೆಂಗಳೂರಿನ ಕಮೀಷನರ್ ಮಾತನಾಡಿ “ಅವರು ಹಲ್ಲೆ ನಡೆಸಿದ್ದು ಅವರಿಬ್ಬರಿಗಲ್ಲ ಇಡೀ ಪೊಲೀಸ್ ಸಮೂಹಕ್ಕೆ ಎಂದಿದ್ದರು. ಸಧ್ಯಕ್ಕೆ ಸಿಐಡಿಗೆ ವರ್ಗಾವಣೆಯಾಗಿರುವ ಪ್ರಕರಣವೂ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿರುವ ಜನಾಧಿಕಾರ ಪರಿಷತ್ ನ ಆದರ್ಶ್ ಅಯ್ಯರ್ ಮಾತನಾಡಿ “ಮಾರ್ಚ 29 ಕ್ಕೆ ಈ ಪ್ರಕರಣದ ಬಗ್ಗೆ ಪಿಐಎಲ್ ಹಾಕಿದ್ದೆವು, 30 ಕ್ಕೆ ವಿಚಾರಣೆಯಾಗಿತ್ತು. ಈ ಬಗ್ಗೆ ಆರೋಪವಿರುವವರೇ ಪ್ರಕರಣವನ್ನು ನಡೆಸಿದರೆ ಸರಿಯಾಗುವುದಿಲ್ಲ ಎಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ನಾವು ಕೋರ್ಟಿನಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿಸುವಂತೆ ಆಗ್ರಹಿಸಿದ್ದೆವು, ಅಲ್ಲದೆ ಇದರೊಂದಿಗೆ ಒಟ್ಟು ಮೂರು ಆಗ್ರಹವನ್ನು ಕೊರ್ಟಿನಲ್ಲಿ ಆಗ್ರಹಿದ್ದೆವು. ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತನ ಕಾಲಿಗೆ ಗುಂಡು ಹೊಡೆಯಲಾಗಿದೆ, ಇದರಿಂದಾಗಿ ಆತನ ಜೀವನ ಪೂರ್ತಿಯಾಗಿ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಆತನಿಗೆ ಪರಿಹಾರ ನೀಡಬೇಕು ಎಂದು ಎರಡನೆ ಆಗ್ರಹವಾಗಿದೆ. ಮೂರನೇ ಆಗ್ರಹ ಯುವಕರಿಬ್ಬರ ಮೇಲಿರುವ ಮೂರು ಪ್ರಕರಣವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿತ್ತು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...