Homeಕರ್ನಾಟಕಸಂಜಯ ನಗರದ 'ಪೊಲೀಸ್-ಯುವಕರ ನಡುವಿನ ಹೊಡೆದಾಟ' ಪ್ರಕರಣ ಸಿಐಡಿಗೆ

ಸಂಜಯ ನಗರದ ‘ಪೊಲೀಸ್-ಯುವಕರ ನಡುವಿನ ಹೊಡೆದಾಟ’ ಪ್ರಕರಣ ಸಿಐಡಿಗೆ

ಸಂಜಯನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ದಾಳಿ ನಡೆಸಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೆ ಮರುದಿನ ಪೊಲೀಸರೇ ಆ ಯುವಕರಿಗೆ ತೀವ್ರವಾಗಿ ಹಲ್ಲೆ ನಡೆಸಿದ ವಿಡಿಯೋ ಹೊರಬಂದಿತ್ತು. ಅಷ್ಟೇ ಅಲ್ಲದೇ ಮಹಜರು ಮಾಡಲು ಕರೆದುಕೊಂಡು ಹೋಗಿ ಪೊಲೀಸರು ಕಾರಣವಿಲ್ಲದೇ ಅವರ ಕಾಲಿಗೆ ಗುಂಡು ಹೊಡೆದಿದ್ದಾರೆಂದು ಆರೋಪಿಸಲಾಗಿತ್ತು.

- Advertisement -
- Advertisement -

ಬೆಂಗಳೂರಿನ ಸಂಜಯ ನಗರದಲ್ಲಿ ಯುವಕರಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈಗಾಗಲೇ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿ ತನಿಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಿದ್ದಾರೆ.

ದೌರ್ಜನ್ಯ ಕುರಿತು ಬೆಂಗಳೂರಿನ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಐಯ್ಯರ್ ಮತ್ತು ಪ್ರಕಾಶ್‌ಬಾಬು ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಈ ನಡುವೆ ಇದರ ಸಂಬಂಧದ 3 ಪ್ರಕರಣಗಳನ್ನು (ಮೊಕದ್ದಮೆ ಸಂಖ್ಯೆ 43/2020, 44 ಮತ್ತು 45) ತನಿಖೆ ನಡೆಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಐಡಿಗೆ ಹಸ್ತಾಂತರಿಸಿದ್ದಾರೆ.

ಸಂಜಯ ನಗರದಲ್ಲಿ ನಡೆದ ಘಟನೆಯ ನಂತರ ಯುವಕರಿಬ್ಬರನ್ನು ಬಂಧಿಸಿದ ಪೊಲೀಸರು ಅವರಿಬ್ಬರು ತಪ್ಪಿಸಿಕೊಳ್ಳಲು  ಪ್ರಯತ್ನಿಸಿದರು ಎಂದು ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ ನಂತರ ಯುವಕನೊಬ್ಬನ ಕಾಲಿಗೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಇಡೀ ಘಟನೆಗೂ ಮುಂಚೆ ಪೊಲೀಸರು ಯುವಕರ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡಿ ವೈರಲಾಗಿತ್ತು. ವಿಡಿಯೊದಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಇದರ ನಂತರ ಸಾರ್ವಜನಿಕರು ಪೊಲೀಸರ ವರ್ತನೆಗೆ ಛೀಮಾರಿ ಹಾಕಿದ್ದರು.

ಬೆಂಗಳೂರಿನ ಸಂಜಯ್ ನಗರ ವ್ಯಾಪ್ತಿಯಲ್ಲಿ ಒಬ್ಬ ಪೊಲೀಸ್ ಪೇದೆಯ ಮೇಲೆ ಯುವಕರು ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿರುವ ಇಬ್ಬರು ಯುವಕರ ಮೇಲೆ…

Posted by Venkatesh Bubberjung on Thursday, March 26, 2020

ಘಟನೆಯ ಬಗ್ಗೆ ಬೆಂಗಳೂರಿನ ಕಮೀಷನರ್ ಮಾತನಾಡಿ “ಅವರು ಹಲ್ಲೆ ನಡೆಸಿದ್ದು ಅವರಿಬ್ಬರಿಗಲ್ಲ ಇಡೀ ಪೊಲೀಸ್ ಸಮೂಹಕ್ಕೆ ಎಂದಿದ್ದರು. ಸಧ್ಯಕ್ಕೆ ಸಿಐಡಿಗೆ ವರ್ಗಾವಣೆಯಾಗಿರುವ ಪ್ರಕರಣವೂ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಪ್ರಕರಣದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಾಕಿರುವ ಜನಾಧಿಕಾರ ಪರಿಷತ್ ನ ಆದರ್ಶ್ ಅಯ್ಯರ್ ಮಾತನಾಡಿ “ಮಾರ್ಚ 29 ಕ್ಕೆ ಈ ಪ್ರಕರಣದ ಬಗ್ಗೆ ಪಿಐಎಲ್ ಹಾಕಿದ್ದೆವು, 30 ಕ್ಕೆ ವಿಚಾರಣೆಯಾಗಿತ್ತು. ಈ ಬಗ್ಗೆ ಆರೋಪವಿರುವವರೇ ಪ್ರಕರಣವನ್ನು ನಡೆಸಿದರೆ ಸರಿಯಾಗುವುದಿಲ್ಲ ಎಂದು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ನಾವು ಕೋರ್ಟಿನಲ್ಲಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿಸುವಂತೆ ಆಗ್ರಹಿಸಿದ್ದೆವು, ಅಲ್ಲದೆ ಇದರೊಂದಿಗೆ ಒಟ್ಟು ಮೂರು ಆಗ್ರಹವನ್ನು ಕೊರ್ಟಿನಲ್ಲಿ ಆಗ್ರಹಿದ್ದೆವು. ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಆತನ ಕಾಲಿಗೆ ಗುಂಡು ಹೊಡೆಯಲಾಗಿದೆ, ಇದರಿಂದಾಗಿ ಆತನ ಜೀವನ ಪೂರ್ತಿಯಾಗಿ ಕಷ್ಟಪಡಬೇಕಾಗುತ್ತದೆ. ಇದಕ್ಕಾಗಿ ಆತನಿಗೆ ಪರಿಹಾರ ನೀಡಬೇಕು ಎಂದು ಎರಡನೆ ಆಗ್ರಹವಾಗಿದೆ. ಮೂರನೇ ಆಗ್ರಹ ಯುವಕರಿಬ್ಬರ ಮೇಲಿರುವ ಮೂರು ಪ್ರಕರಣವನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿತ್ತು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....