Homeಚಳವಳಿಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಟಿಗೆ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಸ್ವರ ಭಾಸ್ಕರ್‌, ಜೋಯಾ ಅಖ್ತರ್ ಸೇರಿ ಹಲವರು ಬೆಂಬಲ ವ್ಯಕ್ತಪಡಿದ್ದಾರೆ.

- Advertisement -
- Advertisement -

ತಮ್ಮ ಮೇಲೆ ಕಳೆದ ಐದು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯವನ್ನು ನೆನಪಿಸಿಕೊಂಡಿರುವ ಬಹುಭಾಷಾ ನಟಿ ಭಾವನಾ ಮೆನನ್, ತಾವು ತಪ್ಪು ಮಾಡದಿದ್ದರೂ ಘಟನೆಯ ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ ಎಂದು ಕರಾಳ ಘಟನೆಯ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

2017 ರಲ್ಲಿ ದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ನಟಿ ಭಾವನಾ ಮೆನನ್ ಅವರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ಕೃತ್ಯದಲ್ಲಿ ಮಲಯಾಳಂ ನಟ ದಿಲೀಪ್‌‌‌‌‌‌‌‌‌ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆಗೆ ಐದು ವರ್ಷವಾದ ಹಿನ್ನೆಲೆ ಈ ವರ್ಷಗಳಲ್ಲಿ ತಾವು ಅನುಭವಿಸಿದ ತಳಮಳ, ಅವಮಾನ, ನೋವನ್ನು ನಟಿ ತಮ್ಮ Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಇದು ಸುಲಭದ ಪ್ರಯಾಣವಲ್ಲ, ಸಂತ್ರಸ್ತೆಯಿಂದ ಹಿಡಿದು ಗಟ್ಟಿಯಾಗಿ ನಿಲ್ಲುವ ಪ್ರಯಾಣ ಅಷ್ಟು ಸುಲಭವವಲ್ಲ. ಈ ಐದು ವರ್ಷಗಳಿಂದ, ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ದೇಶದಲ್ಲಿ ನನ್ನ ಹೆಸರು ಮತ್ತು ನನ್ನ ಗುರುತನ್ನು ಹತ್ತಿಕ್ಕಲಾಗಿದೆ” ಎಂದು ಭಾವನಾ ಬರೆದಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

’ನಾನು ತಪ್ಪು ಮಾಡದಿದ್ದರೂ ಕೂಡ ನನ್ನನ್ನು ಮೌನವಾಗಿಸುವ, ಅವಮಾನಿಸುವ, ಎಲ್ಲರಿಂದ ಪ್ರತ್ಯೇಕಿಸುವ ಹಲವು ಪ್ರಯತ್ನಗಳು ನಡೆದಿವೆ. ಆದರೆ, ನನ್ನ ಧ್ವನಿಯನ್ನು ಜೀವಂತವಾಗಿಡುವಲ್ಲಿ ಹಲವರು ನನ್ನ ಜೊತೆಗೆ ನಿಂತಿದ್ದಾರೆ. ಈಗ ನನ್ನ ಬಗ್ಗೆ ಪರವಾಗಿ ಮಾತನಾಡುವ ಅನೇಕ ಧ್ವನಿಗಳಿವೆ. ನ್ಯಾಯದ ಹೋರಾಟದಲ್ಲಿ ನಾನು ಒಂಟಿಯಲ್ಲ’ ಎಂದಿದ್ದಾರೆ.

’ನ್ಯಾಯವು ಗೆಲ್ಲಲು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು, ಬೇರೆ ಯಾರು ಮತ್ತೆ ಇಂತಹ ಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ನಾನು ನನ್ನ ಪ್ರಯಾಣವನ್ನು (ಹೋರಾಟವನ್ನು) ಮುಂದುವರೆಸುತ್ತೇನೆ. ಇಂತಹ ಸ್ಥಿತಿಯಲ್ಲಿ ನನ್ನ ಜೊತೆಗೆ ನಿಂತ ನಿಮಗೆ ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ಭಾವನಾ ಮೆನನ್ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಲವು ನಟ ನಟಿಯರು ಶೇರ್‌ ಮಾಡಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಕಲಾವಿದರಾದ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಅನ್ನಾ ಬೆನ್ ಮುಂತಾದ ಅನೇಕ ಸೆಲೆಬ್ರಿಟಿಗಳು ಭಾವನಾ ಧೈರ್ಯವನ್ನು ತೋರಿಸಿದ್ದಕ್ಕಾಗಿ ಮತ್ತು ಈ ವಿಷಯದ ಬಗ್ಗೆ ಮಾತನಾಡಿದ್ದಕ್ಕಾಗಿ ಶ್ಲಾಘಿಸಿದರು. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಭಾವನಾ ಅವರ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬಾಲಿವುಡ್ ಚಿತ್ರರಂಗ ಕೂಡ ಭಾವನಾಗೆ ಬೆಂಬಲ ನೀಡಿದೆ. ನಿರ್ಮಾಪಕಿ ಮತ್ತು ಲೇಖಕಿ ಜೋಯಾ ಅಖ್ತರ್ ಕೂಡ ಭಾವನಾ ಅವರ ಪೋಸ್ಟ್ ಅನ್ನು ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮೋರ್‌ ಪವರ್‌ ಟು ಯು ಎಂದು ಬರೆದಿದ್ದಾರೆ. ನಟಿಯರಾದ ರಿಚಾ ಚಡ್ಡಾ ಮತ್ತು ಸ್ವರಾ ಭಾಸ್ಕರ್ ಅವರು ಭಾವನಾ ಅವರ ಪೋಸ್ಟ್ ಅನ್ನು ರಿಟ್ವೀಟ್ ಮಾಡಿ ತಮ್ಮ ಬೆಂಬಲ ನೀಡಿದ್ದಾರೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

Actress assault: As Dileep approaches SC, Kerala govt must clarify this  question - The Week
ನಟ ದಿಲೀಪ್

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ಎಫ್‌ಐಆರ್‌ನಲ್ಲಿ ನಟ ದಿಲೀಪ್, ಸೋದರ ಮಾವ ಟಿಎನ್ ಸೂರಜ್, ದಿಲೀಪ್ ಅವರ ಸಹೋದರ ಅನೂಪ್, ಒಬ್ಬ ವಿಐಪಿ ಮತ್ತು ಇತರ ಇಬ್ಬರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹೊಸ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದಿಲೀಪ್ ಜೊತೆಗೆ ಅವರ ಕಿರಿಯ ಸಹೋದರ ಪಿ. ಶಿವಕುಮಾರ್ ಮತ್ತು ಸೋದರ ಮಾವ ಟಿಎನ್ ಸೂರಜ್ ಸಹ ಅದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಹುಭಾಷಾ ನಟಿ ಭಾವನ ಕನ್ನಡದಲ್ಲಿ ಜಾಕಿ, ಟಗರು, ವಿಷ್ಣುವರ್ಧನ, ಭಜರಂಗಿ-2, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್, ಮುಕುಂದ ಮುರಾರಿ, ಚೌಕ, 99 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...