Homeಚಳವಳಿಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಟಿಗೆ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಸ್ವರ ಭಾಸ್ಕರ್‌, ಜೋಯಾ ಅಖ್ತರ್ ಸೇರಿ ಹಲವರು ಬೆಂಬಲ ವ್ಯಕ್ತಪಡಿದ್ದಾರೆ.

- Advertisement -
- Advertisement -

ತಮ್ಮ ಮೇಲೆ ಕಳೆದ ಐದು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯವನ್ನು ನೆನಪಿಸಿಕೊಂಡಿರುವ ಬಹುಭಾಷಾ ನಟಿ ಭಾವನಾ ಮೆನನ್, ತಾವು ತಪ್ಪು ಮಾಡದಿದ್ದರೂ ಘಟನೆಯ ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ ಎಂದು ಕರಾಳ ಘಟನೆಯ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

2017 ರಲ್ಲಿ ದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ನಟಿ ಭಾವನಾ ಮೆನನ್ ಅವರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ಕೃತ್ಯದಲ್ಲಿ ಮಲಯಾಳಂ ನಟ ದಿಲೀಪ್‌‌‌‌‌‌‌‌‌ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆಗೆ ಐದು ವರ್ಷವಾದ ಹಿನ್ನೆಲೆ ಈ ವರ್ಷಗಳಲ್ಲಿ ತಾವು ಅನುಭವಿಸಿದ ತಳಮಳ, ಅವಮಾನ, ನೋವನ್ನು ನಟಿ ತಮ್ಮ Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಇದು ಸುಲಭದ ಪ್ರಯಾಣವಲ್ಲ, ಸಂತ್ರಸ್ತೆಯಿಂದ ಹಿಡಿದು ಗಟ್ಟಿಯಾಗಿ ನಿಲ್ಲುವ ಪ್ರಯಾಣ ಅಷ್ಟು ಸುಲಭವವಲ್ಲ. ಈ ಐದು ವರ್ಷಗಳಿಂದ, ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ದೇಶದಲ್ಲಿ ನನ್ನ ಹೆಸರು ಮತ್ತು ನನ್ನ ಗುರುತನ್ನು ಹತ್ತಿಕ್ಕಲಾಗಿದೆ” ಎಂದು ಭಾವನಾ ಬರೆದಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

’ನಾನು ತಪ್ಪು ಮಾಡದಿದ್ದರೂ ಕೂಡ ನನ್ನನ್ನು ಮೌನವಾಗಿಸುವ, ಅವಮಾನಿಸುವ, ಎಲ್ಲರಿಂದ ಪ್ರತ್ಯೇಕಿಸುವ ಹಲವು ಪ್ರಯತ್ನಗಳು ನಡೆದಿವೆ. ಆದರೆ, ನನ್ನ ಧ್ವನಿಯನ್ನು ಜೀವಂತವಾಗಿಡುವಲ್ಲಿ ಹಲವರು ನನ್ನ ಜೊತೆಗೆ ನಿಂತಿದ್ದಾರೆ. ಈಗ ನನ್ನ ಬಗ್ಗೆ ಪರವಾಗಿ ಮಾತನಾಡುವ ಅನೇಕ ಧ್ವನಿಗಳಿವೆ. ನ್ಯಾಯದ ಹೋರಾಟದಲ್ಲಿ ನಾನು ಒಂಟಿಯಲ್ಲ’ ಎಂದಿದ್ದಾರೆ.

’ನ್ಯಾಯವು ಗೆಲ್ಲಲು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು, ಬೇರೆ ಯಾರು ಮತ್ತೆ ಇಂತಹ ಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ನಾನು ನನ್ನ ಪ್ರಯಾಣವನ್ನು (ಹೋರಾಟವನ್ನು) ಮುಂದುವರೆಸುತ್ತೇನೆ. ಇಂತಹ ಸ್ಥಿತಿಯಲ್ಲಿ ನನ್ನ ಜೊತೆಗೆ ನಿಂತ ನಿಮಗೆ ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ಭಾವನಾ ಮೆನನ್ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಲವು ನಟ ನಟಿಯರು ಶೇರ್‌ ಮಾಡಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಕಲಾವಿದರಾದ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಅನ್ನಾ ಬೆನ್ ಮುಂತಾದ ಅನೇಕ ಸೆಲೆಬ್ರಿಟಿಗಳು ಭಾವನಾ ಧೈರ್ಯವನ್ನು ತೋರಿಸಿದ್ದಕ್ಕಾಗಿ ಮತ್ತು ಈ ವಿಷಯದ ಬಗ್ಗೆ ಮಾತನಾಡಿದ್ದಕ್ಕಾಗಿ ಶ್ಲಾಘಿಸಿದರು. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಭಾವನಾ ಅವರ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬಾಲಿವುಡ್ ಚಿತ್ರರಂಗ ಕೂಡ ಭಾವನಾಗೆ ಬೆಂಬಲ ನೀಡಿದೆ. ನಿರ್ಮಾಪಕಿ ಮತ್ತು ಲೇಖಕಿ ಜೋಯಾ ಅಖ್ತರ್ ಕೂಡ ಭಾವನಾ ಅವರ ಪೋಸ್ಟ್ ಅನ್ನು ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮೋರ್‌ ಪವರ್‌ ಟು ಯು ಎಂದು ಬರೆದಿದ್ದಾರೆ. ನಟಿಯರಾದ ರಿಚಾ ಚಡ್ಡಾ ಮತ್ತು ಸ್ವರಾ ಭಾಸ್ಕರ್ ಅವರು ಭಾವನಾ ಅವರ ಪೋಸ್ಟ್ ಅನ್ನು ರಿಟ್ವೀಟ್ ಮಾಡಿ ತಮ್ಮ ಬೆಂಬಲ ನೀಡಿದ್ದಾರೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

Actress assault: As Dileep approaches SC, Kerala govt must clarify this  question - The Week
ನಟ ದಿಲೀಪ್

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ಎಫ್‌ಐಆರ್‌ನಲ್ಲಿ ನಟ ದಿಲೀಪ್, ಸೋದರ ಮಾವ ಟಿಎನ್ ಸೂರಜ್, ದಿಲೀಪ್ ಅವರ ಸಹೋದರ ಅನೂಪ್, ಒಬ್ಬ ವಿಐಪಿ ಮತ್ತು ಇತರ ಇಬ್ಬರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹೊಸ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದಿಲೀಪ್ ಜೊತೆಗೆ ಅವರ ಕಿರಿಯ ಸಹೋದರ ಪಿ. ಶಿವಕುಮಾರ್ ಮತ್ತು ಸೋದರ ಮಾವ ಟಿಎನ್ ಸೂರಜ್ ಸಹ ಅದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಹುಭಾಷಾ ನಟಿ ಭಾವನ ಕನ್ನಡದಲ್ಲಿ ಜಾಕಿ, ಟಗರು, ವಿಷ್ಣುವರ್ಧನ, ಭಜರಂಗಿ-2, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್, ಮುಕುಂದ ಮುರಾರಿ, ಚೌಕ, 99 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...