Homeಚಳವಳಿಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಟಿಗೆ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಸ್ವರ ಭಾಸ್ಕರ್‌, ಜೋಯಾ ಅಖ್ತರ್ ಸೇರಿ ಹಲವರು ಬೆಂಬಲ ವ್ಯಕ್ತಪಡಿದ್ದಾರೆ.

- Advertisement -
- Advertisement -

ತಮ್ಮ ಮೇಲೆ ಕಳೆದ ಐದು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯವನ್ನು ನೆನಪಿಸಿಕೊಂಡಿರುವ ಬಹುಭಾಷಾ ನಟಿ ಭಾವನಾ ಮೆನನ್, ತಾವು ತಪ್ಪು ಮಾಡದಿದ್ದರೂ ಘಟನೆಯ ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ ಎಂದು ಕರಾಳ ಘಟನೆಯ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

2017 ರಲ್ಲಿ ದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ನಟಿ ಭಾವನಾ ಮೆನನ್ ಅವರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ಕೃತ್ಯದಲ್ಲಿ ಮಲಯಾಳಂ ನಟ ದಿಲೀಪ್‌‌‌‌‌‌‌‌‌ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆಗೆ ಐದು ವರ್ಷವಾದ ಹಿನ್ನೆಲೆ ಈ ವರ್ಷಗಳಲ್ಲಿ ತಾವು ಅನುಭವಿಸಿದ ತಳಮಳ, ಅವಮಾನ, ನೋವನ್ನು ನಟಿ ತಮ್ಮ Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಇದು ಸುಲಭದ ಪ್ರಯಾಣವಲ್ಲ, ಸಂತ್ರಸ್ತೆಯಿಂದ ಹಿಡಿದು ಗಟ್ಟಿಯಾಗಿ ನಿಲ್ಲುವ ಪ್ರಯಾಣ ಅಷ್ಟು ಸುಲಭವವಲ್ಲ. ಈ ಐದು ವರ್ಷಗಳಿಂದ, ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ದೇಶದಲ್ಲಿ ನನ್ನ ಹೆಸರು ಮತ್ತು ನನ್ನ ಗುರುತನ್ನು ಹತ್ತಿಕ್ಕಲಾಗಿದೆ” ಎಂದು ಭಾವನಾ ಬರೆದಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

’ನಾನು ತಪ್ಪು ಮಾಡದಿದ್ದರೂ ಕೂಡ ನನ್ನನ್ನು ಮೌನವಾಗಿಸುವ, ಅವಮಾನಿಸುವ, ಎಲ್ಲರಿಂದ ಪ್ರತ್ಯೇಕಿಸುವ ಹಲವು ಪ್ರಯತ್ನಗಳು ನಡೆದಿವೆ. ಆದರೆ, ನನ್ನ ಧ್ವನಿಯನ್ನು ಜೀವಂತವಾಗಿಡುವಲ್ಲಿ ಹಲವರು ನನ್ನ ಜೊತೆಗೆ ನಿಂತಿದ್ದಾರೆ. ಈಗ ನನ್ನ ಬಗ್ಗೆ ಪರವಾಗಿ ಮಾತನಾಡುವ ಅನೇಕ ಧ್ವನಿಗಳಿವೆ. ನ್ಯಾಯದ ಹೋರಾಟದಲ್ಲಿ ನಾನು ಒಂಟಿಯಲ್ಲ’ ಎಂದಿದ್ದಾರೆ.

’ನ್ಯಾಯವು ಗೆಲ್ಲಲು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು, ಬೇರೆ ಯಾರು ಮತ್ತೆ ಇಂತಹ ಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ನಾನು ನನ್ನ ಪ್ರಯಾಣವನ್ನು (ಹೋರಾಟವನ್ನು) ಮುಂದುವರೆಸುತ್ತೇನೆ. ಇಂತಹ ಸ್ಥಿತಿಯಲ್ಲಿ ನನ್ನ ಜೊತೆಗೆ ನಿಂತ ನಿಮಗೆ ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ಭಾವನಾ ಮೆನನ್ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಲವು ನಟ ನಟಿಯರು ಶೇರ್‌ ಮಾಡಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಕಲಾವಿದರಾದ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಅನ್ನಾ ಬೆನ್ ಮುಂತಾದ ಅನೇಕ ಸೆಲೆಬ್ರಿಟಿಗಳು ಭಾವನಾ ಧೈರ್ಯವನ್ನು ತೋರಿಸಿದ್ದಕ್ಕಾಗಿ ಮತ್ತು ಈ ವಿಷಯದ ಬಗ್ಗೆ ಮಾತನಾಡಿದ್ದಕ್ಕಾಗಿ ಶ್ಲಾಘಿಸಿದರು. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಭಾವನಾ ಅವರ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬಾಲಿವುಡ್ ಚಿತ್ರರಂಗ ಕೂಡ ಭಾವನಾಗೆ ಬೆಂಬಲ ನೀಡಿದೆ. ನಿರ್ಮಾಪಕಿ ಮತ್ತು ಲೇಖಕಿ ಜೋಯಾ ಅಖ್ತರ್ ಕೂಡ ಭಾವನಾ ಅವರ ಪೋಸ್ಟ್ ಅನ್ನು ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮೋರ್‌ ಪವರ್‌ ಟು ಯು ಎಂದು ಬರೆದಿದ್ದಾರೆ. ನಟಿಯರಾದ ರಿಚಾ ಚಡ್ಡಾ ಮತ್ತು ಸ್ವರಾ ಭಾಸ್ಕರ್ ಅವರು ಭಾವನಾ ಅವರ ಪೋಸ್ಟ್ ಅನ್ನು ರಿಟ್ವೀಟ್ ಮಾಡಿ ತಮ್ಮ ಬೆಂಬಲ ನೀಡಿದ್ದಾರೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

Actress assault: As Dileep approaches SC, Kerala govt must clarify this  question - The Week
ನಟ ದಿಲೀಪ್

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ಎಫ್‌ಐಆರ್‌ನಲ್ಲಿ ನಟ ದಿಲೀಪ್, ಸೋದರ ಮಾವ ಟಿಎನ್ ಸೂರಜ್, ದಿಲೀಪ್ ಅವರ ಸಹೋದರ ಅನೂಪ್, ಒಬ್ಬ ವಿಐಪಿ ಮತ್ತು ಇತರ ಇಬ್ಬರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹೊಸ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದಿಲೀಪ್ ಜೊತೆಗೆ ಅವರ ಕಿರಿಯ ಸಹೋದರ ಪಿ. ಶಿವಕುಮಾರ್ ಮತ್ತು ಸೋದರ ಮಾವ ಟಿಎನ್ ಸೂರಜ್ ಸಹ ಅದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಹುಭಾಷಾ ನಟಿ ಭಾವನ ಕನ್ನಡದಲ್ಲಿ ಜಾಕಿ, ಟಗರು, ವಿಷ್ಣುವರ್ಧನ, ಭಜರಂಗಿ-2, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್, ಮುಕುಂದ ಮುರಾರಿ, ಚೌಕ, 99 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...