Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...