Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...