Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....