Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...