Homeಮುಖಪುಟಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಮರ್ಯಾದೆ ಹತ್ಯೆ ಬಗ್ಗೆ ಸಿನಿಮಾ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

- Advertisement -
- Advertisement -

2018ರಲ್ಲಿ ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಪ್ರಣಯ್ ತಂದೆ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಾಲಯದ ನಿರ್ದೇಶನದಂತೆ ಚಲನಚಿತ್ರ ನಿರ್ದೇಶಕ ರಾಮ್‌ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಮ್ ಗೋಪಾಲ್ ವರ್ಮಾರವರು ‘ಮರ್ಡರ್’ ಎಂಬ ಸಿನಿಮಾವನ್ನು ನಿರ್ದೇಶಿಸಿವುದಾಗಿ ಘೋಷಿಸಿದ್ದಾರೆ. ಇದು 2017, 2018ರಲ್ಲಿ ನಡೆದ ಮಾರ್ಯಾದೆ ಹತ್ಯೆ ಪ್ರಕರಣಗಳನ್ನು ಆಧರಿಸಿದೆ ಎಂದು ಅವರು ತಿಳಿಸಿದ್ದರು.

ಈ ವಿಷಯ ನ್ಯಾಯಾಲಯದಲ್ಲಿ ಬಾಕಿ ಇರುವಾಗ ಈ ವಿಷಯದ ಬಗ್ಗೆ ಚಿತ್ರ ನಿರ್ಮಿಸುವುದು ಸರಿಯಲ್ಲ ಎಂದು ಸಂತ್ರಸ್ತ ಪ್ರಣಯ್‌ ಅವರ ತಂದೆ ಬಾಲಸ್ವಾಮಿ ನ್ಯಾಯಾಲಯವನ್ನು ಸಂಪರ್ಕಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಣಯ್ ಮತ್ತು ಅವರ ಸಂಬಂಧಿಕರ ಫೋಟೋಗಳನ್ನು ಅವರ ಒಪ್ಪಿಗೆಯಿಲ್ಲದೆ ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಹಾಳುಗೆಡವಲು ಪೂರ್ವಾಗ್ರಹಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, 2015 ಮತ್ತು ಇತರ ವಿಭಾಗಗಳ ಅಡಿಯಲ್ಲಿ ಈ ಪ್ರಕರಣವನ್ನು ಇಂದು ತೆಲಂಗಾಣದ ಮಿರಿಯಲಗುಡದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಮ್‌ ಗೋಪಾಲ್ ವರ್ಮಾ ಜೊತೆಗೆ, ಈ ಪ್ರಕರಣದಲ್ಲಿ ಉದ್ದೇಶಿತ ಚಿತ್ರದ ನಿರ್ಮಾಪಕರೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕನ್ನಡದ ಚಿಂತಕ, ಬರಹಗಾರ ಬಿ.ಶ್ರೀಪಾದ್ ಭಟ್ ತಮ್ಮ ಅನಿಸಿಕೆಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡಿನಲ್ಲಿ 2017ರಲ್ಲಿ ನಡೆದ ದಲಿತ ಯುವಕ ಶಂಕರ್‌ನ ಮರ್ಯಾದೆಗೇಡು ಹತ್ಯೆಯಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಹುಡುಗಿಯ ತಂದೆ ಚಿನ್ನಸ್ವಾಮಿಯನ್ನು ಮದ್ರಾಸ್ ಹೈಕೋರ್ಟ್ ತಪ್ಪಿತಸ್ಥನಲ್ಲ ಎಂದು ಬಿಡುಗಡೆಗೊಳಿಸಿದೆ. ಹಾಡು ಹಗಲೆ ನೂರಾರು ಜನರ ಎದುರು ನಡೆದ ಕೊಲೆಯ ಸೂತ್ರಧಾರ ಹುಡುಗಿಯ ತಂದೆಯ ವಿರುದ್ಧ ಸೂಕ್ತ ಸಾಕ್ಷಾದಾರಗಳಿಲ್ಲ ಬಿಡುಗಡೆಯಾಗಿರುವುದು ದುರಂತ.

ಇನ್ನೊಂದೆಡೆ 2018ರಲ್ಲಿ ತೆಲಂಗಾಣದಲ್ಲಿ ನಡೆದ ದಲಿತ ಯುವಕ ಪ್ರಣಯ್‌ನ ಮರ್ಯಾದೆಗೇಡು ಹತ್ಯೆ ಪ್ರಕರಣವನ್ನು ಆಧರಿಸಿ ರಾಮ್ ಗೋಪಾಲ್ ವರ್ಮ ‘ಮರ್ಡರ್’ ಎಂಬ ಸಿನಿಮಾ ನಿರ್ದೇಶಿಸಿದ್ದಾನೆ. ಈತನೇ ಹೇಳಿಕೊಂಡಿರುವಂತೆ ಇದು ಹುಡುಗಿ ಅಮೃತಾಳ ಹಟಮಾರಿತನ ಮತ್ತು ಆಕೆಯ ತಂದೆ ಮಾರುತಿ ರಾವ್‌ನ ಅತಿಯಾದ ಪಿತೃಪ್ರೇಮದಿಂದ ಪ್ರಣಯ್‌ನ ಹತ್ಯೆಯಾಗಿದೆಯಂತೆ. ಅಂದರೆ ದಲಿತ ಎನ್ನುವ ಕಾರಣಕ್ಕೆ ನಡೆದ ಕೊಲೆಯನ್ನು ಕೌಟುಂಬಿಕ ಕಲಹ ಎಂದು ತೋರಿಸಲು ಮುಂದಾಗಿರುವ ರಾಮಗೋಪಾಲ್ ವರ್ಮ ತಾನೊಬ್ಬ ಜೀವವಿರೋಧಿ ನಿರ್ದೇಶಕ ಎಂದು ಸಾಬೀತು ಪಡಿಸಿದ್ದಾನೆ.

ಶಂಕರ್‌ನ ಹತ್ಯೆಯಲ್ಲಿ ಹೈಕೋರ್ಟ್ ತೀರ್ಪು ಬರುವುದಕ್ಕೂ ಒಂದು ದಿನ ಮುಂಚೆ ವರ್ಮಾನ ಸಿನಿಮಾದ ಪೋಸ್ಟರ್ ಬಿಡುಗಡೆಯಾಯಿತು. ಇದು ಕಾಕತಾಳೀಯದಂತಿಲ್ಲ. ಇದುವರೆಗೂ ವರ್ಮಾನ ವರ್ತನೆ ವಿಲಕ್ಷಣ ಎನ್ನುವಂತಿತ್ತು ಆದರೆ ಈಗ ವಿಕೃತಿ ಎಂದು ನಿಜವಾಗಿದೆ.

ದುರಂತವೆಂದರೆ ಜನರ ಸಹಾನಭೂತಿಯೂ ಮರ್ಯಾದೆಗೇಡು ಹತ್ಯೆಯ ಸೂತ್ರಧಾರಾದ ಚಿನ್ನಸ್ವಾಮಿ ಮತ್ತು ಮಾರುತಿ ರಾವ್ ಎಂಬ ತಂದೆಯರ ಪರವಾಗಿರುವುದು. ಇದಕ್ಕೆ ನ್ಯಾಯಾಧೀಶರೂ ಹೊರತಲ್ಲವೇನೊ. ಇದು ಕೇವಲ ದುರಂತ ಮಾತ್ರವಲ್ಲ, ಪ್ರಜ್ಞಾವಂತರ ಸೋಲು ಸಹ. ಹಾಗೆಯೇ ಇದರ ಲಾಭ ಪಡೆಯಲು ಮುಂದಾದ ವರ್ಮಾನಂತಹ ಮಾನಗೇಡಿಗಳು ಈ ಮೂಲಕ ಈ ಜಾತಿ ಕ್ರೌರ್ಯಕ್ಕೆ ತಂದುಕೊಡುವ ಮಾನ್ಯತೆ ಇದೆಯಲ್ಲಾ ಅದು ಮತ್ತಷ್ಟು ಭೀಕರವಾದದ್ದು”. ಎಂದು ಶ್ರೀಪಾದ್ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ನಾವಂತ ನ್ಯೈಜ ವ್ಯಕ್ತಿಗಳೀಗೆ ಮಾತ್ರ ಈ ದೇಶದಲ್ಲಿ ಸವಾಲು ಎದುರಾಗುತ್ತದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...