Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...