Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...