Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...