Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...