Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...