Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...