Homeಮುಖಪುಟಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

- Advertisement -
- Advertisement -

ಅಲಕ್ಷಿತ ಸಮುದಾಯಗಳ ಪ್ರತಿರೋಧ ಹಾಗೂ ಭೂಮಿ ಹಕ್ಕಿನ ಕಥನಗಳನ್ನು ಕಟ್ಟುವಲ್ಲಿ ತಮಿಳು ಚಿತ್ರರಂಗ ಈಗಾಗಲೇ ಚಾಪು ಮೂಡಿಸಿದೆ. ಪ.ರಂಜಿತ್‌, ವೆಟ್ರಿಮಾರನ್‌, ಮಾರಿಸೆಲ್ವರಾಜ್‌, ಟಿ.ಜಿ.ಜ್ಞಾನವೇಲ್‌ ಥರದ ನಿರ್ದೇಶಕರು ತಮಿಳು ಚಿತ್ರರಂಗಕ್ಕೆ ಹೊಸ ಉರುಪು ತಂದಿದ್ದಾರೆಂಬುದು ನಿರ್ವೀವಾದ.

ಸೃಜನಶೀಲತೆ ಹಾಗೂ ವಿಶಿಷ್ಟ ಕಥನಗಳ ಮೂಲಕ ಗಮನ ಸೆಳೆದಿರುವ ಮಲಯಾಳಂ ಚಿತ್ರರಂಗ ಅಲಕ್ಷಿತ ಸಮುದಾಯಗಳ ಕಥೆಗಳನ್ನು ಹೇಳುವಲ್ಲಿ ಅಷ್ಟಾಗಿ ಗಮನ ಹರಿಸಿಲ್ಲ ಎಂಬ ಟೀಕೆಗಳೂ ಸಹಜವಾಗಿವೆ. 2016ರಲ್ಲಿ ರಾಜೀವ್‌ ರವಿ ನಿರ್ದೇಶನದ ‘ಕಮ್ಮಟ್ಟಿಪಾಡಂ’ ಸಿನಿಮಾ, ಭೂಮಿ ಹಕ್ಕಿನ ಕುರಿತು ಒಂದಿಷ್ಟು ಮಾತನಾಡಿತ್ತು. ಆದರೆ ಶೋಷಿತ ಸಮುದಾಯಗಳ ಕಥನದ ದೃಷ್ಟಿಯಲ್ಲಿ ತಮಿಳು ಚಿತ್ರರಂಗ ಸಾಧಿಸಿರುವ ಮೇಲುಗೈ ಎದುರು ಮಲಯಾಳಂ ಚಿತ್ರರಂಗದ ಪ್ರಯೋಗಗಳು ವಿರಳಾತೀವಿರಳ ಎನ್ನಲಾಗುತ್ತದೆ. ಹೀಗಾಗಿಯೇ ‘ಪಡ’ದಂತಹ ಮಲಯಾಳಂ ಸಿನಿಮಾ ಹೊಸ ಚರ್ಚೆಗೆ ನಾಂದಿಹಾಡಿದೆ.

“ಆದಿವಾಸಿ ಕಥನಗಳನ್ನು ಮಲಯಾಳಂ ಚಿತ್ರರಂಗ ಮಾತನಾಡಿಯೇ ಇಲ್ಲ ಎಂದು ಹೇಳಲಾಗದು. ಆದರೆ ನಿರ್ದೇಶಕನ ದೃಷ್ಟಿಕೋನವೂ ಮುಖ್ಯವಾಗುತ್ತದೆ. ಆದಿವಾಸಿಗಳನ್ನು ಯಾವ ಆಯಾಮದಲ್ಲಿ ತೋರಿಸುತ್ತಿದ್ದಾರೆ ಎಂಬುದು ಚಿತ್ರ ನಿರ್ದೇಶಕನ ಹಿನ್ನೆಲೆಯಿಂದ ನಿರ್ಧರಿತವಾಗುತ್ತವೆ” ಎಂದೂ ಮಲಯಾಳಂ ಸಿನಿಮಾ ವಿಮರ್ಶಕರು ಹೇಳುತ್ತಾರೆ.

‘ಬಾಂಬೂ ಬಾಯ್ಸ್‌’ (2002) ಎಂಬ ಸಿನಿಮಾದಲ್ಲಿ ಆದಿವಾಸಿಗಳನ್ನು ಹಾಸ್ಯಾಸ್ಪದವಾಗಿ ತೋರಿಸಲಾಗಿದೆ. ಟಾಯ್ಲೆಟ್‌ ಒಳಗೆ ಕೈ ತೊಳೆಯುವುದು, ಮನೆಯಲ್ಲಿರುವ ಪಕ್ಷಿಯನ್ನು ಕೊಂದು ತಿನ್ನುವುದು – ಹೀಗೆ ಚಿತ್ರಿಸಲಾಗಿತ್ತು. ಅಂದರೆ ನಿರ್ದೇಶಕನ ದೃಷ್ಟಿಕೋನ ಇಲ್ಲಿ ಕೆಲಸ ಮಾಡಿದೆ.

ಆದಿವಾಸಿ ಸಮುದಾಯದ ಚಿತ್ರ ನಿರ್ದೇಶಕಿ ಲೀಲಾ ಸಂತೋಷ್ ಅವರು ತಮ್ಮ ಮೊದಲ ಸಿನಿಮಾದಲ್ಲಿ ‘ಕರಿಂತಂದನ್‌’ ಎಂಬ ಟ್ರೈಬಲ್‌ ನಾಯಕನ ಕುರಿತು ಚಿತ್ರಿಸಿದ್ದರು. ಪಶ್ಚಿಮ ಘಟ್ಟಕ್ಕೆ ದಾರಿಯನ್ನು ತೋರಿಸಿದ ಮಹಾನ್ ವ್ಯಕ್ತಿ ಕರಿಂತಂದನ್‌ ಎಂಬುದನ್ನು ಲೀಲಾ ಕಟ್ಟಿಕೊಟ್ಟಿದ್ದರು. ಆದಿವಾಸಿ ಕಥನಗಳನ್ನು ಆದಿವಾಸಿಗಳ ದೃಷ್ಟಿಕೋನದಲ್ಲಿ ಹೇಳಬೇಕೆಂದು ಪ್ರತಿಪಾದಿಸುತ್ತಾರೆ ಲೀಲಾ ಸಂತೋಷ್. ಸಮುದಾಯವೊಂದರ ಕಥೆಯನ್ನು ಹೇಳುವಲ್ಲಿ ನಿರ್ದೇಶಕನ ಸ್ವಅನುಭವಗಳೂ ಪ್ರಭಾವ ಬೀರುತ್ತವೆ.

ಇತ್ತೀಚೆಗೆ ನ್ಯೂಸ್‌ ಮಿನಿಟ್‌ನೊಂದಿಗೆ ಮಾತನಾಡಿದ್ದ ‘ಪಡ’ ಸಿನಿಮಾದ ನಿರ್ದೇಶಕ ಕೆ.ಎಂ.ಕಮಲ್‌, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು” ಎಂದಿದ್ದರು.

ಮತ್ತೆ ‘ಪಡ’ ವಿಚಾರಕ್ಕೆ ಬರುವುದಾದರೆ ‘ಪ್ರಭುತ್ವ’ ಹಾಗೂ ‘ಆದಿವಾಸಿ’ ನಡುವಿನ ಸಂಘರ್ಷದ ನಿಜ ಘಟನೆ ಆಧಾರಿತ ಸಿನಿಮಾವಿದು. ದೃಷ್ಟಿಕೋನ- ಭೂಮಿ ಹೋರಾಟ. ದೀರ್ಘಕಾಲ ಅಧಿಕಾರದಲ್ಲಿರುವ ಮೇಲ್ಜಾತಿ ಪ್ರಣೀತ ಎಡ-ಬಲ ಪಕ್ಷಗಳೆರಡೂ ಆದಿವಾಸಿಗಳನ್ನು ನಿರ್ಲಕ್ಷಿಸಿದ್ದನ್ನು, ಒಕ್ಕಲೆಬ್ಬಿಸಿದ್ದನ್ನು, ನಿರ್ಗತಿಕರನ್ನಾಗಿ ಮಾಡಿ ಪುನವರ್ಸತಿಗೆ ದೂಡಿದ್ದನ್ನು ‘ಪಡ’ ಮಾತನಾಡುತ್ತದೆ.

ಮಾರ್ಚ್ 10ರಂದು ತೆರೆಕಂಡ ‘ಪಡ’ ಈಗ ಅಮೆಜಾನ್‌ ಪ್ರೈಮ್‌ ವಿಡಿಯೊದಲ್ಲೂ ಲಭ್ಯವಿದೆ. 1996ರಲ್ಲಿ ನಡೆದ ನಿಜ ಘಟನೆಯನ್ನು ಆಧರಿಸಿರುವ ಈ ಸಿನಿಮಾ, ಆದಿವಾಸಿ ಭೂಮಿ ಹಕ್ಕಿನ ಕುರಿತು ದಿಟ್ಟವಾಗಿ ಮಾತನಾಡುತ್ತದೆ. ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ 1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರದ ವಿರುದ್ಧ ನಡೆದಿತ್ತು.

ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡರು. ಸಾಂವಿಧಾನಿಕ ಹೋರಾಟಕ್ಕೆ ಪ್ರಭುತ್ವ ಯಾವುದೇ ಬೆಲೆ ಕೊಡದಿದ್ದಾಗ, ನೈಜ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯಲು ಹಿಂಸೆಯ ಮಾರ್ಗವನ್ನು ಹೋರಾಟಗಾರರು ಹಿಡಿಯುತ್ತಾರೆ.

‘ಜನರ ಕೂಗು ಕೇಳದ ಸರ್ಕಾರ ನಿಜವಾದ ಭಯೋತ್ಪಾದನೆ ಮಾಡುತ್ತಿದೆ’ ಎನ್ನುವ ಇವರು ‘ಅಯ್ಯಂಕಾಲಿ ಪಡ’ದ ಸದಸ್ಯರೆಂದು ಹೇಳಿಕೊಳ್ಳುತ್ತಾರೆ. “ಆದಿವಾಸಿಗಳ ಭೂಮಿ ಕಾಯ್ದೆ ಬಂದ ನಂತರ ಎಡ- ಬಲ ಪಕ್ಷಗಳೆರಡೂ ಆಡಳಿತ ನಡೆಸಿವೆ. ಆದಿವಾಸಿಗಳನ್ನು ಶೋಷಿಸಿವೆ. ಮಿಲಿಯನ್‌ಗಟ್ಟಲೆ ಹಣವನ್ನು ಆದಿವಾಸಿಗಳಿಗೆ ಮೀಸಲಿಡುತ್ತಿದ್ದರೂ ಪರಿಸ್ಥಿತಿ ಮಾತ್ರ ಬದಲಾಗಲಿಲ್ಲ” ಎನ್ನುತ್ತಾರೆ.

ಒತ್ತೆಯಾಳಾಗಿರುವ ಅಧಿಕಾರಿಗೆ ಹೇಳುತ್ತಾರೆ: “ಆದಿವಾಸಿಗಳು ನಿಜವಾದ ಒತ್ತೆಯಾಳುಗಳು. ಅವರನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಜಾಪ್ರಭುತ್ವ ಕೆಲವರಿಗೆ ಮಾತ್ರ ಮೀಸಲಾಗಿದೆ. ಇದನ್ನು ನಾವು ಹೇಳಲು ಬಯಸುತ್ತಿದ್ದೇವೆ”.

ಹೀಗೆ ಕ್ರಾಂತಿಯ ಮಾರ್ಗ ಹಿಡಿದವರ ಒತ್ತಾಯಗಳನ್ನು ಸರ್ಕಾರ ಒಪ್ಪಿತೆ? ಆದಿವಾಸಿಗಳ ಸ್ಥಿತಿ ಬದಲಾಯಿತೆ? – ಎಂಬ ಗಂಭೀರ ವಿಚಾರಗಳನ್ನು ಈ ಸಿನಿಮಾ ಚರ್ಚಿಸುತ್ತದೆ. ಆದಿವಾಸಿಗಳ ನಿತ್ಯದ ನೋವು ಹಾಗೂ ಪ್ರಭುತ್ವ ನೀಡುವ ಭೀಕರ ಪ್ರಕ್ರಿಯೆಗಳಿಗೆ ಅಂತ್ಯವಿಲ್ಲವೇ ಎಂಬ ಪ್ರಶ್ನೆಗಳನ್ನು ಪ್ರೇಕ್ಷಕರ ಮುಂದಿಡುತ್ತದೆ. “ಓ ಭೂಮಿಯೇ, ಈ ಕಾಡಿನ ಅಳಲು ಕೇಳಿದೆಯಾ? ನೀನು ನೋಡಿದೆಯಾ ಅವರು ನಗುತ್ತಿದ್ದಾರೆ” ಎಂಬ ಹಾಡಿನ ಸಾಲುಗಳು ಪ್ರಭುತ್ವವನ್ನು ಹಾಗೂ ಪಾಲಿಸಿಗಳನ್ನು ಉದ್ದೇಶಿಸುತ್ತವೆ.

ಪ್ರಕಾಶ್‌ ರಾಜ್‌, ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಥರದ ಪ್ರತಿಭಾವಂತ ನಟರು ಮುಖ್ಯಭೂಮಿಯಲ್ಲಿದ್ದಾರೆ. ವಿಷ್ಣು ವಿಜಯ್‌ ಅವರ ಹಿನ್ನಲೆ ಸಂಗೀತ ಇಡೀ ಸಿನಿಮಾದ ತೂಕವನ್ನು ಹೆಚ್ಚಿಸಿವೆ. ಈವರೆಗೆ ಬಂದಿರುವ ಒತ್ತೆಯಾಳು ಕಥೆಯಾಧಾರಿಸಿದ ಸಿನಿಮಾಗಳಿಗಿಂತ ‘ಪಡ’, ಆದಿವಾಸಿ ಕಥನದ ಹಿನ್ನೆಲೆಯಲ್ಲಿ ಭಿನ್ನವಾಗಿ ನಿಲ್ಲುತ್ತದೆ.


ಇದನ್ನೂ ಓದಿರಿ: ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...