Homeಮುಖಪುಟಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

- Advertisement -
- Advertisement -

1952 ರ ಸಿನಿಮಾ ಛಾಯಾಗ್ರಹಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿ ತರಲು ಹೊರಟಿರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಕೇಂದ್ರ ಕಾನೂನು ಸಚಿವರಿಗೆ ಪತ್ರ ಬರೆದಿದ್ದಾರೆ.

ಈ ಕಾಯ್ದೆಯ ಕುರಿತು ಮಧ್ಯಪ್ರವೇಶಿಸುವಂತೆ ಕೋರಿ ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘ ಸ್ಟಾಲಿನ್ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಇದಾದ ಬಳಿಕ ಒಕ್ಕೂಟ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವ್ಡೇಕರ್‌ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ.

’ಸಿನಿಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021 (ತಿದ್ದುಪಡಿ) ಮಸೂದೆಯೂ, ಚಲನಚಿತ್ರೋದ್ಯಮದ ಮನಸ್ಸಿನಲ್ಲಿ ಮಾತ್ರವಲ್ಲದೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವ ಸಮಾಜದ ಎಲ್ಲ ಉತ್ತಮ ವರ್ಗಗಳಲ್ಲೂ ಗಂಭೀರ ಆತಂಕಗಳಿಗೆ ಕಾರಣವಾಗಿದೆ’ ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

 

“ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಸಿನಿಮಾಟೋಗ್ರಾಫರ್ಸ್‌ ಕಾಯ್ದೆಯ ಸೆಕ್ಷನ್ 5 (ಎ) ನಲ್ಲಿ ಉಲ್ಲೇಖಿಸಿರುವ ಎಲ್ಲಾ ಮಾನದಂಡಗಳನ್ನು ಪೂರೈಸಿದ ಬಳಿಕ ಚಲನಚಿತ್ರಗಳಿಗೆ ಪ್ರಮಾಣ ಪತ್ರ ನೀಡುತ್ತದೆ. ಕೆಲವು ನಿಗದಿತ ಮಾನ್ಯತೆಗಳ ಆಧಾರದ ಮೇಲೆ ಚಲನಚಿತ್ರದ ಪ್ರಮಾಣ ಪತ್ರವನ್ನು ತಿರಸ್ಕರಿಸಲು ಈ ಕಾಯಿದೆಯು ಅವಕಾಶ ನೀಡುತ್ತದೆ” ಎಂದು ಸ್ಟಾಲಿನ್ ಬರೆದಿದ್ದಾರೆ.

ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘ ಮುಖ್ಯಮಂತ್ರಿ ಸ್ಟಾಲಿನ್‌ಗೆ ಮನವಿ ಸಲ್ಲಿಸುತ್ತಿರುವುದು

ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್‌ ಪ್ರಮಾಣಪತ್ರದ ನಂತರವೂ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಸಿನಿಮಾಟೋಗ್ರಾಫರ್ಸ್‌ ತಿದ್ದುಪಡಿ ಮಸೂದೆ  2021 ರ ಸೆಕ್ಷನ್ 5B(1)  ಪ್ರಖಾರ ರಾಷ್ಟ್ರೀಯ ಭದ್ರತೆ, ಸಮಾಜದ ಶಾಂತಿ, ಮತ್ತು ಮಿತ್ರ ದೇಶಗಳ ನಡುವಿನ ಸಂಬಂಧಗಳ ಕಾರಣಕ್ಕಾಗಿ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ.

ಈಗಾಗಲೇ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಲನಚಿತ್ರಗಳನ್ನು ಮತ್ತೊಮ್ಮೆ ಸೆನ್ಸಾರ್ ಮಾಡುವ ಅವಕಾಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ 2000 ದಲ್ಲಿ ಆದೇಶಿಸಿತ್ತು. ಅದರಲ್ಲಿ ಸುಪ್ರೀಂ ಕೋರ್ಟ್ CBFC ತೀರ್ಮಾನವೇ ಅಂತಿಮ. ಸೆನ್ಸಾರ್ ಬೋರ್ಡ್‌ ತೀರ್ಮಾನವನ್ನು ನಿರಾಕರಿಸುವ ಅಥವಾ ಪುನರ್ ವಿಮರ್ಶಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೆಂದು ಆದೇಶ ನೀಡಿತ್ತು. ಆದರೆ ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್ ತೀರ್ಮಾನವನ್ನು ಅಸಿಂಧುಗೊಳಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಒಂದು ವೇಳೆ ಹೊಸ ಮಸೂದೆ ಜಾರಿಗೆ ಬಂದರೆ ಕೇಂದ್ರ ಯಾವುದೇ ಕಾರಣವನ್ನೂ ನೀಡದೆ ಚಿತ್ರ ಬಿಡುಗಡೆಯನ್ನು ತಡೆಯಬಹುದಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿನಿಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021ಕ್ಕೆ ದೇಶಾದ್ಯಂತ ಚಿತ್ರತಾರೆಯರಿಂದ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...