Homeಮುಖಪುಟಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

- Advertisement -
- Advertisement -

1952 ರ ಸಿನಿಮಾ ಛಾಯಾಗ್ರಹಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿ ತರಲು ಹೊರಟಿರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಕೇಂದ್ರ ಕಾನೂನು ಸಚಿವರಿಗೆ ಪತ್ರ ಬರೆದಿದ್ದಾರೆ.

ಈ ಕಾಯ್ದೆಯ ಕುರಿತು ಮಧ್ಯಪ್ರವೇಶಿಸುವಂತೆ ಕೋರಿ ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘ ಸ್ಟಾಲಿನ್ ಅವರನ್ನು ಸೋಮವಾರ ಭೇಟಿಯಾಗಿ ಮನವಿ ಪತ್ರ ನೀಡಿದ್ದರು. ಇದಾದ ಬಳಿಕ ಒಕ್ಕೂಟ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವ್ಡೇಕರ್‌ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ.

’ಸಿನಿಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021 (ತಿದ್ದುಪಡಿ) ಮಸೂದೆಯೂ, ಚಲನಚಿತ್ರೋದ್ಯಮದ ಮನಸ್ಸಿನಲ್ಲಿ ಮಾತ್ರವಲ್ಲದೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವ ಸಮಾಜದ ಎಲ್ಲ ಉತ್ತಮ ವರ್ಗಗಳಲ್ಲೂ ಗಂಭೀರ ಆತಂಕಗಳಿಗೆ ಕಾರಣವಾಗಿದೆ’ ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

 

“ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಸಿನಿಮಾಟೋಗ್ರಾಫರ್ಸ್‌ ಕಾಯ್ದೆಯ ಸೆಕ್ಷನ್ 5 (ಎ) ನಲ್ಲಿ ಉಲ್ಲೇಖಿಸಿರುವ ಎಲ್ಲಾ ಮಾನದಂಡಗಳನ್ನು ಪೂರೈಸಿದ ಬಳಿಕ ಚಲನಚಿತ್ರಗಳಿಗೆ ಪ್ರಮಾಣ ಪತ್ರ ನೀಡುತ್ತದೆ. ಕೆಲವು ನಿಗದಿತ ಮಾನ್ಯತೆಗಳ ಆಧಾರದ ಮೇಲೆ ಚಲನಚಿತ್ರದ ಪ್ರಮಾಣ ಪತ್ರವನ್ನು ತಿರಸ್ಕರಿಸಲು ಈ ಕಾಯಿದೆಯು ಅವಕಾಶ ನೀಡುತ್ತದೆ” ಎಂದು ಸ್ಟಾಲಿನ್ ಬರೆದಿದ್ದಾರೆ.

ತಮಿಳುನಾಡು ಚಲನಚಿತ್ರ ನಿರ್ಮಾಪಕರ ಸಂಘ ಮುಖ್ಯಮಂತ್ರಿ ಸ್ಟಾಲಿನ್‌ಗೆ ಮನವಿ ಸಲ್ಲಿಸುತ್ತಿರುವುದು

ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್‌ ಪ್ರಮಾಣಪತ್ರದ ನಂತರವೂ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಸಿನಿಮಾಟೋಗ್ರಾಫರ್ಸ್‌ ತಿದ್ದುಪಡಿ ಮಸೂದೆ  2021 ರ ಸೆಕ್ಷನ್ 5B(1)  ಪ್ರಖಾರ ರಾಷ್ಟ್ರೀಯ ಭದ್ರತೆ, ಸಮಾಜದ ಶಾಂತಿ, ಮತ್ತು ಮಿತ್ರ ದೇಶಗಳ ನಡುವಿನ ಸಂಬಂಧಗಳ ಕಾರಣಕ್ಕಾಗಿ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ.

ಈಗಾಗಲೇ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಲನಚಿತ್ರಗಳನ್ನು ಮತ್ತೊಮ್ಮೆ ಸೆನ್ಸಾರ್ ಮಾಡುವ ಅವಕಾಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ 2000 ದಲ್ಲಿ ಆದೇಶಿಸಿತ್ತು. ಅದರಲ್ಲಿ ಸುಪ್ರೀಂ ಕೋರ್ಟ್ CBFC ತೀರ್ಮಾನವೇ ಅಂತಿಮ. ಸೆನ್ಸಾರ್ ಬೋರ್ಡ್‌ ತೀರ್ಮಾನವನ್ನು ನಿರಾಕರಿಸುವ ಅಥವಾ ಪುನರ್ ವಿಮರ್ಶಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೆಂದು ಆದೇಶ ನೀಡಿತ್ತು. ಆದರೆ ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್ ತೀರ್ಮಾನವನ್ನು ಅಸಿಂಧುಗೊಳಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಒಂದು ವೇಳೆ ಹೊಸ ಮಸೂದೆ ಜಾರಿಗೆ ಬಂದರೆ ಕೇಂದ್ರ ಯಾವುದೇ ಕಾರಣವನ್ನೂ ನೀಡದೆ ಚಿತ್ರ ಬಿಡುಗಡೆಯನ್ನು ತಡೆಯಬಹುದಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿನಿಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021ಕ್ಕೆ ದೇಶಾದ್ಯಂತ ಚಿತ್ರತಾರೆಯರಿಂದ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...