Homeಮುಖಪುಟಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

- Advertisement -
- Advertisement -

ಅಧಿಕಾರಕ್ಕೆ ಬಂದ ದಿನದಿಂದಲೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ವಿರುದ್ಧ ಮಾತನಾಡುವ ಎಲ್ಲರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ ಎಂಬ ಆರೋಪವಿದೆ. ಸರ್ಕಾರದ ಹಲವಾರು ನೀತಿಗಳಿಗೆ ಅಷ್ಟೇ ಪ್ರಮಾಣದಲ್ಲಿ ಪ್ರತಿರೋಧಗಳು ವ್ಯಕ್ತವಾಗುತ್ತಲೇ ಇವೆ. ಹೋರಾಟಗಾರರು, ವಿಜ್ಞಾನಿಗಳು, ವಿಧ್ವಾಂಸರು, ಸಾಹಿತಿಗಳು, ಕಲಾವಿದರು, ನ್ಯಾಯವಾದಿಗಳು ಹೀಗೆ ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ UAPA, NSA ಮುಂತಾದ ಕಾನೂನುಗಳನ್ನು ಪ್ರಯೋಗಿಸುತ್ತಿದೆ. ಕೇಂದ್ರ ಸರ್ಕಾರದ ಕೆಂಗಣ್ಣು ಈಗ ಚಿತ್ರರಂಗದ ಮೇಲೆ ಬಿದ್ದಿದೆ. ಸರ್ಕಾರದ ನೀತಿ ನಿಯಮಗಳನ್ನು ಟೀಕಿಸುವ ಚಿತ್ರಗಳು ಹೆಚ್ಚುತ್ತಿರುವುದರಿಂದ ಹೆದರಿರುವ ಸರ್ಕಾರ, ಚಿತ್ರ ಬಿಡುಗಡೆಯ ಮೇಲೆಯೇ ತನ್ನ ನಿಯಂತ್ರಣ ಸಾಧಿಸಲು ಮುಂದಾಗಿದೆ. ಈ ಪ್ರಯತ್ನದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಡೆಗಣಿಸಿ ಹೊಸ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿನೆಮಾಟೊಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021ಕ್ಕೆ ದೇಶಾದ್ಯಂತ ಚಿತ್ರತಾರೆಯರಿಂದ ವಿರೋಧ ವ್ಯಕ್ತವಾಗಿದೆ. ಭಾರತ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರ ಫಿಲ್ಮ್‌ ಸರ್ಟಿಫಿಕೇಟ್ ಅಪಿಲೇಟ್ ಟ್ರಿಬುನಲ್ ಅನ್ನು ವಜಾಗೊಳಿಸಿ ಆದೇಶ ನೀಡಿತ್ತು. ಸೆನ್ಸಾರ್ ಬೋರ್ಡ್‌ ತೀರ್ಮಾನಗಳು ಮತ್ತು ದೃಶ್ಯಗಳನ್ನು ಸಿನೆಮಾದಿಂದ ಕತ್ತರಿಸಿದ ಸಂದರ್ಭದಲ್ಲಿ ಚಿತ್ರ ನಿರ್ಮಾಪಕರಿಗೆ ಮೇಲ್ಮನವಿಯನ್ನು ಸಲ್ಲಿಸಲು ಇದ್ದ ನ್ಯಾಯಮಂಡಳಿ ಇದಾಗಿತ್ತು. ಕೇಂದ್ರ ಸರ್ಕಾರ ನ್ಯಾಯಮಂಡಳಿಯನ್ನೇ ವಜಾ ಮಾಡಿ ಸೆನ್ಸಾರ್ ಬೋರ್ಡ್‌ ತೀರ್ಮಾನಗಳ ವಿರುದ್ಧ ಪ್ರಶ್ನಿಸಲು ಅವಕಾಶಗಳೇ ಇಲ್ಲದಂತೆ ಮಾಡಿತ್ತು. ಆ ಮೂಲಕ ಚಿತ್ರ ನಿರ್ಮಾಪಕರು ಪದೇ ಪದೇ ಹೈ ಕೋರ್ಟ್ ಮೆಟ್ಟಿಲೇರುವ ಸಂದರ್ಭವನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ.

“ಕೇಂದ್ರ ಸರ್ಕಾರ ಸಿನೆಮಾ, ಮಾಧ್ಯಮ, ಮತ್ತು ಸಾಹಿತ್ಯ ವಲಯದಿಂದ ಪ್ರತಿರೋಧವನ್ನು ಎದುರಿಸುತ್ತಿದೆ. ಸರ್ಕಾರಕ್ಕೆ ಪ್ರತಿರೋಧವನ್ನು ಎದುರಿಸಲು ಸಾಧ್ಯವಾಗದೇ ಇಂತಹ ಕ್ರಮ ಕೈಗೊಂಡಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನ ಇದಾಗಿದ್ದು, ಇದನ್ನು ಗಮನಿಸುವ, ಕೇಳಿಸಿಕೊಳ್ಳುವ ಮತ್ತು ಧ್ವನಿ ಎತ್ತುವ ಮೂಲಕ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ” ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಲನಚಿತ್ರಗಳು ಮತ್ತು ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಿತ್ರಗಳನ್ನು ಮತ್ತೆ ಸೆನ್ಸಾರ್‌ಗೆ ಒಳಪಡಿಸುವ ಅವಕಾಶವನ್ನು ಹೊಸ ಕಾನೂನಿನಲ್ಲಿ ನೀಡಿರುವುದು ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ  ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗದ ಎಲ್ಲರೂ ಕೇಂದ್ರ ಸರ್ಕಾರದ ಉದ್ಧೇಶಿತ ಪ್ರಯತ್ನದ ವಿರುದ್ಧ ಧ್ವನಿ ಎತ್ತಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

ಕೇಂದ್ರದ ಕೈಗೆ ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಅಂಕುಶ ನೀಡುವ ತಿದ್ದುಪಡಿ ಮಸೂದೆ 

ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್‌ ಪ್ರಮಾಣಪತ್ರದ ನಂತರವೂ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಸಿನೆಮಾಟೊಗ್ರಾಫ್ ತಿದ್ದುಪಡಿ ಮಸೂದೆ  2021 ರ ಸೆಕ್ಷನ್ 5B(1)  ಪ್ರಖಾರ ರಾಷ್ಟ್ರೀಯ ಭದ್ರತೆ, ಸಮಾಜದ ಶಾಂತಿ, ಮತ್ತು ಮಿತ್ರ ದೇಶಗಳ ನಡುವಿನ ಸಂಬಂಧಗಳ ಕಾರಣಕ್ಕಾಗಿ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ.

ಈಗಾಗಲೇ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಲನಚಿತ್ರಗಳನ್ನು ಮತ್ತೊಮ್ಮೆ ಸೆನ್ಸಾರ್ ಮಾಡುವ ಅವಕಾಶ ಕೇಂದ್ರ ಸಾರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ 2000 ದಲ್ಲಿ ಆದೇಶಿಸಿತ್ತು. ಅದರಲ್ಲಿ ಸುಪ್ರೀಂ ಕೋರ್ಟ್ CBFC ತೀರ್ಮಾನವೇ ಅಂತಿಮ. ಸೆನ್ಸಾರ್ ಬೋರ್ಡ್‌ ತೀರ್ಮಾನವನ್ನು ನಿರಾಕರಿಸುವ ಅಥವಾ ಪುನರ್ ವಿಮರ್ಶಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೆಂದು ಆದೇಶ ನೀಡಿತ್ತು. ಆದರೆ ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್ ತೀರ್ಮಾನವನ್ನು ಅಸಿಂಧುಗೊಳಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಒಂದು ವೇಳೆ ಹೊಸ ಮಸೂದೆ ಜಾರಿಗೆ ಬಂದರೆ ಕೇಂದ್ರ ಯಾವುದೇ ಕಾರಣವನ್ನೂ ನೀಡದೆ ಚಿತ್ರ ಬಿಡುಗಡೆಯನ್ನು ತಡೆಯಬಹುದಾಗಿದೆ.

ಪ್ರಸ್ತಾವಿತ ಸಿನೆಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್‌ ಬಿಲ್‌ 2021 ತಿದ್ದುಪಡಿ ಕಾನೂನಿಗೆ ದೇಶದ ಅನೇಕ ಹಿರಿಯ ಚಿತ್ರ ನಿರ್ದೇಶಕರು ಮತ್ತು ಸಿನೆಮಾ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದಾರೆ. ಫರ್ಹಾನ್‌ ಅಖ್ತರ್, ಶಬಾನಾ ಆಜ್ಮಿ, ಹಂಸಲ್ ಮೆಹ್ತಾ, ಅನುರಾಗ್ ಕಶ್ಯಪ್, ಜೋಯಾ ಅಖ್ತರ್ ಸೇರಿದಂತೆ ಚಿತ್ರ ಕಲಾವಿದರು, ಬಹರಗಾರರು ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಹೊಸ ಕಾನೂನು ತಿದ್ದುಪಡಿ ಕೇಂದ್ರ ಸರ್ಕಾರಕ್ಕೆ ಚಿತ್ರರಂಗದ ಮೇಲೆ ಸಂಪೂರ್ಣ ನಿಯಂತ್ರಣವನ್ನು ನೀಡುತ್ತದೆ. ಚಿತ್ರರಂಗಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವೇ ಇಲ್ಲದಂತಾಗುತ್ತದೆ ಎಂದು ಕೆಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ದೊಡ್ಡ ಅಭಿಯಾನ ಆರಂಭವಾಗಿದ್ದು ಸಾವಿರಾರು ಜನರು ಸರ್ಕಾರದ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಜೂನ್ 18 ರಂದು ಪ್ರಸ್ತಾವಿತ ತಿದ್ದುಪಡಿ ಮಸೂದೆಯನ್ನು ಇಲಾಖೆಯ ವೆಬಸೈಟ್‌ಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರ ಆಕ್ಷೇಪ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಆಕ್ಷೇಪಗಳನ್ನು ವ್ಯಕ್ತಪಡಿಸಲು ಜುಲೈ 2 ಅಂತಿಮ ದಿನವಾಗಿದ್ದು ಸರ್ಕಾರದ ಉದ್ಧೇಶಿತ ಕಾನೂನಿಗೆ ಸಿನಿಮಾ ಸಮುದಾಯ ಭಾರೀ ವಿರೋಧ ವ್ಯಕ್ತಪಡಿಸಿದೆ.

ಸರ್ಕಾರದ ವಿರುದ್ಧದ ಅಭಿಪ್ರಾಯಗಳನ್ನು ಹತ್ತಿಕ್ಕುವ ಬಿಜೆಪಿಯ ಅಜೆಂಡಾದ ಭಾಗವಾಗಿ ಈ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಚಿತ್ರ ನಿರ್ದೇಶಕ ವೆಟ್ರಿಮಾರನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಚಿತ್ರರಂಗಕ್ಕೆ ಯಾಕೆ ಹೆದರುತ್ತಿದೆ? ದೇಶದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುವ ಹಕ್ಕು ಇದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ದೇಶದಲ್ಲಿ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಯಲ್ಲ. ಪ್ರಜಾಪ್ರಭುತ್ವ ಎಂದು ತಮಿಳಿನ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಅಡುರ್ ಗೋಪಾಲಕೃಷ್ಣ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ, ಚಲನಚಿತ್ರ ಕಲೆಗೂ ಮಾರಕವಾದ ಕ್ರಮ ಇದು. ದೇಶದ ಸಂವಿಧಾನವು ನಮಗೆ ಕೊಟ್ಟಿರುವ ಸ್ವಾತಂತ್ರ್ಯದ ಹರಣ. ಸರಕಾರದ ಈ ಪ್ರಯತ್ನವನ್ನು ನಾವೆಲ್ಲರೂ ವಿರೋಧಿಸಬೇಕಿದೆ ಎಂದು ಕನ್ನಡದ ಹಿರಿಯ ರಂಗಭೂಮಿ ನಿರ್ದೇಶಕರಾದ ರಘುನಂದನರವರು ಕರೆ ನೀಡಿದ್ದಾರೆ.

  • ರಾಜೇಶ್ ಹೆಬ್ಬಾರ್

ಇದನ್ನೂ ಓದಿ : ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...