Homeಮುಖಪುಟಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

- Advertisement -
- Advertisement -

ಅಧಿಕಾರಕ್ಕೆ ಬಂದ ದಿನದಿಂದಲೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ವಿರುದ್ಧ ಮಾತನಾಡುವ ಎಲ್ಲರ ಧ್ವನಿಯನ್ನು ಅಡಗಿಸಲು ಯತ್ನಿಸುತ್ತಿದೆ ಎಂಬ ಆರೋಪವಿದೆ. ಸರ್ಕಾರದ ಹಲವಾರು ನೀತಿಗಳಿಗೆ ಅಷ್ಟೇ ಪ್ರಮಾಣದಲ್ಲಿ ಪ್ರತಿರೋಧಗಳು ವ್ಯಕ್ತವಾಗುತ್ತಲೇ ಇವೆ. ಹೋರಾಟಗಾರರು, ವಿಜ್ಞಾನಿಗಳು, ವಿಧ್ವಾಂಸರು, ಸಾಹಿತಿಗಳು, ಕಲಾವಿದರು, ನ್ಯಾಯವಾದಿಗಳು ಹೀಗೆ ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ UAPA, NSA ಮುಂತಾದ ಕಾನೂನುಗಳನ್ನು ಪ್ರಯೋಗಿಸುತ್ತಿದೆ. ಕೇಂದ್ರ ಸರ್ಕಾರದ ಕೆಂಗಣ್ಣು ಈಗ ಚಿತ್ರರಂಗದ ಮೇಲೆ ಬಿದ್ದಿದೆ. ಸರ್ಕಾರದ ನೀತಿ ನಿಯಮಗಳನ್ನು ಟೀಕಿಸುವ ಚಿತ್ರಗಳು ಹೆಚ್ಚುತ್ತಿರುವುದರಿಂದ ಹೆದರಿರುವ ಸರ್ಕಾರ, ಚಿತ್ರ ಬಿಡುಗಡೆಯ ಮೇಲೆಯೇ ತನ್ನ ನಿಯಂತ್ರಣ ಸಾಧಿಸಲು ಮುಂದಾಗಿದೆ. ಈ ಪ್ರಯತ್ನದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಡೆಗಣಿಸಿ ಹೊಸ ಕಾನೂನನ್ನು ಜಾರಿಗೆ ತರಲು ಮುಂದಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿನೆಮಾಟೊಗ್ರಾಫರ್ಸ್‌ ಅಮೆಂಡ್‌ಮೆಂಟ್ ಬಿಲ್ 2021ಕ್ಕೆ ದೇಶಾದ್ಯಂತ ಚಿತ್ರತಾರೆಯರಿಂದ ವಿರೋಧ ವ್ಯಕ್ತವಾಗಿದೆ. ಭಾರತ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರ ಫಿಲ್ಮ್‌ ಸರ್ಟಿಫಿಕೇಟ್ ಅಪಿಲೇಟ್ ಟ್ರಿಬುನಲ್ ಅನ್ನು ವಜಾಗೊಳಿಸಿ ಆದೇಶ ನೀಡಿತ್ತು. ಸೆನ್ಸಾರ್ ಬೋರ್ಡ್‌ ತೀರ್ಮಾನಗಳು ಮತ್ತು ದೃಶ್ಯಗಳನ್ನು ಸಿನೆಮಾದಿಂದ ಕತ್ತರಿಸಿದ ಸಂದರ್ಭದಲ್ಲಿ ಚಿತ್ರ ನಿರ್ಮಾಪಕರಿಗೆ ಮೇಲ್ಮನವಿಯನ್ನು ಸಲ್ಲಿಸಲು ಇದ್ದ ನ್ಯಾಯಮಂಡಳಿ ಇದಾಗಿತ್ತು. ಕೇಂದ್ರ ಸರ್ಕಾರ ನ್ಯಾಯಮಂಡಳಿಯನ್ನೇ ವಜಾ ಮಾಡಿ ಸೆನ್ಸಾರ್ ಬೋರ್ಡ್‌ ತೀರ್ಮಾನಗಳ ವಿರುದ್ಧ ಪ್ರಶ್ನಿಸಲು ಅವಕಾಶಗಳೇ ಇಲ್ಲದಂತೆ ಮಾಡಿತ್ತು. ಆ ಮೂಲಕ ಚಿತ್ರ ನಿರ್ಮಾಪಕರು ಪದೇ ಪದೇ ಹೈ ಕೋರ್ಟ್ ಮೆಟ್ಟಿಲೇರುವ ಸಂದರ್ಭವನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿದೆ.

“ಕೇಂದ್ರ ಸರ್ಕಾರ ಸಿನೆಮಾ, ಮಾಧ್ಯಮ, ಮತ್ತು ಸಾಹಿತ್ಯ ವಲಯದಿಂದ ಪ್ರತಿರೋಧವನ್ನು ಎದುರಿಸುತ್ತಿದೆ. ಸರ್ಕಾರಕ್ಕೆ ಪ್ರತಿರೋಧವನ್ನು ಎದುರಿಸಲು ಸಾಧ್ಯವಾಗದೇ ಇಂತಹ ಕ್ರಮ ಕೈಗೊಂಡಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನ ಇದಾಗಿದ್ದು, ಇದನ್ನು ಗಮನಿಸುವ, ಕೇಳಿಸಿಕೊಳ್ಳುವ ಮತ್ತು ಧ್ವನಿ ಎತ್ತುವ ಮೂಲಕ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ” ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಲನಚಿತ್ರಗಳು ಮತ್ತು ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಿತ್ರಗಳನ್ನು ಮತ್ತೆ ಸೆನ್ಸಾರ್‌ಗೆ ಒಳಪಡಿಸುವ ಅವಕಾಶವನ್ನು ಹೊಸ ಕಾನೂನಿನಲ್ಲಿ ನೀಡಿರುವುದು ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ  ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗದ ಎಲ್ಲರೂ ಕೇಂದ್ರ ಸರ್ಕಾರದ ಉದ್ಧೇಶಿತ ಪ್ರಯತ್ನದ ವಿರುದ್ಧ ಧ್ವನಿ ಎತ್ತಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.

ಕೇಂದ್ರದ ಕೈಗೆ ಚಿತ್ರರಂಗದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸುವ ಅಂಕುಶ ನೀಡುವ ತಿದ್ದುಪಡಿ ಮಸೂದೆ 

ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್‌ ಪ್ರಮಾಣಪತ್ರದ ನಂತರವೂ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಸಿನೆಮಾಟೊಗ್ರಾಫ್ ತಿದ್ದುಪಡಿ ಮಸೂದೆ  2021 ರ ಸೆಕ್ಷನ್ 5B(1)  ಪ್ರಖಾರ ರಾಷ್ಟ್ರೀಯ ಭದ್ರತೆ, ಸಮಾಜದ ಶಾಂತಿ, ಮತ್ತು ಮಿತ್ರ ದೇಶಗಳ ನಡುವಿನ ಸಂಬಂಧಗಳ ಕಾರಣಕ್ಕಾಗಿ ಚಿತ್ರ ಬಿಡುಗಡೆಯನ್ನು ತಡೆಯುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡುತ್ತದೆ.

ಈಗಾಗಲೇ ಸೆನ್ಸಾರ್ ಬೋರ್ಡ್‌ನಿಂದ ಪ್ರಮಾಣಪತ್ರವನ್ನು ಪಡೆದಿರುವ ಚಲನಚಿತ್ರಗಳನ್ನು ಮತ್ತೊಮ್ಮೆ ಸೆನ್ಸಾರ್ ಮಾಡುವ ಅವಕಾಶ ಕೇಂದ್ರ ಸಾರ್ಕಾರಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ 2000 ದಲ್ಲಿ ಆದೇಶಿಸಿತ್ತು. ಅದರಲ್ಲಿ ಸುಪ್ರೀಂ ಕೋರ್ಟ್ CBFC ತೀರ್ಮಾನವೇ ಅಂತಿಮ. ಸೆನ್ಸಾರ್ ಬೋರ್ಡ್‌ ತೀರ್ಮಾನವನ್ನು ನಿರಾಕರಿಸುವ ಅಥವಾ ಪುನರ್ ವಿಮರ್ಶಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವೆಂದು ಆದೇಶ ನೀಡಿತ್ತು. ಆದರೆ ಹೊಸ ತಿದ್ದುಪಡಿ ಮಸೂದೆಯು ಸೆನ್ಸಾರ್ ಬೋರ್ಡ್ ತೀರ್ಮಾನವನ್ನು ಅಸಿಂಧುಗೊಳಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಒಂದು ವೇಳೆ ಹೊಸ ಮಸೂದೆ ಜಾರಿಗೆ ಬಂದರೆ ಕೇಂದ್ರ ಯಾವುದೇ ಕಾರಣವನ್ನೂ ನೀಡದೆ ಚಿತ್ರ ಬಿಡುಗಡೆಯನ್ನು ತಡೆಯಬಹುದಾಗಿದೆ.

ಪ್ರಸ್ತಾವಿತ ಸಿನೆಮಾಟೋಗ್ರಾಫರ್ಸ್‌ ಅಮೆಂಡ್‌ಮೆಂಟ್‌ ಬಿಲ್‌ 2021 ತಿದ್ದುಪಡಿ ಕಾನೂನಿಗೆ ದೇಶದ ಅನೇಕ ಹಿರಿಯ ಚಿತ್ರ ನಿರ್ದೇಶಕರು ಮತ್ತು ಸಿನೆಮಾ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದಾರೆ. ಫರ್ಹಾನ್‌ ಅಖ್ತರ್, ಶಬಾನಾ ಆಜ್ಮಿ, ಹಂಸಲ್ ಮೆಹ್ತಾ, ಅನುರಾಗ್ ಕಶ್ಯಪ್, ಜೋಯಾ ಅಖ್ತರ್ ಸೇರಿದಂತೆ ಚಿತ್ರ ಕಲಾವಿದರು, ಬಹರಗಾರರು ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಹೊಸ ಕಾನೂನು ತಿದ್ದುಪಡಿ ಕೇಂದ್ರ ಸರ್ಕಾರಕ್ಕೆ ಚಿತ್ರರಂಗದ ಮೇಲೆ ಸಂಪೂರ್ಣ ನಿಯಂತ್ರಣವನ್ನು ನೀಡುತ್ತದೆ. ಚಿತ್ರರಂಗಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅವಕಾಶವೇ ಇಲ್ಲದಂತಾಗುತ್ತದೆ ಎಂದು ಕೆಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್‌, ಫೇಸ್‌ಬುಕ್‌ನಲ್ಲಿ ದೊಡ್ಡ ಅಭಿಯಾನ ಆರಂಭವಾಗಿದ್ದು ಸಾವಿರಾರು ಜನರು ಸರ್ಕಾರದ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಜೂನ್ 18 ರಂದು ಪ್ರಸ್ತಾವಿತ ತಿದ್ದುಪಡಿ ಮಸೂದೆಯನ್ನು ಇಲಾಖೆಯ ವೆಬಸೈಟ್‌ಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರ ಆಕ್ಷೇಪ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಆಕ್ಷೇಪಗಳನ್ನು ವ್ಯಕ್ತಪಡಿಸಲು ಜುಲೈ 2 ಅಂತಿಮ ದಿನವಾಗಿದ್ದು ಸರ್ಕಾರದ ಉದ್ಧೇಶಿತ ಕಾನೂನಿಗೆ ಸಿನಿಮಾ ಸಮುದಾಯ ಭಾರೀ ವಿರೋಧ ವ್ಯಕ್ತಪಡಿಸಿದೆ.

ಸರ್ಕಾರದ ವಿರುದ್ಧದ ಅಭಿಪ್ರಾಯಗಳನ್ನು ಹತ್ತಿಕ್ಕುವ ಬಿಜೆಪಿಯ ಅಜೆಂಡಾದ ಭಾಗವಾಗಿ ಈ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಚಿತ್ರ ನಿರ್ದೇಶಕ ವೆಟ್ರಿಮಾರನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಚಿತ್ರರಂಗಕ್ಕೆ ಯಾಕೆ ಹೆದರುತ್ತಿದೆ? ದೇಶದ ಪ್ರತಿಯೊಬ್ಬ ಪ್ರಜೆಗೂ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುವ ಹಕ್ಕು ಇದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ದೇಶದಲ್ಲಿ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಯಲ್ಲ. ಪ್ರಜಾಪ್ರಭುತ್ವ ಎಂದು ತಮಿಳಿನ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಅಡುರ್ ಗೋಪಾಲಕೃಷ್ಣ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ, ಚಲನಚಿತ್ರ ಕಲೆಗೂ ಮಾರಕವಾದ ಕ್ರಮ ಇದು. ದೇಶದ ಸಂವಿಧಾನವು ನಮಗೆ ಕೊಟ್ಟಿರುವ ಸ್ವಾತಂತ್ರ್ಯದ ಹರಣ. ಸರಕಾರದ ಈ ಪ್ರಯತ್ನವನ್ನು ನಾವೆಲ್ಲರೂ ವಿರೋಧಿಸಬೇಕಿದೆ ಎಂದು ಕನ್ನಡದ ಹಿರಿಯ ರಂಗಭೂಮಿ ನಿರ್ದೇಶಕರಾದ ರಘುನಂದನರವರು ಕರೆ ನೀಡಿದ್ದಾರೆ.

  • ರಾಜೇಶ್ ಹೆಬ್ಬಾರ್

ಇದನ್ನೂ ಓದಿ : ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...