Homeಮುಖಪುಟಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

ಕರೆಯದ ಮದುವೆಗೆ ಊಟಕ್ಕೆ ಹೋದ ಬಾಲಕನಿಗೆ ಗುಂಡಿಕ್ಕಿ ಹತ್ಯೆ ; ಸಿಐಎಸ್‌ಎಫ್‌ ಹೆಡ್‌ ಕಾನ್‌ಸ್ಟೆಬಲ್‌ ಅರೆಸ್ಟ್

- Advertisement -
- Advertisement -

ಕರೆಯದ ಮದುವೆಗೆ ಊಟಕ್ಕೆ ಹೋದ ಕೊಳಗೇರಿಯ ಬಾಲಕನಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಹೆಡ್‌ ಕಾನ್‌ಸ್ಟೆಬಲ್ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ದೆಹಲಿಯ ಶಾಹದರಾದಲ್ಲಿ ಶನಿವಾರ (ನವೆಂಬರ್ 29) ಸಂಜೆ ನಡೆದಿದೆ.

ಶಾಹದರಾದ ಮಾನಸರೋವರ್ ಪಾರ್ಕ್‌ನ ಡಿಡಿಎ ಮಾರುಕಟ್ಟೆಯಲ್ಲಿರುವ ಸಮುದಾಯ ಕೇಂದ್ರದ ಬಳಿ ಹೆಡ್‌ ಕಾನ್‌ಸ್ಟೆಬಲ್ ಮದನ್ ಗೋಪಾಲ್ ತಿವಾರಿ ಎಂಬಾತ ಬಾಲಕನ ಮೇಲೆ ಗುಂಡು ಹಾರಿಸಿದ್ದಾನೆ. ಈತ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜಿತನಾಗಿದ್ದ. ಮದುವೆಗೆ ಆಗಮಿಸಿದ್ದ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪ್ರಸ್ತುತ ಮದನ್ ತಿವಾರಿಯನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

ಮದುವೆ ಕಾರ್ಯಕ್ರಮದಲ್ಲಿ ವರನನ್ನು ಕುದುರೆ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಬಾಲಕರ ಗುಂಪೊಂದು ಊಟ ಮಾಡುವ ಆಸೆಯಿಂದ ಮದುವೆಯತ್ತ ಹೋಗಿದೆ. ಇದನ್ನು ಗಮನಿಸಿದ ಹೆಡ್‌ ಕಾನ್‌ಸ್ಟೆಬಲ್ ಬಾಲಕರನ್ನು ಸ್ಥಳದಿಂದ ಹೋಗುವಂತೆ ಹೇಳಿದ್ದಾನೆ. ಈ ವೇಳೆ ಬಾಲಕರ ಗುಂಪು ಮತ್ತು ಮದನ್ ತಿವಾರಿ ನಡುವೆ ಮಾತಿನ ಚಕಮಕಿ ನಡೆದು, ಮದನ್ ತಿವಾರಿ ಬಾಲಕನಿಗೆ ಗುಂಡಿಕ್ಕಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಾವಿಗೀಡಾದ ಬಾಲಕ ನ್ಯೂ ಮಾಡ್ರನ್ ಪ್ರದೇಶದಲ್ಲಿ ವಾಸಿಸುತ್ತಿದ್ದ. ಗುಂಡಿನ ದಾಳಿಗೆ ಒಳಗಾದ ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಶಾಹದಾರ ಉಪ ಪೊಲೀಸ್ ಆಯುಕ್ತ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ.

ಪ್ರಸ್ತುತ ಆರೋಪಿ ಹೆಡ್‌ಕಾನ್‌ಸ್ಟೆಬಲ್‌ನನ್ನು ಬಂಧಿಸಲಾಗಿದೆ. ಗುಂಡು ಹಾರಿಸಲು ಬಳಸಲಾಗಿದೆ ಎಂದು ಶಂಕಿಸಲಾದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆತ ಗುಂಡು ಹಾರಿಸಲು ಬಳಸಿದ ಪಿಸ್ತೂಲು ವೈಯಕ್ತಿವೇ? ಸೇವಾ ಬಂದೂಕಾ? ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪ್ರತಿಕೃಯಿಸಿರುವ ಮೃತ ಬಾಲಕನ ತಂದೆ, ನನ್ನ ಮಗ ಮದುವೆ ಕಾರ್ಯಕ್ರಮದತ್ತ ಹೋಗಿದ್ದ ಎಂದು ಗೊತ್ತಿರಲಿಲ್ಲ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನನ್ನ ಮಗ ಮತ್ತು ಇತರ ಮೂವರು ಮದುವೆ ಮೆರವಣಿಗೆ ನಡೆಯುತ್ತಿದ್ದ ಜಾಗಕ್ಕೆ ಹೋಗಿದ್ದರು ಎಂಬುವುದು ನನಗೆ ನಂತರ ತಿಳಿಸಿದರು. ಅವರು ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಹೋಗಿರಲಿಲ್ಲ. ಬಹುಶಃ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲೋ, ಇಲ್ಲ ಸ್ವಲ್ಪ ಆಹಾರ ಸಿಕ್ಕಿದರೆ ತಿನ್ನಲೋ ಹೋಗಿರಬಹುದು. ಅಷ್ಟಕ್ಕೆ ಕೊಲ್ಲುವ ಅಗತ್ಯ ಏನಿತ್ತು?” ಬಾಲಕನ ತಂದೆ ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

“ಇಬ್ಬರು ವ್ಯಕ್ತಿಗಳು ಅವನಿಗೆ (ಮಗನಿಗೆ) ಹೊಡೆಯಲು ಪ್ರಾರಂಭಿಸಿದಾಗ ಮತ್ತು ಕಳ್ಳತನದ ಆರೋಪ ಹೊರಿಸಿದಾಗ ಆತ ಕುದುರೆಯ ಬಳಿ ಇದ್ದ ಎಂದು ಅವನ ಸ್ನೇಹಿತರು ಹೇಳಿದ್ದಾರೆ” ಎಂದು ಬಾಲಕನ ತಂದೆ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...