Homeಮುಖಪುಟತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

ತಮಿಳು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಸಿಐಎಸ್‌ಎಫ್‌ ಸಿಬ್ಬಂದಿ; ಸ್ಟಾಲಿನ್ ಆಕ್ರೋಶ

- Advertisement -
- Advertisement -

ತಮಿಳುನಾಡು ಮಹಿಳೆಗೆ ಹಿಂದಿ ಮಾತನಾಡುವಂತೆ ಒತ್ತಾಯಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ವಿರುದ್ಧ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ.

‘ನನಗೆ ಹಿಂದಿ ಗೊತ್ತಿಲ್ಲ ಎಂದು ಹೇಳಿದ ತಮಿಳು ಹುಡುಗಿಯೊಬ್ಬಳೊಂದಿಗೆ ಗೋವಾ ವಿಮಾನ ನಿಲ್ದಾಣದಲ್ಲಿ ಹಿಂದಿ ಮಾತನಾಡುವಂತೆ ಕೇಂದ್ರ ಕೈಗಾರಿಕೆ ಭದ್ರತಾ ಪಡೆ ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ. ತಮಿಳುನಾಡು ಭಾರತದಲ್ಲಿದೆಯೇ? ಭಾರತದಲ್ಲಿರುವ ಪ್ರತಿಯೊಬ್ಬರೂ ಹಿಂದಿ ಕಲಿಯಬೇಕು ಎಂದು ಅವರು ಹೇಳಿದ್ದು, ಇದು ಅತ್ಯಂತ ಖಂಡನೀಯ. ಹಿಂದಿ ಅಧಿಕೃತ ಭಾಷೆಯೇ ಹೊರತು ರಾಷ್ಟ್ರಭಾಷೆಯಲ್ಲ ಎಂದು ಇವರಿಗೆ ಹೇಳುವವರು ಯಾರು’ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

‘ಭಾರತವು ವಿವಿಧ ಭಾಷೆಗಳನ್ನು ಮಾತನಾಡುವ ಜನರ ಒಕ್ಕೂಟ ರಾಜ್ಯವಾಗಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಒಕ್ಕೂಟ ವ್ಯವಸ್ಥೆಗೆ ಒತ್ತು ನೀಡುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ವಿಮಾನ ನಿಲ್ದಾಣಗಳಲ್ಲಿ ಎಲ್ಲ ಭಾಷೆಗಳಿಗೆ ಸೂಕ್ತ ಮೌಲ್ಯ ಮತ್ತು ಗೌರವವನ್ನು ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ದಬ್ಬಾಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ: ಉದಯನಿಧಿ

‘ಗೋವಾ ವಿಮಾನ ನಿಲ್ದಾಣದಲ್ಲಿ ಸೈನಿಕರು ಹಿಂದಿಯಲ್ಲಿ ಮಾತನಾಡಿದ್ದು ನನಗೆ ಅರ್ಥವಾಗುತ್ತಿಲ್ಲ ಎಂದು ತಮಿಳುನಾಡಿನ ಮಹಿಳೆಯೊಬ್ಬರು ಹೇಳಿದ್ದಾರೆ. ಆಕೆ ಮಗುವಿನೊಂದಿಗೆ ಇದ್ದಾಳೆ ಎಂಬ ಅಂಶವನ್ನು ಲೆಕ್ಕಿಸದೆ, ‘ಹಿಂದಿ ರಾಷ್ಟ್ರ ಭಾಷೆ, ಇದು ನಿಮಗೆ ತಿಳಿದಿಲ್ಲವೇ?’ ಎಂದಿದ್ದಾರೆ. ದಬ್ಬಾಳಿಕೆ ಮತ್ತು ಬೆದರಿಕೆಯ ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದು ಉದಯನಿಧಿ ಸ್ಟಾಲಿನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಇನ್ನುಮುಂದೆ ವಿಮಾನ ನಿಲ್ದಾಣಗಳಲ್ಲಿ ಇಂತಹ ಘಟನೆಗಳು ನಡೆಯುವುದನ್ನು ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಪಡೆ ಇರುವುದು ಭದ್ರತೆಗಾಗಿ; ಹಿಂದಿ ಪಾಠ ನಡೆಸಲು ಅಲ್ಲ. ಬಹುಭಾಷಾ ಭಾರತೀಯ ಒಕ್ಕೂಟದಲ್ಲಿ, ಇತರ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಹಿಂದಿ ಹೇರಿಕೆಯನ್ನು ಮುಂದುವರಿಸುವುದು ಒಕ್ಕೂಟ ತತ್ವಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ಇಂತಹ ಧೋರಣೆ ಅನುಸರಿಸದೆ ತಕ್ಷಣ ಕ್ರಮ ಕೈಗೊಳ್ಳಬೇಕು. ಭಾಷೆಯ ಹಕ್ಕು ಕೂಡ ಮಾನವ ಹಕ್ಕು ಎಂಬುದನ್ನು ಫ್ಯಾಸಿಸ್ಟರು ಅರ್ಥಮಾಡಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ಭದ್ರತಾ ತಂಡ ನನ್ನನ್ನು ಅಣಕಿಸಿದರು: ಶರ್ಮಿಳಾ

ಚೆನ್ನೈನ ಇಂಜಿನಿಯರ್ ಶರ್ಮಿಳಾ ರಾಜಶೇಖರ್ ಸಿಐಎಸ್‌ಎಫ್ ಸಿಬ್ಬಂದಿಯಿಂದ ಕಿರುಕುಳ ಅನುಭವಿಸಿದ ಮಹಿಳೆಯಾಗಿದ್ದು, ‘ರಾತ್ರಿ 8.30ಕ್ಕೆ ಚೆನ್ನೈಗೆ ಹೋಗುವ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಅದಕ್ಕೂ ಮುನ್ನ ಭದ್ರತಾ ತಪಾಸಣೆಗಾಗಿ ನನ್ನ ಬ್ಯಾಗ್‌ಗಳನ್ನು ಇಟ್ಟುಕೊಂಡು ಸರದಿಯಲ್ಲಿದ್ದೆ. ಇನ್ನೊಂದು ಟ್ರೇ ತೆಗೆದುಕೊಳ್ಳಿ ಎಂದು ಸಿಐಎಸ್‌ಎಫ್ ಸಿಬ್ಬಂದಿ ನನಗೆ ಹಿಂದಿಯಲ್ಲಿ ಹೇಳಿದ್ದು ಅರ್ಥವಾಗಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಹಿಂದಿ ಗೊತ್ತಿಲ್ಲ ಎಂದು ನಾನು ಅವರಿಗೆ ಹೇಳಿದೆ. ಆದರೆ, ಭದ್ರತಾ ಪಡೆ ನನ್ನನ್ನು ಅಣಕಿಸಿದರು. ನಾನು ಎಲ್ಲಿಂದ ಬಂದಿದ್ದು ಎಂದು ಪ್ರಶ್ನಿಸಿದ ಅವರು, ನಾನು ತಮಿಳುನಾಡಿನವಳು ಎಂದು ಉತ್ತರಿಸಿದಾಗ, ತಮಿಳುನಾಡು ಭಾರತದಲ್ಲಿದೆಯೇ ಎಂದು ಕೇಳಿದರು! ಹಿಂದಿ ರಾಷ್ಟ್ರ ಭಾಷೆ ಮತ್ತು ನೀವು ಕಲಿಯಲೇಬೇಕು ಎಂದು ಹೇಳಿದರು’ ಎಂದು ಶರ್ಮಿಳಾ ಹೇಳಿದರು.

‘ಕೂಡಲೇ ನಾನು ಗೂಗಲ್ ಮಾಡುವ ಮೂಲಕ ಹಿಂದಿ ಕೇವಲ ಅಧಿಕೃತ ಭಾಷೆಯಾಗಿದೆ; ರಾಷ್ಟ್ರೀಯ ಭಾಷೆಯಲ್ಲ ಎಂದು ಹೇಳಿದೆ. ಇಷ್ಟೆಲ್ಲಾ ನಡೆಯುವಾಗ ನಾನು ನನ್ನ ಮೂರು ವರ್ಷದ ಮಗಳ ಜೊತೆಯಲ್ಲಿದ್ದೆ. ಫೋನ್ ತೆಗೆದುಕೊಂಡು ಇಂಟರ್‌ನೆಟ್‌ನಲ್ಲಿ ಹುಡುಕಿದ ನಾನು, ಹಿಂದಿ ರಾಷ್ಟ್ರ ಭಾಷೆಯಲ್ಲ, ಅಧಿಕೃತ ಭಾಷೆ ಮಾತ್ರ ಎಂದು ತೋರಿಸಿದೆ. ಭದ್ರತಾ ಸಿಬ್ಬಂದಿ ನನ್ನನ್ನು ನಡೆಸಿಕೊಂಡ ರೀತಿ ಅತ್ಯಂತ ಅಮಾನವೀಯ ಹಾಗೂ ಸಂವೇದನಾರಹಿತವಾಗಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಭದ್ರತಾ ಲೋಪ: ‘ಶೂ’ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮೊದಲೇ ಗುರುತಿಸಿದ್ದ ಮನೋರಂಜನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...