Homeಮುಖಪುಟನಾಗರಿಕರ ಭದ್ರತೆಗೆ 10 ಉಪಗ್ರಹಗಳು ಕಾರ್ಯನಿರ್ವಹಿಸುತ್ತಿವೆ: ಇಸ್ರೋ ಅಧ್ಯಕ್ಷ ನಾರಾಯಣನ್

ನಾಗರಿಕರ ಭದ್ರತೆಗೆ 10 ಉಪಗ್ರಹಗಳು ಕಾರ್ಯನಿರ್ವಹಿಸುತ್ತಿವೆ: ಇಸ್ರೋ ಅಧ್ಯಕ್ಷ ನಾರಾಯಣನ್

- Advertisement -
- Advertisement -

ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು 10 ಉಪಗ್ರಹಗಳು ನಿರಂತರವಾಗಿ ಕಾರ್ಯತಂತ್ರದ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದ್ದಾರೆ. ಮಣಿಪುರದ ಇಂಫಾಲ್‌ನಲ್ಲಿರುವ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ಭಾರತವು “ಚೈತನ್ಯಶೀಲ ಬಾಹ್ಯಾಕಾಶ ಶಕ್ತಿ”ಯಾಗುತ್ತಿದೆ ಮತ್ತು 2040 ರ ವೇಳೆಗೆ ತನ್ನ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲಿದೆ ಎಂದು ಹೇಳಿದ್ದಾರೆ. ನಾಗರಿಕರ ಭದ್ರತೆಗೆ

“ಇಂದು, 34 ದೇಶಗಳ 433 ಉಪಗ್ರಹಗಳನ್ನು ಭಾರತ ಕಕ್ಷೆಗೆ ಸೇರಿಸಿದೆ. ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯತಂತ್ರದ ಉದ್ದೇಶಕ್ಕಾಗಿ ಇಂದು 10 ಉಪಗ್ರಹಗಳು 24/7 ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನಿಮಗೆ ತಿಳಿಸಲು ನಾನು ಸಂತೋಷ ಪಡುತ್ತೇನೆ” ಎಂದು ಇಸ್ರೋ ಮುಖ್ಯಸ್ಥರು ಕಾರ್ಯಕ್ರಮದ ಸಂದರ್ಭದಲ್ಲಿ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ಮಧ್ಯೆ ಅವರು ಈ ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಕೇಂದ್ರಗಳನ್ನು ನಾಶಮಾಡಲು ಭಾರತವು ಮೇ 7 ರ ಆರಂಭದಲ್ಲಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಅದಾಗಿ ನಾಲ್ಕು ದಿನಗಳ ನಂತರ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.

“ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಾದರೆ, ನಾವು ನಮ್ಮ ಉಪಗ್ರಹಗಳ ಮೂಲಕ ಸೇವೆ ಸಲ್ಲಿಸಬೇಕು. ನಮ್ಮ 7,000 ಕಿಮೀ ಉದ್ದದ ಸಮುದ್ರ ತೀರವನ್ನು ನಾವು ಮೇಲ್ವಿಚಾರಣೆ ಮಾಡಬೇಕು. ನಾವು ಸಂಪೂರ್ಣ ಉತ್ತರ ಭಾಗವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ, ನಾವು ಅದನ್ನು ಸಾಧಿಸಲು ಸಾಧ್ಯವಿಲ್ಲ” ಎಂದು ನಾರಾಯಣನ್ ಹೇಳಿದ್ದಾರೆ.

ಹವಾಮಾನ ಬದಲಾವಣೆ ಮತ್ತು ವಾಯು ಮಾಲಿನ್ಯವನ್ನು ಅಧ್ಯಯನ ಮಾಡಲು ಮತ್ತು ಹವಾಮಾನವನ್ನು ಮೇಲ್ವಿಚಾರಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) G20 ದೇಶಗಳಿಗಾಗಿ ಉಪಗ್ರಹವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದೇಶ ಸಾಧಿಸಿರುವ ಪ್ರಗತಿ “ಅದ್ಭುತ ಮತ್ತು ಅತ್ಯುತ್ತಮ” ಎಂದು ನಾರಾಯಣ್ ಅವರು ಹೇಳಿದ್ದಾರೆ. “1947 ರಲ್ಲಿ ದೇಶ ಸ್ವಾತಂತ್ರ್ಯ ಪಡೆದಾಗ, ಶೇಕಡಾ 97.5 ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿತ್ತು, ಮತ್ತು ಭಾರತೀಯರ ಸರಾಸರಿ ಜೀವಿತಾವಧಿ ಕೇವಲ 32 ವರ್ಷಗಳು. ಇಂದು, ಇದು ಸರಾಸರಿ 72 ವರ್ಷಗಳಿಗೆ ಏರಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆ ಕಂಡುಬಂದಿದೆ” ಎಂದು ಅವರು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ, ಸಾಕ್ಷರತೆಯ ಪ್ರಮಾಣವು 1947 ರಲ್ಲಿ ಕೇವಲ ಶೇಕಡಾ 12 ರಷ್ಟಿತ್ತು. ಅಂದು ಕೇವಲ 2,825 ಪ್ರಾಥಮಿಕ ಶಾಲೆಗಳು ಮಾತ್ರ ಇದ್ದವು. ಆದರೆ ಈಗ ಆ ಸಂಖ್ಯೆ 8.4 ಲಕ್ಷಕ್ಕೆ ಬೆಳೆದಿದೆ ಎಂದು ಅವರು ಹೇಳಿದ್ದಾರೆ. 1947 ರಲ್ಲಿ ದೇಶವು ಯಾವುದೇ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಂದಿರಲಿಲ್ಲ ಮತ್ತು ಸಂಪೂರ್ಣ ಬಾಹ್ಯಾಕಾಶ ಉಪಕ್ರಮವು 1962 ರಲ್ಲಿ ಪ್ರಾರಂಭವಾಯಿತು ಎಂದು ಅವರು ಹೇಳಿದ್ದಾರೆ.

1969 ಒಂದು ಐತಿಹಾಸಿಕ ವರ್ಷವಾಗಿತ್ತು ಎಂದು ನೆನಪಿಸಿಕೊಂಡ ನಾರಾಯಣನ್, “ಏಕೆಂದರೆ ಆ ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ರಚನೆಯಾಯಿತು. ನಾವು ನಮ್ಮ ಬಾಹ್ಯಾಕಾಶ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗ ಮುಂದುವರಿದ ದೇಶಗಳಿಗಿಂತ 70 ವರ್ಷಗಳ ಹಿಂದೆ ಇದ್ದೆವು. ನಮ್ಮಲ್ಲಿ ಯಾವುದೇ ಉಪಗ್ರಹ ತಂತ್ರಜ್ಞಾನವಿರಲಿಲ್ಲ.” ಎಂದು ಅವರು ಹೇಳಿದ್ದಾರೆ.

ದೇಶಕ್ಕೆ ಪ್ರತಿಯೊಂದು ಅಂಶದಲ್ಲೂ ಬೆಳವಣಿಗೆಯ ಅಗತ್ಯವಿದೆ ಮತ್ತು ದೇಶದ ಬೆಳವಣಿಗೆಯಲ್ಲಿ ಕೃಷಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದ್ದಾರೆ. “ನೀವು ಇಂದು ಪಡೆದ ಪದವಿಗಳು ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿವೆ. 2047 ರ ವೇಳೆಗೆ ವಿಕ್ಷಿತ್ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವು ಪ್ರಮುಖ ಪಾತ್ರ ವಹಿಸುತ್ತೀರಿ” ಎಂದು ಅವರು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ನಾಗರಿಕರ ಭದ್ರತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ಬಾಂಗ್ಲಾದೇಶ ವಿಮೋಚನೆಯನ್ನು ಇಂದಿರಾ ಗಾಂಧಿ ತಪ್ಪಾಗಿ ನಿರ್ವಹಿಸಿದರು: ಅಸ್ಸಾಂ ಸಿಎಂ ಹಿಮಂತ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...