ನಾಗರಿಕರ ಭದ್ರತೆಗೆ 10 ಉಪಗ್ರಹಗಳು ಕಾರ್ಯನಿರ್ವಹಿಸುತ್ತಿವೆ: ಇಸ್ರೋ ಅಧ್ಯಕ್ಷ ನಾರಾಯಣನ್

ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು 10 ಉಪಗ್ರಹಗಳು ನಿರಂತರವಾಗಿ ಕಾರ್ಯತಂತ್ರದ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದ್ದಾರೆ. ಮಣಿಪುರದ ಇಂಫಾಲ್‌ನಲ್ಲಿರುವ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ಭಾರತವು “ಚೈತನ್ಯಶೀಲ ಬಾಹ್ಯಾಕಾಶ ಶಕ್ತಿ”ಯಾಗುತ್ತಿದೆ ಮತ್ತು 2040 ರ ವೇಳೆಗೆ ತನ್ನ ಮೊದಲ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲಿದೆ ಎಂದು ಹೇಳಿದ್ದಾರೆ. ನಾಗರಿಕರ ಭದ್ರತೆಗೆ “ಇಂದು, 34 ದೇಶಗಳ 433 ಉಪಗ್ರಹಗಳನ್ನು ಭಾರತ ಕಕ್ಷೆಗೆ ಸೇರಿಸಿದೆ. ದೇಶದ … Continue reading ನಾಗರಿಕರ ಭದ್ರತೆಗೆ 10 ಉಪಗ್ರಹಗಳು ಕಾರ್ಯನಿರ್ವಹಿಸುತ್ತಿವೆ: ಇಸ್ರೋ ಅಧ್ಯಕ್ಷ ನಾರಾಯಣನ್