HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...