HomeUncategorizedಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

ಸಹ್ಯಾದ್ರಿ ಆವರಣದಲ್ಲಿ ನಾಗರಿಕರಿಗೆ, ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಗೆ ಬೇಡವಾದ ಕ್ರೀಡಾಹಬ್

- Advertisement -
- Advertisement -

ಸಹ್ಯಾದ್ರಿ ಕಾಲೇಜು ಶಿಕ್ಷಣ ಕ್ಷೇತ್ರದ ಮುಡಿಯ ಮಾಣಿಕ್ಯ. ಶಿವಮೊಗ್ಗ ಜಿಲ್ಲೆಯ ಅನತ್ಯತೆ ಮತ್ತು ಸ್ವಾಭಿಮಾನದ ಪ್ರತೀಕ. ಸಹ್ಯಾದ್ರಿ ಬೆಟ್ಟಗಳ ಸಾಲಿನಲ್ಲಿ ತಲೆ ಎತ್ತಿನಿಂತ ಜ್ಞಾನದ ಶಿಖರ. ಸಾವಿರ ಸಾವಿರ ವಿದ್ಯಾರ್ಥಿಗಳ ಜ್ಞಾನದಾಹವನ್ನು ನೀಗಿಸುತ್ತಿರುವ ಭಾಗೀರಥಿ. ನೂರಾರು ಶ್ರೇಷ್ಠ ವಿಜ್ಞಾನಿಗಳು, ಅಧ್ಯಾಪಕರು, ರಾಜಕಾರಣಿಗಳು, ಐ.ಎ.ಎಸ್, ಕೆ.ಎ.ಎಸ್ ಆಡಳಿತತಜ್ಞರನ್ನು, ಜ್ಞಾನಪೀಠ ಪುರಸ್ಕೃತ ಕವಿಗಳನ್ನು, ಸಾಹಿತಿಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದ ಶ್ರೇಯಸ್ಸು ಸಹ್ಯಾದ್ರಿ ಕಾಲೇಜಿಗೆ ಸಲ್ಲುತ್ತದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಉದ್ಘಾಟಿಸುವುದರೊಂದಿಗೆ 1941ರಲ್ಲಿ ಪ್ರಾರಂಭವಾದ ಸಹ್ಯಾದ್ರಿ ಕಾಲೇಜಿಗೆ ಭವ್ಯ ಪರಂಪರೆಯಿದೆ. ಇಂತಹ ಭವ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕಾಲೇಜಿನ ಆವರಣ, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ “ಖೇಲೋ ಇಂಡಿಯಾ ಕ್ರೀಡಾಹಬ್ ಆಗಿ ಸಾರ್ವಜನಿಕರಿಗೂ ವಿದ್ಯಾರ್ಥಿಗಳಿಗೂ ನಿರ್ಬಂಧಿತ ಪ್ರದೇಶವಾಗಿ ಮಾರ್ಪಾಡಾಗುತ್ತಿದೆ.

1941ರಲ್ಲಿ ಸಹ್ಯಾದ್ರಿ ಕಾಲೇಜು ಪ್ರಾರಂಭವಾದಾಗ ಜಿಲ್ಲೆಯ ಏಕೈಕ ಸರ್ಕಾರಿ ಕಾಲೇಜಾಗಿತ್ತು. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ದಾನಿಗಳಿಂದ ಸುಮಾರು 100 ಎಕರೆ ಭೂಮಿಯನ್ನು ದಾನವಾಗಿ ಪಡೆದು ಕಾಲೇಜನ್ನು ಪ್ರಾರಂಭಿಸಿದರು. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜನ್ನು ’ಸಹ್ಯಾದ್ರಿ ಎಂದು ನಾಮಕರಣ ಮಾಡಿದವರು ಜಗದ ಕವಿ, ಯುಗದ ಕವಿ, ರಾಷ್ಟ್ರಕವಿ ಎಂದು ಪ್ರಖ್ಯಾತರಾದ ಕುವೆಂಪು ಅವರು. ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲಿಗೆ ಕಲಾ ಮತ್ತು ವಿಜ್ಞಾನ ಎರಡೂ ವಿಭಾಗಗಳು ಸೇರಿಕೊಂಡಿದ್ದರಿಂದ, ಒಂದೇ ಕಟ್ಟಡದಲ್ಲಿ ಎರಡೂ ಕಾಲೇಜಿನ ವಿದ್ಯಾರ್ಥಿಗಳನ್ನು ಸರಿದೂಗಿಸುವುದು ಕಷ್ಟವೆಂದರಿತ ಸರ್ಕಾರ ೧೯೮೪ರಲ್ಲಿ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳೆಂದು ಬೇರ್ಪಡಿಸಿತು. ಇದೇ ಕಾಲದಲ್ಲಿ ವಾಣಿಜ್ಯ ವಿಭಾಗವೂ ಸೇರಿಕೊಂಡಿತು. ೧೯೮೬ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಅದು ಸಂಪನ್ಮೂಲ ಕೊರತೆಯಿಂದ ಬಳಲುತ್ತಿದ್ದಾಗ ಈ ಸಹ್ಯಾದ್ರಿಯ ಕಟ್ಟಡವು ಸೇರಿದಂತೆ ಭೂಮಿಯನ್ನು ಅದಕ್ಕೆ ಹಸ್ತಾಂತರಿಸಲಾಗಿತ್ತು.

ಪ್ರಸ್ತುತ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಪ್ರತ್ಯೇಕ ಕಟ್ಟಡಗಳನ್ನು ಹೊಂದಿವೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಸೇರಿದಂತೆ 6,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಮೂರು ಕಾಲೇಜುಗಳ ಕಟ್ಟಡ ಅಲ್ಲದೆ ವಜ್ರಮಹೋತ್ಸವ ಭವನ, ವಿಶಾಲವಾದ ಕ್ರೀಡಾ ಮೈದಾನ, ಕಾಲೇಜು ವಿದ್ಯಾರ್ಥಿ ನಿಲಯ, ವಿದ್ಯಾರ್ಥಿನಿ ನಿಲಯಗಳೂ ಇದೇ ಸಹ್ಯಾದ್ರಿ ಆವರಣದಲ್ಲಿವೆ.

ಇವು ವಿಶ್ವವಿದ್ಯಾಲಯಕ್ಕೆ ಸೇರಿದವು. ಅಲ್ಲದೆ ಜೆ.ಡಿ ಕಚೇರಿ, ಟಿ.ವಿ ಟವರ್ ಕಟ್ಟಡ, ಎನ್‌ಸಿಸಿ ಕ್ವಾರ್‍ಟರ್ಸ್, ದೇವರಾಜ ಅರಸು ಹಿಂದುಳಿದ ವಿದ್ಯಾರ್ಥಿನಿಲಯ, ಮಸೀದಿ, ಚೌಡಮ್ಮ ದೇವಸ್ಥಾನ ಇವೆಲ್ಲವೂ ಸಹ್ಯಾದ್ರಿ ಆವರಣದಲ್ಲಿ ಇವೆ. ಕೇವಲ 100 ಎಕರೆ ಭೂಮಿಯಲ್ಲಿ ಇಷ್ಟೆಲ್ಲ ಕಟ್ಟಡಗಳಿರುವಾಗ ಕ್ರೀಡಾಹಬ್ ಎಲ್ಲಿ ನಿರ್ಮಾಣ ಮಾಡಲು ಸಾಧ್ಯ.

ನಿಜಕ್ಕೂ ಒಂದು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಹಬ್ ಎಂದರೆ ಅಲ್ಲಿ ಕ್ರಿಕೆಟ್ ಕ್ರೀಡಾಂಗಣ, ಹಾಕಿ, ಫುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕೊಕ್ಕೊ, ಈಜುಕೊಳ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಸತಿ ನಿಲಯ, ತರಬೇತಿದಾರರಿಗೆ ವಸತಿಗೃಹ ಇವೆಲ್ಲವೂ ಅಂತಾರಾಷ್ಟ್ರೀಯ ಮಟ್ಟದಲ್ಲೇ ನಿರ್ಮಾಣವಾಗಬೇಕಲ್ಲವೆ? ಇಷ್ಟೆಲ್ಲವೂ ಈಗ ಕೇಳಿರುವಂತೆ ಕೇವಲ 18 ಎಕರೆಯಲ್ಲಿ ನಿರ್ಮಾಣ ಮಾಡಲು ಸಾಧ್ಯವೆ? ಇಲ್ಲ ಅನ್ನುವುದಾದರೆ ಭವ್ಯಪರಂಪರೆಯ ಶಿಕ್ಷಣಕಾಶಿ ಸಹ್ಯಾದ್ರಿಯನ್ನು ಪೂರ್ಣ ಎತ್ತಿಸುವ ಉದ್ದೇಶವೆ?

ಮಾನ್ಯ ಸಂಸದರು ತಮ್ಮ ಪರಿಶ್ರಮದಿಂದ ಇಂತಹದೊಂದು ಅಪರೂಪದ ಯೋಜನೆಯನ್ನು ನಮ್ಮ ಜಿಲ್ಲೆಗೆ ತಂದಿರುವುದರ ಬಗ್ಗೆ ನಮಗೆ ಹೆಮ್ಮೆಯಿದೆ. ಅದನ್ನು ಅನುಷ್ಠಾನಗೊಳಿಸಲು ಆಯ್ಕೆಮಾಡಿಕೊಂಡ ಜಾಗ ಸೂಕ್ತವಲ್ಲ. ಸಕ್ಕರೆ ಕಾರ್ಖಾನೆಯ ಸಾವಿರಾರು ಎಕರೆ ಭೂಮಿ ಪಾಳು ಬಿದ್ದಿದೆ. ಮಾನ್ಯ ಮುಖ್ಯಮಂತ್ರಿಗಳ ಕನಸಿನ ಕೂಸಾದ ವಿಮಾನ ನಿಲ್ದಾಣಕ್ಕೂ ಅದು ಸಮೀಪವಿದೆ. ನಿಮ್ಮ ಶಕ್ತಿಗೆ ಈ ಜಾಗ ಪಡೆದುಕೊಳ್ಳುವುದು ಆಸಾಧ್ಯವೇನಲ್ಲ. ಆ ಕಡೆ ಪ್ರಯತ್ನಿಸುವುದು ಸೂಕ್ತ.

ಈಗಾಗಲೇ ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಹಾಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಸಂಘರ್ಷಕ್ಕೆ ಅವಕಾಶ ಮಾಡದೆ ಮಾನ್ಯ ಸಂಸದರು ತಕ್ಷಣ ಸೂಕ್ತ ಸ್ಥಳವನ್ನು ಆಯ್ಕೆಮಾಡಿಕೊಂಡು ಸಹ್ಯಾದ್ರಿ ಆವರಣದಲ್ಲಿ ಕ್ರೀಡಾಹಬ್ ಕಟ್ಟುವ ತೀರ್ಮಾನವನ್ನು ಬದಲಾಯಿಸಿಕೊಳ್ಳಬೇಕೆಂದು ನಗರದ ನಾಗರಿಕರು, ಪತ್ರಿಕಾವಲಯದ ಮಿತ್ರರು, ಹಿರಿಯ ವಿದ್ಯಾರ್ಥಿಗಳು, ಹಾಲಿ ವಿದ್ಯಾರ್ಥಿಗಳ ಕೋರಿಕೆ ಮತ್ತು ಆಗ್ರಹವಾಗಿದೆ.

ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಪಕರು ಮತ್ತು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...